ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಭಾರತ 61 ರನ್ ಗಳಿಂದ ಬಗ್ಗುಬಡಿದೆ.
ಇಶಾನ್ ಕಿಶಾನ್ ಅವರ ಅಬ್ಬರ ಬ್ಯಾಟಿಂಗ್ ಹಾಗೂ ಸ್ಪಿನ್ನರ್ ಗಳ ಮಾರಕ ಬೌಲಿಂಗ್ ದಾಳಿಯಿಂದ ಟ್ರಿಕಿ ಪಿಚ್ ನಲ್ಲೂ ಪಾಕಿಸ್ತಾನವನ್ನು ಸೋಲಿಸುವ ಮೂಲಕ ಭಾರತ, ದೇಶದ ಜನತೆಗೆ ಮಹಾಶಿವರಾತ್ರಿ ಗಿಫ್ಟ್ ನೀಡಿದ್ದು, ದೇಶಾದ್ಯಂತ ಕ್ರಿಕೆಟ್ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಇಳಿದ ಭಾರತದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಡಕ್ ಔಟ್ ಆದರು. ಪಾಕಿಸ್ತಾನ ನಾಯಕ ಸಲ್ಮಾನ್ ಆಘಾ ಅವರ ಮೊದಲ ಓವರ್ ನ ಆರನೇ ಎಸೆತದಲ್ಲಿ ಮಾಸ್ಟರ್ಸ್ಟ್ರೋಕ್ ಎಂದು ಸಾಬೀತಾಯಿತು. ಅಭಿಷೇಕ್ ಶರ್ಮಾ ಇಂದು ದೊಡ್ಡ ಇನ್ನಿಂಗ್ಸ್ ಆಡುತ್ತಾರೆಂದು ನಿರೀಕ್ಷಿಸಲಾಗಿತ್ತು. ಆದರೆ ಡಕೌಟ್ ಆಗುವ ಮೂಲಕ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದರು.
ಪಾಕಿಸ್ತಾನ ಬೌಲರ್ ಗಳ ಬೆವರಿಳಿಸಿದ ಇಶಾನ್ ಕಿಶಾನ್ 27 ಎಸೆತಗಳಲ್ಲಿ ವೇಗವಾಗಿ ಅರ್ಧ ಶತಕ ಬಾರಿಸಿದರು. 40 ಎಸೆತಗಳನ್ನು ಎದುರಿಸಿದ ಇಶಾನ್, ಮೂರು ಸಿಕ್ಸರ್, 10 ಬೌಂಡರಿಗಳೊಂದಿಗೆ 77 ರನ್ ಗಳಿಸಿದರು.
ಉಳಿದಂತೆ ತಿಲಕ್ ವರ್ಮಾ, 25, ನಾಯಕ ಸೂರ್ಯ ಕುಮಾರ್ ಯಾದವ್ 32, ಶಿವಂ ದುಬೆ 27, ರಿಂಕ್ ಸಿಂಗ್ ಔಟಾಗದೇ 11 ರನ್ ಗಳಿಸಿದರು. ಇಶಾನ್ ಕಿಶಾನ್ ಅವರ 77 ರನ್ ಗಳ ನೆರವಿನಿಂದ ಟೀಂ ಇಂಡಿಯಾ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 175 ರನ್ ಗಳಿಸಿತು.
ಪಾಕಿಸ್ತಾನ ಪರ ಸೈಮ್ ಅಯುಬ್ 3 ವಿಕೆಟ್ ಪಡೆದರೆ, ಸಲ್ಮಾನ್ ಆಘಾ, ಶಹೀನ್ ಶಾ ಆಫ್ರಿದಿ, ಉಶ್ಮನ್ ತಾರಿಖ್ ತಲಾ ಒಂದು ವಿಕೆಟ್ ಪಡೆದರು. ಭಾರತ ನೀಡಿದ 176 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಪಾಕಿಸ್ತಾನ 18 ಓವರ್ ಗಳಲ್ಲಿ 114 ರನ್ ಗಳಿಸುವಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಸೋಲಿಗೆ ಶರಣಾಯಿತು.
ಭಾರತದ ಪರ ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬೂಮ್ರಾ, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ ತಲಾ 2 ವಿಕೆಟ್ ಪಡೆದರು. ಕುಲದೀಪ್ ಯಾದವ್ ಹಾಗೂ ತಿಲಕ್ ವರ್ಮಾ ತಲಾ ಒಂದು ವಿಕೆಟ್ ಪಡೆದರು. ಇನ್ನೂ ಭಾರತದ ಪರ ಆಕರ್ಷಕ 77 ರನ್ ಗಳಿಸಿ ತಂಡ ಗೆಲುವಿನಲ್ಲಿ ಪ್ರಮುಖ ಕೊಡುಗೆ ನೀಡಿದ ಇಶಾನ್ ಕಿಶಾನ್ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.
ಅಧ್ಯಾತ್ಮ ಮತ್ತು ಸದ್ಗುರು ಜಗ್ಗಿ ವಾಸುದೇವ್........ ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಜನಪ್ರಿಯರಾದ ಅಧ್ಯಾತ್ಮ ಗುರು. ಅಧ್ಯಾತ್ಮಿಕ ಚಿಂತಕರಲ್ಲಿ ವಿವಿಧ ರೀತಿಯ…
ಫೆ.26ರಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ ಎಂದು ದೇವಾಲಯದ ಪ್ರಧಾನ ಅರ್ಚಕ…
ನೆಲಮಂಗಲದ ಜಿಂದಾಲ್ ಸಮೀಪ ನಡೆದ ಭೀಕರ ಅಪಘಾತದಲ್ಲಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ದುರ್ಮರಣಕ್ಕೀಡಾಗಿದ್ದಾರೆ. ಕಳೆದ ರಾತ್ರಿ 11 ಗಂಟೆಯ ಸುಮಾರಿಗೆ…
ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಶನಿವಾರದಂದು ನಡೆದ ಸೈನ್ಸ್ ಫೆಸ್ಟ್ ನಂತರ ಮಕ್ಕಳಿಗೆ ಮತ್ತು ಪೋಷಕರಿಗೆ ಮನರಂಜನೆ ಉಣಬಡಿಸುವ ಪ್ರಯುಕ್ತ ಮಧ್ಯಾಹ್ನ…
ನೆಲಮಂಗಲದ ಜಿಂದಾಲ್ ಸಮೀಪ ನಡೆದ ಭೀಕರ ಅಪಘಾತದಲ್ಲಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ದುರ್ಮರಣಕ್ಕೀಡಾಗಿದ್ದಾರೆ. ಕಳೆದ ರಾತ್ರಿ 12 ಗಂಟೆಯ ಸುಮಾರಿಗೆ…
ದೊಡ್ಡಬಳ್ಳಾಪುರ: ಶಿವರಾತ್ರಿ ಹಬ್ಬಕ್ಕೆಂದು ಮನೆಯ ಮುಂದೆ ರಂಗೋಲಿ ಬಿಡಿಸುತ್ತಿದ್ದ ಮಹಿಳೆಯ ಚಿನ್ನದ ಮಾಂಗಲ್ಯ ಸರ ಕಿತ್ತುಕೊಂಡು, ಸರ ಕಳ್ಳರು ಎಸ್ಕೇಪ್…