ಐಸಿಸಿ ಚಾಂಪಿಯನ್ಸ್ ಟ್ರೋಫಿ: ಆಸೀಸ್ ವಿರುದ್ಧ ಗೆದ್ದು ಫೈನಲ್ ಗೆ ಲಗ್ಗೆ ಇಟ್ಟ ಭಾರತ

ವಿರಾಟ್ ಕೊಹ್ಲಿಯ ಆಕರ್ಷಕ ಅರ್ಧಶತಕ ಹಾಗೂ ಬೌಲರ್ ಗಳ ಸಂಘಟಿತ ಹೋರಾಟದ ಫಲವಾಗಿ ಪ್ರಬಲ ಆಸೀಸ್ ವಿರುದ್ಧ ಗೆದ್ದು ಟೀಂ ಇಂಡಿಯಾ ಫೈನಲ್ ಗೆ ಲಗ್ಗೆ ಇಟ್ಟಿದೆ.

ಕಳೆದ ವರ್ಷ ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಸೋಲಿಗೆ ಸೇಡು ತೀರಿಸಿಕೊಂಡ ರೋಹಿತ್ ಶರ್ಮಾ ಪಡೆ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿ ಅಂತಿಮ ಘಟ್ಟಕ್ಕೆ ತಲುಪಿದೆ.

ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವನ್ ಸ್ಮಿತ್ ಬ್ಯಾಟಿಂಗ್ ಆಯ್ದುಕೊಂಡರು ಆದರೆ ಆರಂಭಿಕ ಆಟಗಾರರಾದ ಕೂಪರ್ (೦) ಶೂನ್ಯಕ್ಕೆ ಪೆವಿಲಿಯನ್ ಗೆ ಮರಳಿದರು, ನಂತರ ಬಂದ ನಾಯಕ ಸ್ಟೀವನ್ ಸ್ಮಿತ್ (73), ಆರಂಭಿಕ ಆಟಗಾರ ಮ್ಯಾಥ್ಯೂ ಹೇಡ್ (39) , ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಲಬುಷನ್ಗೆ (29) ಹಾಗೂ ಕ್ಯಾರಿ (61) ರನ್ ಗಳ ಬಲದಿಂದ 264 ರನ್ ಗಳಿಸಿದರು.

ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ (28) ಬಿರುಸಿನ ಆರಂಭ ನೀಡಿದರು, ವಿರಾಟ್ ಕೊಹ್ಲಿ ಆಕರ್ಷಕ ಐದು ಬೌಂಡರಿ ನೆರವಿನಿಂದ (84), ಮಾದ್ಯಮ ಕ್ರಮಾಂಕದ ಆಟಗಾರರಾದ ಶ್ರೇಯಸ್ ಅಯ್ಯರ್ (45), ರಾಹುಲ್ (42), ಅಕ್ಷರ್ ಪಟೇಲ್ (27) ಹಾಗೂ ಹಾರ್ದಿಕ್ ಪಾಂಡ್ಯ ಆಕರ್ಷಕ ಮೂರು ಸಿಕ್ಸರ್ ನೆರವಿನಿಂದ (28) ತಂಡವನ್ನು ಗೆಲುವಿನ ದಡ ಸೇರಿಸಿದರು.

ಭಾರತದ ಪರವಾಗಿ ವೇಗದ ಬೌಲರ್ ಮೊಹಮದ್ ಶಮಿ ಮೂರು ವಿಕೆಟ್ ಪಡೆದರೆ ವರುಣ್ ಚಕ್ರವರ್ತಿ ಹಾಗೂ ರವೀಂದ್ರ ಜಡೇಜಾ ತಲಾ ಎರಡು ವಿಕೆಟ್ ಕಬಳಿಸಿದರು, ಆಕರ್ಷಕ ಅರ್ಧಶತಕ ಗಳಿಸಿ ಗೆಲುವಿಗೆ ಕಾರಣರಾದ ವಿರಾಟ್ ಕೊಹ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

3 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

10 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

23 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

1 day ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

1 day ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

1 day ago