ಐಸಿಸಿ ಚಾಂಪಿಯನ್ಸ್ ಟ್ರೋಫಿ: ಆಸೀಸ್ ವಿರುದ್ಧ ಗೆದ್ದು ಫೈನಲ್ ಗೆ ಲಗ್ಗೆ ಇಟ್ಟ ಭಾರತ

ವಿರಾಟ್ ಕೊಹ್ಲಿಯ ಆಕರ್ಷಕ ಅರ್ಧಶತಕ ಹಾಗೂ ಬೌಲರ್ ಗಳ ಸಂಘಟಿತ ಹೋರಾಟದ ಫಲವಾಗಿ ಪ್ರಬಲ ಆಸೀಸ್ ವಿರುದ್ಧ ಗೆದ್ದು ಟೀಂ ಇಂಡಿಯಾ ಫೈನಲ್ ಗೆ ಲಗ್ಗೆ ಇಟ್ಟಿದೆ.

ಕಳೆದ ವರ್ಷ ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಸೋಲಿಗೆ ಸೇಡು ತೀರಿಸಿಕೊಂಡ ರೋಹಿತ್ ಶರ್ಮಾ ಪಡೆ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿ ಅಂತಿಮ ಘಟ್ಟಕ್ಕೆ ತಲುಪಿದೆ.

ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವನ್ ಸ್ಮಿತ್ ಬ್ಯಾಟಿಂಗ್ ಆಯ್ದುಕೊಂಡರು ಆದರೆ ಆರಂಭಿಕ ಆಟಗಾರರಾದ ಕೂಪರ್ (೦) ಶೂನ್ಯಕ್ಕೆ ಪೆವಿಲಿಯನ್ ಗೆ ಮರಳಿದರು, ನಂತರ ಬಂದ ನಾಯಕ ಸ್ಟೀವನ್ ಸ್ಮಿತ್ (73), ಆರಂಭಿಕ ಆಟಗಾರ ಮ್ಯಾಥ್ಯೂ ಹೇಡ್ (39) , ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಲಬುಷನ್ಗೆ (29) ಹಾಗೂ ಕ್ಯಾರಿ (61) ರನ್ ಗಳ ಬಲದಿಂದ 264 ರನ್ ಗಳಿಸಿದರು.

ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ (28) ಬಿರುಸಿನ ಆರಂಭ ನೀಡಿದರು, ವಿರಾಟ್ ಕೊಹ್ಲಿ ಆಕರ್ಷಕ ಐದು ಬೌಂಡರಿ ನೆರವಿನಿಂದ (84), ಮಾದ್ಯಮ ಕ್ರಮಾಂಕದ ಆಟಗಾರರಾದ ಶ್ರೇಯಸ್ ಅಯ್ಯರ್ (45), ರಾಹುಲ್ (42), ಅಕ್ಷರ್ ಪಟೇಲ್ (27) ಹಾಗೂ ಹಾರ್ದಿಕ್ ಪಾಂಡ್ಯ ಆಕರ್ಷಕ ಮೂರು ಸಿಕ್ಸರ್ ನೆರವಿನಿಂದ (28) ತಂಡವನ್ನು ಗೆಲುವಿನ ದಡ ಸೇರಿಸಿದರು.

ಭಾರತದ ಪರವಾಗಿ ವೇಗದ ಬೌಲರ್ ಮೊಹಮದ್ ಶಮಿ ಮೂರು ವಿಕೆಟ್ ಪಡೆದರೆ ವರುಣ್ ಚಕ್ರವರ್ತಿ ಹಾಗೂ ರವೀಂದ್ರ ಜಡೇಜಾ ತಲಾ ಎರಡು ವಿಕೆಟ್ ಕಬಳಿಸಿದರು, ಆಕರ್ಷಕ ಅರ್ಧಶತಕ ಗಳಿಸಿ ಗೆಲುವಿಗೆ ಕಾರಣರಾದ ವಿರಾಟ್ ಕೊಹ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Share
Published by
Ramesh Babu

Recent Posts

ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ

ಬೆಂಗಳೂರು ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಕೇಂದ್ರದಲ್ಲಿ ನಡೆದ ಕರ್ನಾಟಕ ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ…

2 hours ago

ಪ್ರಥಮ್ ಜೀವ ಬೆದರಿಕೆ ಪ್ರಕರಣ: ವಿಚಾರಣೆ ಬಳಿಕ ರಕ್ಷಕ್ ಬುಲೆಟ್ ಫಸ್ಟ್ ರಿಯಾಕ್ಟ್

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್ ನ್ನು ರಕ್ಷಕ್ ಬುಲೆಟ್ ಗೆ ನೀಡಲಾಗುತ್ತು.…

12 hours ago

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣ: ವಿಚಾರಣೆಗೆ ಹಾಜರಾದ ರಕ್ಷಕ್ ಬುಲೆಟ್: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿಚಾರಣೆ

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಕ್ಷಕ್ ಬುಲೆಟ್ ಇಂದು ವಿಚಾರಣೆಗೆ ಹಾಜರಾಗಿದ್ದರು. ಇನ್ಸ್ ಪೆಕ್ಟರ್ ಸಾಧಿಕ್…

13 hours ago

ಒಳಮೀಸಲಾತಿಗಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಅರೆಬೆತ್ತಲೆ ಧರಣಿ

ಜನಸಂಖ್ಯೆ ಆಧಾರದ ಮೇಲೆ ಒಳ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿ ಇಂದಿಗೆ ಒಂದು ವರ್ಷ ಕಳೆದಿದೆ ಆದರೆ…

15 hours ago

ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಇಲ್ಲ- 10,165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ- ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ ಹಾಗಾಗಿ ರಸಗೊಬ್ಬರ ಕೊರತೆ…

16 hours ago

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಆರೋಪ ಕೇಸ್: ಅತ್ಯಾಚಾರ ಆರೋಪ ಸಾಬೀತು: ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ಕೋರ್ಟ್ ತೀರ್ಪು: ಶಿಕ್ಷೆಯ ಪ್ರಮಾಣ ನಾಳೆ ಪ್ರಕಟ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿದ್ದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಆರೋಪ ಸಾಬೀತಾಗಿದೆ. ಪ್ರಜ್ವಲ್ ರೇವಣ್ಣ ಅಪರಾಧಿ…

19 hours ago