ಐಸ್ ಕ್ರೀಮ್ ತಯಾರಿಕಾ ಘಟಕದಲ್ಲಿ 1.75 ಲಕ್ಷ ಮೌಲ್ಯದ ಐಸ್ ಕ್ರೀಮ್ ಉತ್ಪಾದಕ ಪದಾರ್ಥಗಳ ಕಳವು; 2 ತಿಂಗಳಿಂದ ಕಳವು ಮಾಡುತ್ತಿದ್ದ ಫ್ಯಾಕ್ಟರಿ ಸಿಬ್ಬಂದಿ

ಐಸ್ ಕ್ರೀಮ್ ಫ್ಯಾಕ್ಟರಿಯಲ್ಲಿ ಸಿಬ್ಬಂದಿಯೇ ಐಸ್ ಕ್ರಿಮ್ ತಯಾರಿಕೆಗೆ ಬೇಕಾದ ಪದಾರ್ಥಗಳ ಕಳವು ಮಾಡಿದ್ದಾರೆ, 2 ತಿಂಗಳಿಂದ ನಿರಂತರವಾಗಿ ಕಳವು ಮಾಡಿದ್ದ ಅವರು ಸುಮಾರು 1.75 ಲಕ್ಷ ಪದಾರ್ಥಗಳನ್ನ ಕದ್ದು ತಾವು ವಾಸವಾಗಿದ್ದ ರೂಮ್ ನಲ್ಲಿ ಇಟ್ಟಿದ್ದರು, ಘಟನೆ ನಂತರ ಆರೋಪಿಗಳ ಪರಾರಿಯಾಗಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ಅಪೆರಲ್ಸ್ ಪಾರ್ಕ್ ನಲ್ಲಿರುವ ಶ್ರೀವಷಿಷ್ಟ ಟ್ರೇಡರ್ಸ್ ಫ್ಯಾಕ್ಟರಿಯಲ್ಲಿ ಘಟನೆ ನಡೆದಿದೆ, ರಮೇಶ್ ಜಮನಾ ಫ್ಯಾಕ್ಟರಿ ಮಾಲೀಕರಾಗಿದ್ದು, ಫ್ಯಾಕ್ಟರಿಯಲ್ಲಿ ಐಸ್ ಕ್ರೀಮ್ ತಯಾರಿಸಲಾಗುತ್ತಿತ್ತು, ಲಯ ಮತ್ತು ವಂಶಿಕೃಷ್ಣ ಎಂಬುವರು ಫ್ಯಾಕ್ಟರಿಯ ಸಿಬ್ಬಂದಿಗಳಾಗಿದ್ದು, ಕಳ್ಳತನ ಕೃತ್ಯದಲ್ಲಿ ಭಾಗಿಯಾಗಿದ್ದು ಸಾಬೀತಾಗಿತ್ತು, ಘಟನೆಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಯ ಕಳೆದ 10 ತಿಂಗಳಿಂದ ಕೆಲಸ ಮಾಡುತ್ತಿದ್ದಾರೆ, ವಂಶಿಕೃಷ್ಣ ಕಳೆದ ಮೂರು ತಿಂಗಳಿಂದ ಕೆಲಸ ಮಾಡುತ್ತಿದ್ದ, ಕೆಲಸ ಮುಗಿದ ನಂತರ ಕೊನೆಯಲ್ಲಿ ಹೋಗುತ್ತಿದ್ದ ಇಬ್ಬರು ಐಸ್ ಕ್ರೀಮ್ ತಯಾರಿಕೆಗೆ ಬೇಕಾದ ಪದಾರ್ಥಗಳ ಕಳವು ಮಾಡುತ್ತಿದ್ದರು, ಕಳೆದ ಎರಡು ತಿಂಗಳಿಂದ ನಿರಂತರವಾಗಿ ಕಳವು ಮಾಡುತ್ತಿದ್ದ ಇಬ್ಬರು ಐಸ್ ಕ್ರೀಮ್ ತಯಾರಿಯಲ್ಲಿ ಬಳಸುವ ಗಿಯಾಂಡ್ಯೂಜ್ , ಕ್ಯಾಶುವ್ ಕಾರ್ನಲ್, ರೋಸ್ಟೇಡ್ ಆಲ್ಮಂಡ್ ಪೇಸ್ಟ್ , ವೈಟ್ ಚಾಕುಲೇಟ್ ಪೇಸ್ಟ್ ಗಳ ಕಳವು ಮಾಡಿದ್ದರು. ಫ್ಯಾಕ್ಟರಿಯಲ್ಲಿದ್ದ ಸಿಸಿಟಿವಿಗಳಿಗೆ ಗ್ರೀಸ್ ಬಳಿದು ಕಳ್ಳತನದಲ್ಲಿ ಭಾಗಿಯಾಗುತ್ತಿದ್ದ ಕಳ್ಳರು. ಪದಾರ್ಥಗಳ ಕಳವಾಗುತ್ತಿರುವ ಸಂಶಯದ ಮೇಲೆ ಲಯರವರನ್ನ ಕಳೆದ ತಿಂಗಳು ಕೆಲಸದಿಂದ ತೆಗೆದು ಹಾಕಲಾಗಿತ್ತು.

ಫೆಬ್ರವರಿ 6 ಲಯ ಮತ್ತು ವಂಶಿಕೃಷ್ಣ ವಾಸವಾಗಿದ್ದ ರೂಮ್ ಚೆಕ್ ಮಾಡಿದ್ದಾಗ ಐಸ್ ಕ್ರಿಮ್ ಪದಾರ್ಥಗಳು ಪತ್ತೆಯಾಗಿದೆ. ಘಟನೆ ನಂತರ ಇಬ್ಬರು ನಾಪತ್ತೆಯಾಗಿದ್ದಾರೆ, ಪ್ಯಾಕ್ಟರಿಯಲ್ಲಿ ಪರಿಶೀಲನೆ ಮಾಡಿದ್ದಾಗ ಸುಮಾರು 1 ಲಕ್ಷ 75 ಸಾವಿರ ಮೌಲ್ಯದ ಪದಾರ್ಥಗಳು ಕಳವು ಮಾಡಿರುವು ತಿಳಿದು ಬಂದಿದೆ, ಘಟನೆಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ-ಎನ್.ಶೋಭಾ

ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…

14 minutes ago

ಮನೆ ಹೊಸ್ತಿಲಿನಲ್ಲಿ ಪೂಜೆಗಿಟ್ಟಿದ್ದ ಒಣಗಿದ ದಾಸವಾಳ ಹೂ ನುಂಗಿ ಆರುವರೆ ತಿಂಗಳ ಮಗು ದಾರುಣ ಸಾವು

ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…

2 hours ago

ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ

ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…

4 hours ago

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

12 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

14 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

22 hours ago