ಐಸ್ ಕ್ರೀಮ್ ತಯಾರಿಕಾ ಘಟಕದಲ್ಲಿ 1.75 ಲಕ್ಷ ಮೌಲ್ಯದ ಐಸ್ ಕ್ರೀಮ್ ಉತ್ಪಾದಕ ಪದಾರ್ಥಗಳ ಕಳವು; 2 ತಿಂಗಳಿಂದ ಕಳವು ಮಾಡುತ್ತಿದ್ದ ಫ್ಯಾಕ್ಟರಿ ಸಿಬ್ಬಂದಿ

ಐಸ್ ಕ್ರೀಮ್ ಫ್ಯಾಕ್ಟರಿಯಲ್ಲಿ ಸಿಬ್ಬಂದಿಯೇ ಐಸ್ ಕ್ರಿಮ್ ತಯಾರಿಕೆಗೆ ಬೇಕಾದ ಪದಾರ್ಥಗಳ ಕಳವು ಮಾಡಿದ್ದಾರೆ, 2 ತಿಂಗಳಿಂದ ನಿರಂತರವಾಗಿ ಕಳವು ಮಾಡಿದ್ದ ಅವರು ಸುಮಾರು 1.75 ಲಕ್ಷ ಪದಾರ್ಥಗಳನ್ನ ಕದ್ದು ತಾವು ವಾಸವಾಗಿದ್ದ ರೂಮ್ ನಲ್ಲಿ ಇಟ್ಟಿದ್ದರು, ಘಟನೆ ನಂತರ ಆರೋಪಿಗಳ ಪರಾರಿಯಾಗಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ಅಪೆರಲ್ಸ್ ಪಾರ್ಕ್ ನಲ್ಲಿರುವ ಶ್ರೀವಷಿಷ್ಟ ಟ್ರೇಡರ್ಸ್ ಫ್ಯಾಕ್ಟರಿಯಲ್ಲಿ ಘಟನೆ ನಡೆದಿದೆ, ರಮೇಶ್ ಜಮನಾ ಫ್ಯಾಕ್ಟರಿ ಮಾಲೀಕರಾಗಿದ್ದು, ಫ್ಯಾಕ್ಟರಿಯಲ್ಲಿ ಐಸ್ ಕ್ರೀಮ್ ತಯಾರಿಸಲಾಗುತ್ತಿತ್ತು, ಲಯ ಮತ್ತು ವಂಶಿಕೃಷ್ಣ ಎಂಬುವರು ಫ್ಯಾಕ್ಟರಿಯ ಸಿಬ್ಬಂದಿಗಳಾಗಿದ್ದು, ಕಳ್ಳತನ ಕೃತ್ಯದಲ್ಲಿ ಭಾಗಿಯಾಗಿದ್ದು ಸಾಬೀತಾಗಿತ್ತು, ಘಟನೆಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಯ ಕಳೆದ 10 ತಿಂಗಳಿಂದ ಕೆಲಸ ಮಾಡುತ್ತಿದ್ದಾರೆ, ವಂಶಿಕೃಷ್ಣ ಕಳೆದ ಮೂರು ತಿಂಗಳಿಂದ ಕೆಲಸ ಮಾಡುತ್ತಿದ್ದ, ಕೆಲಸ ಮುಗಿದ ನಂತರ ಕೊನೆಯಲ್ಲಿ ಹೋಗುತ್ತಿದ್ದ ಇಬ್ಬರು ಐಸ್ ಕ್ರೀಮ್ ತಯಾರಿಕೆಗೆ ಬೇಕಾದ ಪದಾರ್ಥಗಳ ಕಳವು ಮಾಡುತ್ತಿದ್ದರು, ಕಳೆದ ಎರಡು ತಿಂಗಳಿಂದ ನಿರಂತರವಾಗಿ ಕಳವು ಮಾಡುತ್ತಿದ್ದ ಇಬ್ಬರು ಐಸ್ ಕ್ರೀಮ್ ತಯಾರಿಯಲ್ಲಿ ಬಳಸುವ ಗಿಯಾಂಡ್ಯೂಜ್ , ಕ್ಯಾಶುವ್ ಕಾರ್ನಲ್, ರೋಸ್ಟೇಡ್ ಆಲ್ಮಂಡ್ ಪೇಸ್ಟ್ , ವೈಟ್ ಚಾಕುಲೇಟ್ ಪೇಸ್ಟ್ ಗಳ ಕಳವು ಮಾಡಿದ್ದರು. ಫ್ಯಾಕ್ಟರಿಯಲ್ಲಿದ್ದ ಸಿಸಿಟಿವಿಗಳಿಗೆ ಗ್ರೀಸ್ ಬಳಿದು ಕಳ್ಳತನದಲ್ಲಿ ಭಾಗಿಯಾಗುತ್ತಿದ್ದ ಕಳ್ಳರು. ಪದಾರ್ಥಗಳ ಕಳವಾಗುತ್ತಿರುವ ಸಂಶಯದ ಮೇಲೆ ಲಯರವರನ್ನ ಕಳೆದ ತಿಂಗಳು ಕೆಲಸದಿಂದ ತೆಗೆದು ಹಾಕಲಾಗಿತ್ತು.

ಫೆಬ್ರವರಿ 6 ಲಯ ಮತ್ತು ವಂಶಿಕೃಷ್ಣ ವಾಸವಾಗಿದ್ದ ರೂಮ್ ಚೆಕ್ ಮಾಡಿದ್ದಾಗ ಐಸ್ ಕ್ರಿಮ್ ಪದಾರ್ಥಗಳು ಪತ್ತೆಯಾಗಿದೆ. ಘಟನೆ ನಂತರ ಇಬ್ಬರು ನಾಪತ್ತೆಯಾಗಿದ್ದಾರೆ, ಪ್ಯಾಕ್ಟರಿಯಲ್ಲಿ ಪರಿಶೀಲನೆ ಮಾಡಿದ್ದಾಗ ಸುಮಾರು 1 ಲಕ್ಷ 75 ಸಾವಿರ ಮೌಲ್ಯದ ಪದಾರ್ಥಗಳು ಕಳವು ಮಾಡಿರುವು ತಿಳಿದು ಬಂದಿದೆ, ಘಟನೆಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

2 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

5 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

1 day ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

1 day ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

1 day ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

2 days ago