ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಭಾರತ 61 ರನ್ ಗಳಿಂದ ಬಗ್ಗುಬಡಿದೆ.
ಇಶಾನ್ ಕಿಶಾನ್ ಅವರ ಅಬ್ಬರ ಬ್ಯಾಟಿಂಗ್ ಹಾಗೂ ಸ್ಪಿನ್ನರ್ ಗಳ ಮಾರಕ ಬೌಲಿಂಗ್ ದಾಳಿಯಿಂದ ಟ್ರಿಕಿ ಪಿಚ್ ನಲ್ಲೂ ಪಾಕಿಸ್ತಾನವನ್ನು ಸೋಲಿಸುವ ಮೂಲಕ ಭಾರತ, ದೇಶದ ಜನತೆಗೆ ಮಹಾಶಿವರಾತ್ರಿ ಗಿಫ್ಟ್ ನೀಡಿದ್ದು, ದೇಶಾದ್ಯಂತ ಕ್ರಿಕೆಟ್ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಇಳಿದ ಭಾರತದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಡಕ್ ಔಟ್ ಆದರು. ಪಾಕಿಸ್ತಾನ ನಾಯಕ ಸಲ್ಮಾನ್ ಆಘಾ ಅವರ ಮೊದಲ ಓವರ್ ನ ಆರನೇ ಎಸೆತದಲ್ಲಿ ಮಾಸ್ಟರ್ಸ್ಟ್ರೋಕ್ ಎಂದು ಸಾಬೀತಾಯಿತು. ಅಭಿಷೇಕ್ ಶರ್ಮಾ ಇಂದು ದೊಡ್ಡ ಇನ್ನಿಂಗ್ಸ್ ಆಡುತ್ತಾರೆಂದು ನಿರೀಕ್ಷಿಸಲಾಗಿತ್ತು. ಆದರೆ ಡಕೌಟ್ ಆಗುವ ಮೂಲಕ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದರು.
ಪಾಕಿಸ್ತಾನ ಬೌಲರ್ ಗಳ ಬೆವರಿಳಿಸಿದ ಇಶಾನ್ ಕಿಶಾನ್ 27 ಎಸೆತಗಳಲ್ಲಿ ವೇಗವಾಗಿ ಅರ್ಧ ಶತಕ ಬಾರಿಸಿದರು. 40 ಎಸೆತಗಳನ್ನು ಎದುರಿಸಿದ ಇಶಾನ್, ಮೂರು ಸಿಕ್ಸರ್, 10 ಬೌಂಡರಿಗಳೊಂದಿಗೆ 77 ರನ್ ಗಳಿಸಿದರು.
ಉಳಿದಂತೆ ತಿಲಕ್ ವರ್ಮಾ, 25, ನಾಯಕ ಸೂರ್ಯ ಕುಮಾರ್ ಯಾದವ್ 32, ಶಿವಂ ದುಬೆ 27, ರಿಂಕ್ ಸಿಂಗ್ ಔಟಾಗದೇ 11 ರನ್ ಗಳಿಸಿದರು. ಇಶಾನ್ ಕಿಶಾನ್ ಅವರ 77 ರನ್ ಗಳ ನೆರವಿನಿಂದ ಟೀಂ ಇಂಡಿಯಾ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 175 ರನ್ ಗಳಿಸಿತು.
ಪಾಕಿಸ್ತಾನ ಪರ ಸೈಮ್ ಅಯುಬ್ 3 ವಿಕೆಟ್ ಪಡೆದರೆ, ಸಲ್ಮಾನ್ ಆಘಾ, ಶಹೀನ್ ಶಾ ಆಫ್ರಿದಿ, ಉಶ್ಮನ್ ತಾರಿಖ್ ತಲಾ ಒಂದು ವಿಕೆಟ್ ಪಡೆದರು. ಭಾರತ ನೀಡಿದ 176 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಪಾಕಿಸ್ತಾನ 18 ಓವರ್ ಗಳಲ್ಲಿ 114 ರನ್ ಗಳಿಸುವಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಸೋಲಿಗೆ ಶರಣಾಯಿತು.
ಭಾರತದ ಪರ ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬೂಮ್ರಾ, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ ತಲಾ 2 ವಿಕೆಟ್ ಪಡೆದರು. ಕುಲದೀಪ್ ಯಾದವ್ ಹಾಗೂ ತಿಲಕ್ ವರ್ಮಾ ತಲಾ ಒಂದು ವಿಕೆಟ್ ಪಡೆದರು. ಇನ್ನೂ ಭಾರತದ ಪರ ಆಕರ್ಷಕ 77 ರನ್ ಗಳಿಸಿ ತಂಡ ಗೆಲುವಿನಲ್ಲಿ ಪ್ರಮುಖ ಕೊಡುಗೆ ನೀಡಿದ ಇಶಾನ್ ಕಿಶಾನ್ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.
ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…
ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…
ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…