ಐಸಿಸಿ ಚಾಂಪಿಯನ್ಸ್ ಟ್ರೋಫಿ: ಕೀವಿಸ್ ಕಿವಿ ಹಿಂಡಿ ಟ್ರೋಫಿಗೆ ಮುತ್ತಿಟ್ಟ ರೋಹಿತ್ ಪಡೆ

ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಏಕದಿನ ಮಾದರಿಯ ಅತ್ಯಂತ ರೋಚಕ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ನಾಲ್ಕು ವಿಕೆಟ್ಗಳ ಜಯ ದಾಖಲಿಸುವ ಮೂಲಕ ರೋಹಿತ್ ಪಡೆ ಚಾಂಪಿಯನ್ಸ್ ಪಟ್ಟವನ್ನು ಅಲಂಕರಿಸಿತು

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ನ್ಯೂಜಿಲೆಂಡ್ ತಂಡದ ನಾಯಕ ಸ್ಯಾಂಟ್ನರ್ ಆಯ್ಕೆಯನ್ನು ಸಮರ್ಥಿಸುವ ಆಟವಾಡಿದ ಆರಂಭಿಕ ಆಟಗಾರರಾದ ರಚಿನ್ ರವೀಂದ್ರ (37) ಹಾಗೂ ವಿಲ್ ಯಂಗ್ (15) ರನ್ ಗಳಿಸಿ ಉತ್ತಮ ಆರಂಭ ನೀಡಿದರು.

ಮಾದ್ಯಮ ಕ್ರಮಾಂಕದ ಆಟಗಾರರಾದ ಮಿಚೆಲ್ (63), ಫಿಲಿಪ್ಸ್ (34) ಹಾಗೂ ಬ್ರೇಸ್ವೆಲ್ (53) ರನ್ ಪೇರಿಸಿ ತಂಡದ ಮೊತ್ತವನ್ನು 250 ಗಡಿ ದಾಟಿಸಿದರು, ಭಾರತದ ಪರವಾಗಿ ಕುಲದೀಪ್ ಯಾದವ್ ಹಾಗೂ ವರುಣ್ ಚಕ್ರವರ್ತಿ ತಲಾ ಎರಡು ವಿಕೆಟ್ ಕಬಳಿಸಿದರೆ ಶಮಿ‌ ಹಾಗೂ ರವೀಂದ್ರ ಜಡೇಜಾ ಒಂದು ವಿಕೆಟ್ ಪಡೆದು ಮಿಂಚಿದರು.

ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ (76) ಹಾಗೂ ಆರಂಭಿಕ ಆಟಗಾರ ಶುಭ್ಮನ್ ಗಿಲ್ (31) ಶತಕದ ಜೊತೆಯಾಟದ ನೆರವಿನಿಂದ ಭಾರತ ತಂಡ ಉತ್ತಮ ಆರಂಭ ಪಡೆಯಿತು, ಗ್ಲೇನ್ ಫಿಲಿಪ್ಸ್ ಹಿಡಿದು ಅದ್ಭುತ ಕ್ಯಾಚ್ ಗಿಲ್ ಅನ್ನು ಪೆವಿಲಿಯನ್ ಗೆ ಕಳುಹಿಸಿತು.

ನಂತರ ಬಂದ ಕೋಹ್ಲಿ ಎಲ್ಬಿ ಬೆಲೆಗೆ ಬಿದ್ದು ನಿರಾಸೆ ಮೂಡಿಸಿದರು, ಆದರೆ ನಂತರ ಬಂದ ಮದ್ಯಮ ಕ್ರಮಾಂಕದ ಆಟಗಾರರಾದ ಶ್ರೇಯಸ್ ಅಯ್ಯರ್ (48), ಅಕ್ಷರ್ ಪಟೇಲ್ (29) ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕೆ.ಎಲ್ . ರಾಹುಲ್ (34) ರನ್ ನೆರವಿನಿಂದ ಟೀಂ ಇಂಡಿಯಾ ಗೆಲುವಿನ ಕೇಕೆ ಹಾಕಿದರು.

ಟೂರ್ನಿಯ ಉದ್ದಕ್ಕೂ ಉತ್ತಮ ಮೊತ್ತ ಕಲೆಹಾಕುವಲ್ಲಿ ಯಶಸ್ವಿಯಾಗಿದ್ದ ನ್ಯೂಜಿಲೆಂಡ್ ತಂಡದ ಆರಂಭಿಕ ಆಟಗಾರ ರಚಿನ್ ರವೀಂದ್ರ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರೆ, ಫೈನಲ್ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಗಳಿಸಿ ಗೆಲುವಿಗೆ ಪ್ರಮುಖ ಕಾರಣರಾದ ನಾಯಕ ರೋಹಿತ್ ಶರ್ಮಾ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

4 hours ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

16 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

16 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

19 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

20 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

1 day ago