ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಭಾರತ 61 ರನ್ ಗಳಿಂದ ಬಗ್ಗುಬಡಿದೆ.
ಇಶಾನ್ ಕಿಶಾನ್ ಅವರ ಅಬ್ಬರ ಬ್ಯಾಟಿಂಗ್ ಹಾಗೂ ಸ್ಪಿನ್ನರ್ ಗಳ ಮಾರಕ ಬೌಲಿಂಗ್ ದಾಳಿಯಿಂದ ಟ್ರಿಕಿ ಪಿಚ್ ನಲ್ಲೂ ಪಾಕಿಸ್ತಾನವನ್ನು ಸೋಲಿಸುವ ಮೂಲಕ ಭಾರತ, ದೇಶದ ಜನತೆಗೆ ಮಹಾಶಿವರಾತ್ರಿ ಗಿಫ್ಟ್ ನೀಡಿದ್ದು, ದೇಶಾದ್ಯಂತ ಕ್ರಿಕೆಟ್ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಇಳಿದ ಭಾರತದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ಡಕ್ ಔಟ್ ಆದರು. ಪಾಕಿಸ್ತಾನ ನಾಯಕ ಸಲ್ಮಾನ್ ಆಘಾ ಅವರ ಮೊದಲ ಓವರ್ ನ ಆರನೇ ಎಸೆತದಲ್ಲಿ ಮಾಸ್ಟರ್ಸ್ಟ್ರೋಕ್ ಎಂದು ಸಾಬೀತಾಯಿತು. ಅಭಿಷೇಕ್ ಶರ್ಮಾ ಇಂದು ದೊಡ್ಡ ಇನ್ನಿಂಗ್ಸ್ ಆಡುತ್ತಾರೆಂದು ನಿರೀಕ್ಷಿಸಲಾಗಿತ್ತು. ಆದರೆ ಡಕೌಟ್ ಆಗುವ ಮೂಲಕ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದರು.
ಪಾಕಿಸ್ತಾನ ಬೌಲರ್ ಗಳ ಬೆವರಿಳಿಸಿದ ಇಶಾನ್ ಕಿಶಾನ್ 27 ಎಸೆತಗಳಲ್ಲಿ ವೇಗವಾಗಿ ಅರ್ಧ ಶತಕ ಬಾರಿಸಿದರು. 40 ಎಸೆತಗಳನ್ನು ಎದುರಿಸಿದ ಇಶಾನ್, ಮೂರು ಸಿಕ್ಸರ್, 10 ಬೌಂಡರಿಗಳೊಂದಿಗೆ 77 ರನ್ ಗಳಿಸಿದರು.
ಉಳಿದಂತೆ ತಿಲಕ್ ವರ್ಮಾ, 25, ನಾಯಕ ಸೂರ್ಯ ಕುಮಾರ್ ಯಾದವ್ 32, ಶಿವಂ ದುಬೆ 27, ರಿಂಕ್ ಸಿಂಗ್ ಔಟಾಗದೇ 11 ರನ್ ಗಳಿಸಿದರು. ಇಶಾನ್ ಕಿಶಾನ್ ಅವರ 77 ರನ್ ಗಳ ನೆರವಿನಿಂದ ಟೀಂ ಇಂಡಿಯಾ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 175 ರನ್ ಗಳಿಸಿತು.
ಪಾಕಿಸ್ತಾನ ಪರ ಸೈಮ್ ಅಯುಬ್ 3 ವಿಕೆಟ್ ಪಡೆದರೆ, ಸಲ್ಮಾನ್ ಆಘಾ, ಶಹೀನ್ ಶಾ ಆಫ್ರಿದಿ, ಉಶ್ಮನ್ ತಾರಿಖ್ ತಲಾ ಒಂದು ವಿಕೆಟ್ ಪಡೆದರು. ಭಾರತ ನೀಡಿದ 176 ರನ್ ಗಳ ಗೆಲುವಿನ ಗುರಿ ಬೆನ್ನಟ್ಟಿದ್ದ ಪಾಕಿಸ್ತಾನ 18 ಓವರ್ ಗಳಲ್ಲಿ 114 ರನ್ ಗಳಿಸುವಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಸೋಲಿಗೆ ಶರಣಾಯಿತು.
ಭಾರತದ ಪರ ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬೂಮ್ರಾ, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ ತಲಾ 2 ವಿಕೆಟ್ ಪಡೆದರು. ಕುಲದೀಪ್ ಯಾದವ್ ಹಾಗೂ ತಿಲಕ್ ವರ್ಮಾ ತಲಾ ಒಂದು ವಿಕೆಟ್ ಪಡೆದರು. ಇನ್ನೂ ಭಾರತದ ಪರ ಆಕರ್ಷಕ 77 ರನ್ ಗಳಿಸಿ ತಂಡ ಗೆಲುವಿನಲ್ಲಿ ಪ್ರಮುಖ ಕೊಡುಗೆ ನೀಡಿದ ಇಶಾನ್ ಕಿಶಾನ್ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…