ವಿರಾಟ್ ಕೊಹ್ಲಿಯ ಆಕರ್ಷಕ ಅರ್ಧಶತಕ ಹಾಗೂ ಬೌಲರ್ ಗಳ ಸಂಘಟಿತ ಹೋರಾಟದ ಫಲವಾಗಿ ಪ್ರಬಲ ಆಸೀಸ್ ವಿರುದ್ಧ ಗೆದ್ದು ಟೀಂ ಇಂಡಿಯಾ ಫೈನಲ್ ಗೆ ಲಗ್ಗೆ ಇಟ್ಟಿದೆ.
ಕಳೆದ ವರ್ಷ ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಸೋಲಿಗೆ ಸೇಡು ತೀರಿಸಿಕೊಂಡ ರೋಹಿತ್ ಶರ್ಮಾ ಪಡೆ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿ ಅಂತಿಮ ಘಟ್ಟಕ್ಕೆ ತಲುಪಿದೆ.
ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವನ್ ಸ್ಮಿತ್ ಬ್ಯಾಟಿಂಗ್ ಆಯ್ದುಕೊಂಡರು ಆದರೆ ಆರಂಭಿಕ ಆಟಗಾರರಾದ ಕೂಪರ್ (೦) ಶೂನ್ಯಕ್ಕೆ ಪೆವಿಲಿಯನ್ ಗೆ ಮರಳಿದರು, ನಂತರ ಬಂದ ನಾಯಕ ಸ್ಟೀವನ್ ಸ್ಮಿತ್ (73), ಆರಂಭಿಕ ಆಟಗಾರ ಮ್ಯಾಥ್ಯೂ ಹೇಡ್ (39) , ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಲಬುಷನ್ಗೆ (29) ಹಾಗೂ ಕ್ಯಾರಿ (61) ರನ್ ಗಳ ಬಲದಿಂದ 264 ರನ್ ಗಳಿಸಿದರು.
ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ (28) ಬಿರುಸಿನ ಆರಂಭ ನೀಡಿದರು, ವಿರಾಟ್ ಕೊಹ್ಲಿ ಆಕರ್ಷಕ ಐದು ಬೌಂಡರಿ ನೆರವಿನಿಂದ (84), ಮಾದ್ಯಮ ಕ್ರಮಾಂಕದ ಆಟಗಾರರಾದ ಶ್ರೇಯಸ್ ಅಯ್ಯರ್ (45), ರಾಹುಲ್ (42), ಅಕ್ಷರ್ ಪಟೇಲ್ (27) ಹಾಗೂ ಹಾರ್ದಿಕ್ ಪಾಂಡ್ಯ ಆಕರ್ಷಕ ಮೂರು ಸಿಕ್ಸರ್ ನೆರವಿನಿಂದ (28) ತಂಡವನ್ನು ಗೆಲುವಿನ ದಡ ಸೇರಿಸಿದರು.
ಭಾರತದ ಪರವಾಗಿ ವೇಗದ ಬೌಲರ್ ಮೊಹಮದ್ ಶಮಿ ಮೂರು ವಿಕೆಟ್ ಪಡೆದರೆ ವರುಣ್ ಚಕ್ರವರ್ತಿ ಹಾಗೂ ರವೀಂದ್ರ ಜಡೇಜಾ ತಲಾ ಎರಡು ವಿಕೆಟ್ ಕಬಳಿಸಿದರು, ಆಕರ್ಷಕ ಅರ್ಧಶತಕ ಗಳಿಸಿ ಗೆಲುವಿಗೆ ಕಾರಣರಾದ ವಿರಾಟ್ ಕೊಹ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…