ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಏಕದಿನ ಮಾದರಿಯ ಅತ್ಯಂತ ರೋಚಕ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ನಾಲ್ಕು ವಿಕೆಟ್ಗಳ ಜಯ ದಾಖಲಿಸುವ ಮೂಲಕ ರೋಹಿತ್ ಪಡೆ ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿತು
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ನ್ಯೂಜಿಲೆಂಡ್ ತಂಡದ ನಾಯಕ ಸ್ಯಾಂಟ್ನರ್ ಆಯ್ಕೆಯನ್ನು ಸಮರ್ಥಿಸುವ ಆಟವಾಡಿದ ಆರಂಭಿಕ ಆಟಗಾರರಾದ ರಚಿನ್ ರವೀಂದ್ರ (37) ಹಾಗೂ ವಿಲ್ ಯಂಗ್ (15) ರನ್ ಗಳಿಸಿ ಉತ್ತಮ ಆರಂಭ ನೀಡಿದರು.
ಮಾದ್ಯಮ ಕ್ರಮಾಂಕದ ಆಟಗಾರರಾದ ಮಿಚೆಲ್ (63), ಫಿಲಿಪ್ಸ್ (34) ಹಾಗೂ ಬ್ರೇಸ್ವೆಲ್ (53) ರನ್ ಪೇರಿಸಿ ತಂಡದ ಮೊತ್ತವನ್ನು 250 ಗಡಿ ದಾಟಿಸಿದರು, ಭಾರತದ ಪರವಾಗಿ ಕುಲದೀಪ್ ಯಾದವ್ ಹಾಗೂ ವರುಣ್ ಚಕ್ರವರ್ತಿ ತಲಾ ಎರಡು ವಿಕೆಟ್ ಕಬಳಿಸಿದರೆ ಶಮಿ ಹಾಗೂ ರವೀಂದ್ರ ಜಡೇಜಾ ಒಂದು ವಿಕೆಟ್ ಪಡೆದು ಮಿಂಚಿದರು.
ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ (76) ಹಾಗೂ ಆರಂಭಿಕ ಆಟಗಾರ ಶುಭ್ಮನ್ ಗಿಲ್ (31) ಶತಕದ ಜೊತೆಯಾಟದ ನೆರವಿನಿಂದ ಭಾರತ ತಂಡ ಉತ್ತಮ ಆರಂಭ ಪಡೆಯಿತು, ಗ್ಲೇನ್ ಫಿಲಿಪ್ಸ್ ಹಿಡಿದು ಅದ್ಭುತ ಕ್ಯಾಚ್ ಗಿಲ್ ಅನ್ನು ಪೆವಿಲಿಯನ್ ಗೆ ಕಳುಹಿಸಿತು.
ನಂತರ ಬಂದ ಕೋಹ್ಲಿ ಎಲ್ಬಿ ಬೆಲೆಗೆ ಬಿದ್ದು ನಿರಾಸೆ ಮೂಡಿಸಿದರು, ಆದರೆ ನಂತರ ಬಂದ ಮದ್ಯಮ ಕ್ರಮಾಂಕದ ಆಟಗಾರರಾದ ಶ್ರೇಯಸ್ ಅಯ್ಯರ್ (48), ಅಕ್ಷರ್ ಪಟೇಲ್ (29) ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕೆ.ಎಲ್ . ರಾಹುಲ್ (34) ರನ್ ನೆರವಿನಿಂದ ಟೀಂ ಇಂಡಿಯಾ ಗೆಲುವಿನ ಕೇಕೆ ಹಾಕಿದರು.
ಟೂರ್ನಿಯ ಉದ್ದಕ್ಕೂ ಉತ್ತಮ ಮೊತ್ತ ಕಲೆಹಾಕುವಲ್ಲಿ ಯಶಸ್ವಿಯಾಗಿದ್ದ ನ್ಯೂಜಿಲೆಂಡ್ ತಂಡದ ಆರಂಭಿಕ ಆಟಗಾರ ರಚಿನ್ ರವೀಂದ್ರ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರೆ, ಫೈನಲ್ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಗಳಿಸಿ ಗೆಲುವಿಗೆ ಪ್ರಮುಖ ಕಾರಣರಾದ ನಾಯಕ ರೋಹಿತ್ ಶರ್ಮಾ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.