ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಭಾರತ 61 ರನ್ ಗಳಿಂದ ಬಗ್ಗುಬಡಿದೆ.
ಇಶಾನ್ ಕಿಶಾನ್ ಅವರ ಅಬ್ಬರ ಬ್ಯಾಟಿಂಗ್ ಹಾಗೂ ಸ್ಪಿನ್ನರ್ ಗಳ ಮಾರಕ ಬೌಲಿಂಗ್ ದಾಳಿಯಿಂದ ಟ್ರಿಕಿ ಪಿಚ್ ನಲ್ಲೂ ಪಾಕಿಸ್ತಾನವನ್ನು ಸೋಲಿಸುವ ಮೂಲಕ ಭಾರತ, ದೇಶದ ಜನತೆಗೆ ಮಹಾಶಿವರಾತ್ರಿ ಗಿಫ್ಟ್ ನೀಡಿದ್ದು, ದೇಶಾದ್ಯಂತ ಕ್ರಿಕೆಟ್ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಇಳಿದ ಭಾರತದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಡಕ್ ಔಟ್ ಆದರು. ಪಾಕಿಸ್ತಾನ ನಾಯಕ ಸಲ್ಮಾನ್ ಆಘಾ ಅವರ ಮೊದಲ ಓವರ್ ನ ಆರನೇ ಎಸೆತದಲ್ಲಿ ಮಾಸ್ಟರ್ಸ್ಟ್ರೋಕ್ ಎಂದು ಸಾಬೀತಾಯಿತು. ಅಭಿಷೇಕ್ ಶರ್ಮಾ ಇಂದು ದೊಡ್ಡ ಇನ್ನಿಂಗ್ಸ್ ಆಡುತ್ತಾರೆಂದು ನಿರೀಕ್ಷಿಸಲಾಗಿತ್ತು. ಆದರೆ ಡಕೌಟ್ ಆಗುವ ಮೂಲಕ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದರು.
ಪಾಕಿಸ್ತಾನ ಬೌಲರ್ ಗಳ ಬೆವರಿಳಿಸಿದ ಇಶಾನ್ ಕಿಶಾನ್ 27 ಎಸೆತಗಳಲ್ಲಿ ವೇಗವಾಗಿ ಅರ್ಧ ಶತಕ ಬಾರಿಸಿದರು. 40 ಎಸೆತಗಳನ್ನು ಎದುರಿಸಿದ ಇಶಾನ್, ಮೂರು ಸಿಕ್ಸರ್, 10 ಬೌಂಡರಿಗಳೊಂದಿಗೆ 77 ರನ್ ಗಳಿಸಿದರು.
ಉಳಿದಂತೆ ತಿಲಕ್ ವರ್ಮಾ, 25, ನಾಯಕ ಸೂರ್ಯ ಕುಮಾರ್ ಯಾದವ್ 32, ಶಿವಂ ದುಬೆ 27, ರಿಂಕ್ ಸಿಂಗ್ ಔಟಾಗದೇ 11 ರನ್ ಗಳಿಸಿದರು. ಇಶಾನ್ ಕಿಶಾನ್ ಅವರ 77 ರನ್ ಗಳ ನೆರವಿನಿಂದ ಟೀಂ ಇಂಡಿಯಾ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 175 ರನ್ ಗಳಿಸಿತು.
ಪಾಕಿಸ್ತಾನ ಪರ ಸೈಮ್ ಅಯುಬ್ 3 ವಿಕೆಟ್ ಪಡೆದರೆ, ಸಲ್ಮಾನ್ ಆಘಾ, ಶಹೀನ್ ಶಾ ಆಫ್ರಿದಿ, ಉಶ್ಮನ್ ತಾರಿಖ್ ತಲಾ ಒಂದು ವಿಕೆಟ್ ಪಡೆದರು. ಭಾರತ ನೀಡಿದ 176 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಪಾಕಿಸ್ತಾನ 18 ಓವರ್ ಗಳಲ್ಲಿ 114 ರನ್ ಗಳಿಸುವಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಸೋಲಿಗೆ ಶರಣಾಯಿತು.
ಭಾರತದ ಪರ ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬೂಮ್ರಾ, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ ತಲಾ 2 ವಿಕೆಟ್ ಪಡೆದರು. ಕುಲದೀಪ್ ಯಾದವ್ ಹಾಗೂ ತಿಲಕ್ ವರ್ಮಾ ತಲಾ ಒಂದು ವಿಕೆಟ್ ಪಡೆದರು. ಇನ್ನೂ ಭಾರತದ ಪರ ಆಕರ್ಷಕ 77 ರನ್ ಗಳಿಸಿ ತಂಡ ಗೆಲುವಿನಲ್ಲಿ ಪ್ರಮುಖ ಕೊಡುಗೆ ನೀಡಿದ ಇಶಾನ್ ಕಿಶಾನ್ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…