ಐಸಿಸಿ ಚಾಂಪಿಯನ್ಸ್ ಟ್ರೋಫಿ: ಕೀವಿಸ್ ಕಿವಿ ಹಿಂಡಿ ಟ್ರೋಫಿಗೆ ಮುತ್ತಿಟ್ಟ ರೋಹಿತ್ ಪಡೆ

ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಏಕದಿನ ಮಾದರಿಯ ಅತ್ಯಂತ ರೋಚಕ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ನಾಲ್ಕು ವಿಕೆಟ್ಗಳ ಜಯ ದಾಖಲಿಸುವ ಮೂಲಕ ರೋಹಿತ್ ಪಡೆ ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿತು

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ನ್ಯೂಜಿಲೆಂಡ್ ತಂಡದ ನಾಯಕ ಸ್ಯಾಂಟ್ನರ್ ಆಯ್ಕೆಯನ್ನು ಸಮರ್ಥಿಸುವ ಆಟವಾಡಿದ ಆರಂಭಿಕ ಆಟಗಾರರಾದ ರಚಿನ್ ರವೀಂದ್ರ (37) ಹಾಗೂ ವಿಲ್ ಯಂಗ್ (15) ರನ್ ಗಳಿಸಿ ಉತ್ತಮ ಆರಂಭ ನೀಡಿದರು.

ಮಾದ್ಯಮ ಕ್ರಮಾಂಕದ ಆಟಗಾರರಾದ ಮಿಚೆಲ್ (63), ಫಿಲಿಪ್ಸ್ (34) ಹಾಗೂ ಬ್ರೇಸ್ವೆಲ್ (53) ರನ್ ಪೇರಿಸಿ ತಂಡದ ಮೊತ್ತವನ್ನು 250 ಗಡಿ ದಾಟಿಸಿದರು, ಭಾರತದ ಪರವಾಗಿ ಕುಲದೀಪ್ ಯಾದವ್ ಹಾಗೂ ವರುಣ್ ಚಕ್ರವರ್ತಿ ತಲಾ ಎರಡು ವಿಕೆಟ್ ಕಬಳಿಸಿದರೆ ಶಮಿ‌ ಹಾಗೂ ರವೀಂದ್ರ ಜಡೇಜಾ ಒಂದು ವಿಕೆಟ್ ಪಡೆದು ಮಿಂಚಿದರು.

ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ (76) ಹಾಗೂ ಆರಂಭಿಕ ಆಟಗಾರ ಶುಭ್ಮನ್ ಗಿಲ್ (31) ಶತಕದ ಜೊತೆಯಾಟದ ನೆರವಿನಿಂದ ಭಾರತ ತಂಡ ಉತ್ತಮ ಆರಂಭ ಪಡೆಯಿತು, ಗ್ಲೇನ್ ಫಿಲಿಪ್ಸ್ ಹಿಡಿದು ಅದ್ಭುತ ಕ್ಯಾಚ್ ಗಿಲ್ ಅನ್ನು ಪೆವಿಲಿಯನ್ ಗೆ ಕಳುಹಿಸಿತು.

ನಂತರ ಬಂದ ಕೋಹ್ಲಿ ಎಲ್ಬಿ ಬೆಲೆಗೆ ಬಿದ್ದು ನಿರಾಸೆ ಮೂಡಿಸಿದರು, ಆದರೆ ನಂತರ ಬಂದ ಮದ್ಯಮ ಕ್ರಮಾಂಕದ ಆಟಗಾರರಾದ ಶ್ರೇಯಸ್ ಅಯ್ಯರ್ (48), ಅಕ್ಷರ್ ಪಟೇಲ್ (29) ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕೆ.ಎಲ್ . ರಾಹುಲ್ (34) ರನ್ ನೆರವಿನಿಂದ ಟೀಂ ಇಂಡಿಯಾ ಗೆಲುವಿನ ಕೇಕೆ ಹಾಕಿದರು.

ಟೂರ್ನಿಯ ಉದ್ದಕ್ಕೂ ಉತ್ತಮ ಮೊತ್ತ ಕಲೆಹಾಕುವಲ್ಲಿ ಯಶಸ್ವಿಯಾಗಿದ್ದ ನ್ಯೂಜಿಲೆಂಡ್ ತಂಡದ ಆರಂಭಿಕ ಆಟಗಾರ ರಚಿನ್ ರವೀಂದ್ರ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರೆ, ಫೈನಲ್ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಗಳಿಸಿ ಗೆಲುವಿಗೆ ಪ್ರಮುಖ ಕಾರಣರಾದ ನಾಯಕ ರೋಹಿತ್ ಶರ್ಮಾ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

3 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

3 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

4 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

5 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

7 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

14 hours ago