ವಿರಾಟ್ ಕೊಹ್ಲಿಯ ಆಕರ್ಷಕ ಅರ್ಧಶತಕ ಹಾಗೂ ಬೌಲರ್ ಗಳ ಸಂಘಟಿತ ಹೋರಾಟದ ಫಲವಾಗಿ ಪ್ರಬಲ ಆಸೀಸ್ ವಿರುದ್ಧ ಗೆದ್ದು ಟೀಂ ಇಂಡಿಯಾ ಫೈನಲ್ ಗೆ ಲಗ್ಗೆ ಇಟ್ಟಿದೆ.
ಕಳೆದ ವರ್ಷ ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಸೋಲಿಗೆ ಸೇಡು ತೀರಿಸಿಕೊಂಡ ರೋಹಿತ್ ಶರ್ಮಾ ಪಡೆ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿ ಅಂತಿಮ ಘಟ್ಟಕ್ಕೆ ತಲುಪಿದೆ.
ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವನ್ ಸ್ಮಿತ್ ಬ್ಯಾಟಿಂಗ್ ಆಯ್ದುಕೊಂಡರು ಆದರೆ ಆರಂಭಿಕ ಆಟಗಾರರಾದ ಕೂಪರ್ (೦) ಶೂನ್ಯಕ್ಕೆ ಪೆವಿಲಿಯನ್ ಗೆ ಮರಳಿದರು, ನಂತರ ಬಂದ ನಾಯಕ ಸ್ಟೀವನ್ ಸ್ಮಿತ್ (73), ಆರಂಭಿಕ ಆಟಗಾರ ಮ್ಯಾಥ್ಯೂ ಹೇಡ್ (39) , ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಲಬುಷನ್ಗೆ (29) ಹಾಗೂ ಕ್ಯಾರಿ (61) ರನ್ ಗಳ ಬಲದಿಂದ 264 ರನ್ ಗಳಿಸಿದರು.
ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ (28) ಬಿರುಸಿನ ಆರಂಭ ನೀಡಿದರು, ವಿರಾಟ್ ಕೊಹ್ಲಿ ಆಕರ್ಷಕ ಐದು ಬೌಂಡರಿ ನೆರವಿನಿಂದ (84), ಮಾದ್ಯಮ ಕ್ರಮಾಂಕದ ಆಟಗಾರರಾದ ಶ್ರೇಯಸ್ ಅಯ್ಯರ್ (45), ರಾಹುಲ್ (42), ಅಕ್ಷರ್ ಪಟೇಲ್ (27) ಹಾಗೂ ಹಾರ್ದಿಕ್ ಪಾಂಡ್ಯ ಆಕರ್ಷಕ ಮೂರು ಸಿಕ್ಸರ್ ನೆರವಿನಿಂದ (28) ತಂಡವನ್ನು ಗೆಲುವಿನ ದಡ ಸೇರಿಸಿದರು.
ಭಾರತದ ಪರವಾಗಿ ವೇಗದ ಬೌಲರ್ ಮೊಹಮದ್ ಶಮಿ ಮೂರು ವಿಕೆಟ್ ಪಡೆದರೆ ವರುಣ್ ಚಕ್ರವರ್ತಿ ಹಾಗೂ ರವೀಂದ್ರ ಜಡೇಜಾ ತಲಾ ಎರಡು ವಿಕೆಟ್ ಕಬಳಿಸಿದರು, ಆಕರ್ಷಕ ಅರ್ಧಶತಕ ಗಳಿಸಿ ಗೆಲುವಿಗೆ ಕಾರಣರಾದ ವಿರಾಟ್ ಕೊಹ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…