2024-25ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಐ.ಎ.ಎಸ್/ಕೆ.ಎ.ಎಸ್ ಸ್ಫರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗೆ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ದ, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಸಲ್ಲಿಸಲು ಜುಲೈ 24 ರಿಂದ ಆಗಸ್ಟ್ 31 ರವರೆಗೆ ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
*ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷಾ ಪೂರ್ವ ತರಬೇತಿ*
ತರಬೇತಿಯ ಅವಧಿ 10 ತಿಂಗಳು, ವಯಸ್ಸು 21 ರಿಂದ 35 ವರ್ಷ, ವಿದ್ಯಾರ್ಹತೆ- ಅಭ್ಯರ್ಥಿಯು ತರಬೇತಿಗೆ ಅರ್ಜಿ ಸಲ್ಲಿಸಲು ಕಡೆಯ ದಿನಾಂಕದೊಳಗೆ ಅಂತಿಮ ವರ್ಷದ ಪದವಿಯ ಫಲಿತಾಂಶ ಪ್ರಕಟಗೊಂಡಿರಬೇಕು ಹಾಗೂ ಪದವಿ ಹೊಂದಿರಬೇಕು.
*ಅಭ್ಯರ್ಥಿಯ ಸಾಮಾನ್ಯ ಅರ್ಹತೆ-* ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿದ್ದು, ರಾಜ್ಯ ಅಲ್ಪಸಂಖ್ಯಾತರ ಸಮುದಾಯಗಳಾದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ದ, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು, ಅಭ್ಯರ್ಥಿಯು ನಿಗಧಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು.
*ಆಯ್ಕೆ ವಿಧಾನ-* ಅಭ್ಯರ್ಥಿಗಳಿಗೆ ಕೆ.ಇ.ಎ/ಇಲಾಖಾ ವತಿಯಿಂದ ಅರ್ಜಿಗಳನ್ನು ಆಹ್ವಾನಿಸಲಾಗುವುದು ಹಾಗೂ ಅಭ್ಯರ್ಥಿಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಿ ಈ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ.
ಅರ್ಜಿ ಸಲ್ಲಿಸಲು 1.https://sevasindhu.karnataka.gov.in/Sevasindhu/ DepartmentServices
2 .https://dom.karnataka.gov.in ವೆಬ್ಸೈಟ್ ಗಳಿಗೆ ಭೇಟಿ ನೀಡಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ, ದೇವನಹಳ್ಳಿ 080-29787455, ದೊಡ್ಡಬಳ್ಳಾಪುರ ತಾಲ್ಲೂಕು ಮಾಹಿತಿ ಕೇಂದ್ರ-9986874875, ನೆಲಮಂಗಲ ತಾಲ್ಲೂಕು ಮಾಹಿತಿ ಕೇಂದ್ರ- 8660197516, ದೇವನಹಳ್ಳಿ ತಾಲ್ಲೂಕು ಮಾಹಿತಿ ಕೇಂದ್ರ- 8861926851, ಹೊಸಕೋಟೆ ತಾಲ್ಲೂಕು ಮಾಹಿತಿ ಕೇಂದ್ರ- 7676905779, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ- 8277799990 ಇವರನ್ನು ಸಂಪರ್ಕಿಸಬಹುದೆಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್ಗಳು ಹಾಗೂ ಇತರೆ…
ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…