ಐಸ್ ಕ್ರೀಮ್ ತಯಾರಿಕಾ ಘಟಕದಲ್ಲಿ 1.75 ಲಕ್ಷ ಮೌಲ್ಯದ ಐಸ್ ಕ್ರೀಮ್ ಉತ್ಪಾದಕ ಪದಾರ್ಥಗಳ ಕಳವು; 2 ತಿಂಗಳಿಂದ ಕಳವು ಮಾಡುತ್ತಿದ್ದ ಫ್ಯಾಕ್ಟರಿ ಸಿಬ್ಬಂದಿ

ಐಸ್ ಕ್ರೀಮ್ ಫ್ಯಾಕ್ಟರಿಯಲ್ಲಿ ಸಿಬ್ಬಂದಿಯೇ ಐಸ್ ಕ್ರಿಮ್ ತಯಾರಿಕೆಗೆ ಬೇಕಾದ ಪದಾರ್ಥಗಳ ಕಳವು ಮಾಡಿದ್ದಾರೆ, 2 ತಿಂಗಳಿಂದ ನಿರಂತರವಾಗಿ ಕಳವು ಮಾಡಿದ್ದ ಅವರು ಸುಮಾರು 1.75 ಲಕ್ಷ ಪದಾರ್ಥಗಳನ್ನ ಕದ್ದು ತಾವು ವಾಸವಾಗಿದ್ದ ರೂಮ್ ನಲ್ಲಿ ಇಟ್ಟಿದ್ದರು, ಘಟನೆ ನಂತರ ಆರೋಪಿಗಳ ಪರಾರಿಯಾಗಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿನ ಅಪೆರಲ್ಸ್ ಪಾರ್ಕ್ ನಲ್ಲಿರುವ ಶ್ರೀವಷಿಷ್ಟ ಟ್ರೇಡರ್ಸ್ ಫ್ಯಾಕ್ಟರಿಯಲ್ಲಿ ಘಟನೆ ನಡೆದಿದೆ, ರಮೇಶ್ ಜಮನಾ ಫ್ಯಾಕ್ಟರಿ ಮಾಲೀಕರಾಗಿದ್ದು, ಫ್ಯಾಕ್ಟರಿಯಲ್ಲಿ ಐಸ್ ಕ್ರೀಮ್ ತಯಾರಿಸಲಾಗುತ್ತಿತ್ತು, ಲಯ ಮತ್ತು ವಂಶಿಕೃಷ್ಣ ಎಂಬುವರು ಫ್ಯಾಕ್ಟರಿಯ ಸಿಬ್ಬಂದಿಗಳಾಗಿದ್ದು, ಕಳ್ಳತನ ಕೃತ್ಯದಲ್ಲಿ ಭಾಗಿಯಾಗಿದ್ದು ಸಾಬೀತಾಗಿತ್ತು, ಘಟನೆಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಯ ಕಳೆದ 10 ತಿಂಗಳಿಂದ ಕೆಲಸ ಮಾಡುತ್ತಿದ್ದಾರೆ, ವಂಶಿಕೃಷ್ಣ ಕಳೆದ ಮೂರು ತಿಂಗಳಿಂದ ಕೆಲಸ ಮಾಡುತ್ತಿದ್ದ, ಕೆಲಸ ಮುಗಿದ ನಂತರ ಕೊನೆಯಲ್ಲಿ ಹೋಗುತ್ತಿದ್ದ ಇಬ್ಬರು ಐಸ್ ಕ್ರೀಮ್ ತಯಾರಿಕೆಗೆ ಬೇಕಾದ ಪದಾರ್ಥಗಳ ಕಳವು ಮಾಡುತ್ತಿದ್ದರು, ಕಳೆದ ಎರಡು ತಿಂಗಳಿಂದ ನಿರಂತರವಾಗಿ ಕಳವು ಮಾಡುತ್ತಿದ್ದ ಇಬ್ಬರು ಐಸ್ ಕ್ರೀಮ್ ತಯಾರಿಯಲ್ಲಿ ಬಳಸುವ ಗಿಯಾಂಡ್ಯೂಜ್ , ಕ್ಯಾಶುವ್ ಕಾರ್ನಲ್, ರೋಸ್ಟೇಡ್ ಆಲ್ಮಂಡ್ ಪೇಸ್ಟ್ , ವೈಟ್ ಚಾಕುಲೇಟ್ ಪೇಸ್ಟ್ ಗಳ ಕಳವು ಮಾಡಿದ್ದರು. ಫ್ಯಾಕ್ಟರಿಯಲ್ಲಿದ್ದ ಸಿಸಿಟಿವಿಗಳಿಗೆ ಗ್ರೀಸ್ ಬಳಿದು ಕಳ್ಳತನದಲ್ಲಿ ಭಾಗಿಯಾಗುತ್ತಿದ್ದ ಕಳ್ಳರು. ಪದಾರ್ಥಗಳ ಕಳವಾಗುತ್ತಿರುವ ಸಂಶಯದ ಮೇಲೆ ಲಯರವರನ್ನ ಕಳೆದ ತಿಂಗಳು ಕೆಲಸದಿಂದ ತೆಗೆದು ಹಾಕಲಾಗಿತ್ತು.

ಫೆಬ್ರವರಿ 6 ಲಯ ಮತ್ತು ವಂಶಿಕೃಷ್ಣ ವಾಸವಾಗಿದ್ದ ರೂಮ್ ಚೆಕ್ ಮಾಡಿದ್ದಾಗ ಐಸ್ ಕ್ರಿಮ್ ಪದಾರ್ಥಗಳು ಪತ್ತೆಯಾಗಿದೆ. ಘಟನೆ ನಂತರ ಇಬ್ಬರು ನಾಪತ್ತೆಯಾಗಿದ್ದಾರೆ, ಪ್ಯಾಕ್ಟರಿಯಲ್ಲಿ ಪರಿಶೀಲನೆ ಮಾಡಿದ್ದಾಗ ಸುಮಾರು 1 ಲಕ್ಷ 75 ಸಾವಿರ ಮೌಲ್ಯದ ಪದಾರ್ಥಗಳು ಕಳವು ಮಾಡಿರುವು ತಿಳಿದು ಬಂದಿದೆ, ಘಟನೆಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

2 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

4 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

9 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

10 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

13 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago