ಐಸಿಸಿ ಚಾಂಪಿಯನ್ಸ್ ಟ್ರೋಫಿ: ಆಸೀಸ್ ವಿರುದ್ಧ ಗೆದ್ದು ಫೈನಲ್ ಗೆ ಲಗ್ಗೆ ಇಟ್ಟ ಭಾರತ

ವಿರಾಟ್ ಕೊಹ್ಲಿಯ ಆಕರ್ಷಕ ಅರ್ಧಶತಕ ಹಾಗೂ ಬೌಲರ್ ಗಳ ಸಂಘಟಿತ ಹೋರಾಟದ ಫಲವಾಗಿ ಪ್ರಬಲ ಆಸೀಸ್ ವಿರುದ್ಧ ಗೆದ್ದು ಟೀಂ ಇಂಡಿಯಾ ಫೈನಲ್ ಗೆ ಲಗ್ಗೆ ಇಟ್ಟಿದೆ.

ಕಳೆದ ವರ್ಷ ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಸೋಲಿಗೆ ಸೇಡು ತೀರಿಸಿಕೊಂಡ ರೋಹಿತ್ ಶರ್ಮಾ ಪಡೆ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿ ಅಂತಿಮ ಘಟ್ಟಕ್ಕೆ ತಲುಪಿದೆ.

ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವನ್ ಸ್ಮಿತ್ ಬ್ಯಾಟಿಂಗ್ ಆಯ್ದುಕೊಂಡರು ಆದರೆ ಆರಂಭಿಕ ಆಟಗಾರರಾದ ಕೂಪರ್ (೦) ಶೂನ್ಯಕ್ಕೆ ಪೆವಿಲಿಯನ್ ಗೆ ಮರಳಿದರು, ನಂತರ ಬಂದ ನಾಯಕ ಸ್ಟೀವನ್ ಸ್ಮಿತ್ (73), ಆರಂಭಿಕ ಆಟಗಾರ ಮ್ಯಾಥ್ಯೂ ಹೇಡ್ (39) , ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಲಬುಷನ್ಗೆ (29) ಹಾಗೂ ಕ್ಯಾರಿ (61) ರನ್ ಗಳ ಬಲದಿಂದ 264 ರನ್ ಗಳಿಸಿದರು.

ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ (28) ಬಿರುಸಿನ ಆರಂಭ ನೀಡಿದರು, ವಿರಾಟ್ ಕೊಹ್ಲಿ ಆಕರ್ಷಕ ಐದು ಬೌಂಡರಿ ನೆರವಿನಿಂದ (84), ಮಾದ್ಯಮ ಕ್ರಮಾಂಕದ ಆಟಗಾರರಾದ ಶ್ರೇಯಸ್ ಅಯ್ಯರ್ (45), ರಾಹುಲ್ (42), ಅಕ್ಷರ್ ಪಟೇಲ್ (27) ಹಾಗೂ ಹಾರ್ದಿಕ್ ಪಾಂಡ್ಯ ಆಕರ್ಷಕ ಮೂರು ಸಿಕ್ಸರ್ ನೆರವಿನಿಂದ (28) ತಂಡವನ್ನು ಗೆಲುವಿನ ದಡ ಸೇರಿಸಿದರು.

ಭಾರತದ ಪರವಾಗಿ ವೇಗದ ಬೌಲರ್ ಮೊಹಮದ್ ಶಮಿ ಮೂರು ವಿಕೆಟ್ ಪಡೆದರೆ ವರುಣ್ ಚಕ್ರವರ್ತಿ ಹಾಗೂ ರವೀಂದ್ರ ಜಡೇಜಾ ತಲಾ ಎರಡು ವಿಕೆಟ್ ಕಬಳಿಸಿದರು, ಆಕರ್ಷಕ ಅರ್ಧಶತಕ ಗಳಿಸಿ ಗೆಲುವಿಗೆ ಕಾರಣರಾದ ವಿರಾಟ್ ಕೊಹ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ……..

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…

1 hour ago

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

1 day ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago