ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಭಾರತ 61 ರನ್ ಗಳಿಂದ ಬಗ್ಗುಬಡಿದೆ.
ಇಶಾನ್ ಕಿಶಾನ್ ಅವರ ಅಬ್ಬರ ಬ್ಯಾಟಿಂಗ್ ಹಾಗೂ ಸ್ಪಿನ್ನರ್ ಗಳ ಮಾರಕ ಬೌಲಿಂಗ್ ದಾಳಿಯಿಂದ ಟ್ರಿಕಿ ಪಿಚ್ ನಲ್ಲೂ ಪಾಕಿಸ್ತಾನವನ್ನು ಸೋಲಿಸುವ ಮೂಲಕ ಭಾರತ, ದೇಶದ ಜನತೆಗೆ ಮಹಾಶಿವರಾತ್ರಿ ಗಿಫ್ಟ್ ನೀಡಿದ್ದು, ದೇಶಾದ್ಯಂತ ಕ್ರಿಕೆಟ್ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಇಳಿದ ಭಾರತದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಡಕ್ ಔಟ್ ಆದರು. ಪಾಕಿಸ್ತಾನ ನಾಯಕ ಸಲ್ಮಾನ್ ಆಘಾ ಅವರ ಮೊದಲ ಓವರ್ ನ ಆರನೇ ಎಸೆತದಲ್ಲಿ ಮಾಸ್ಟರ್ಸ್ಟ್ರೋಕ್ ಎಂದು ಸಾಬೀತಾಯಿತು. ಅಭಿಷೇಕ್ ಶರ್ಮಾ ಇಂದು ದೊಡ್ಡ ಇನ್ನಿಂಗ್ಸ್ ಆಡುತ್ತಾರೆಂದು ನಿರೀಕ್ಷಿಸಲಾಗಿತ್ತು. ಆದರೆ ಡಕೌಟ್ ಆಗುವ ಮೂಲಕ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದರು.
ಪಾಕಿಸ್ತಾನ ಬೌಲರ್ ಗಳ ಬೆವರಿಳಿಸಿದ ಇಶಾನ್ ಕಿಶಾನ್ 27 ಎಸೆತಗಳಲ್ಲಿ ವೇಗವಾಗಿ ಅರ್ಧ ಶತಕ ಬಾರಿಸಿದರು. 40 ಎಸೆತಗಳನ್ನು ಎದುರಿಸಿದ ಇಶಾನ್, ಮೂರು ಸಿಕ್ಸರ್, 10 ಬೌಂಡರಿಗಳೊಂದಿಗೆ 77 ರನ್ ಗಳಿಸಿದರು.
ಉಳಿದಂತೆ ತಿಲಕ್ ವರ್ಮಾ, 25, ನಾಯಕ ಸೂರ್ಯ ಕುಮಾರ್ ಯಾದವ್ 32, ಶಿವಂ ದುಬೆ 27, ರಿಂಕ್ ಸಿಂಗ್ ಔಟಾಗದೇ 11 ರನ್ ಗಳಿಸಿದರು. ಇಶಾನ್ ಕಿಶಾನ್ ಅವರ 77 ರನ್ ಗಳ ನೆರವಿನಿಂದ ಟೀಂ ಇಂಡಿಯಾ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 175 ರನ್ ಗಳಿಸಿತು.
ಪಾಕಿಸ್ತಾನ ಪರ ಸೈಮ್ ಅಯುಬ್ 3 ವಿಕೆಟ್ ಪಡೆದರೆ, ಸಲ್ಮಾನ್ ಆಘಾ, ಶಹೀನ್ ಶಾ ಆಫ್ರಿದಿ, ಉಶ್ಮನ್ ತಾರಿಖ್ ತಲಾ ಒಂದು ವಿಕೆಟ್ ಪಡೆದರು. ಭಾರತ ನೀಡಿದ 176 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಪಾಕಿಸ್ತಾನ 18 ಓವರ್ ಗಳಲ್ಲಿ 114 ರನ್ ಗಳಿಸುವಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಸೋಲಿಗೆ ಶರಣಾಯಿತು.
ಭಾರತದ ಪರ ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬೂಮ್ರಾ, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ ತಲಾ 2 ವಿಕೆಟ್ ಪಡೆದರು. ಕುಲದೀಪ್ ಯಾದವ್ ಹಾಗೂ ತಿಲಕ್ ವರ್ಮಾ ತಲಾ ಒಂದು ವಿಕೆಟ್ ಪಡೆದರು. ಇನ್ನೂ ಭಾರತದ ಪರ ಆಕರ್ಷಕ 77 ರನ್ ಗಳಿಸಿ ತಂಡ ಗೆಲುವಿನಲ್ಲಿ ಪ್ರಮುಖ ಕೊಡುಗೆ ನೀಡಿದ ಇಶಾನ್ ಕಿಶಾನ್ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…