2024-25ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಐ.ಎ.ಎಸ್/ಕೆ.ಎ.ಎಸ್ ಸ್ಫರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗೆ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ದ, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಸಲ್ಲಿಸಲು ಜುಲೈ 24 ರಿಂದ ಆಗಸ್ಟ್ 31 ರವರೆಗೆ ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
*ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷಾ ಪೂರ್ವ ತರಬೇತಿ*
ತರಬೇತಿಯ ಅವಧಿ 10 ತಿಂಗಳು, ವಯಸ್ಸು 21 ರಿಂದ 35 ವರ್ಷ, ವಿದ್ಯಾರ್ಹತೆ- ಅಭ್ಯರ್ಥಿಯು ತರಬೇತಿಗೆ ಅರ್ಜಿ ಸಲ್ಲಿಸಲು ಕಡೆಯ ದಿನಾಂಕದೊಳಗೆ ಅಂತಿಮ ವರ್ಷದ ಪದವಿಯ ಫಲಿತಾಂಶ ಪ್ರಕಟಗೊಂಡಿರಬೇಕು ಹಾಗೂ ಪದವಿ ಹೊಂದಿರಬೇಕು.
*ಅಭ್ಯರ್ಥಿಯ ಸಾಮಾನ್ಯ ಅರ್ಹತೆ-* ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿದ್ದು, ರಾಜ್ಯ ಅಲ್ಪಸಂಖ್ಯಾತರ ಸಮುದಾಯಗಳಾದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ದ, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು, ಅಭ್ಯರ್ಥಿಯು ನಿಗಧಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು.
*ಆಯ್ಕೆ ವಿಧಾನ-* ಅಭ್ಯರ್ಥಿಗಳಿಗೆ ಕೆ.ಇ.ಎ/ಇಲಾಖಾ ವತಿಯಿಂದ ಅರ್ಜಿಗಳನ್ನು ಆಹ್ವಾನಿಸಲಾಗುವುದು ಹಾಗೂ ಅಭ್ಯರ್ಥಿಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಿ ಈ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ.
ಅರ್ಜಿ ಸಲ್ಲಿಸಲು 1.https://sevasindhu.karnataka.gov.in/Sevasindhu/ DepartmentServices
2 .https://dom.karnataka.gov.in ವೆಬ್ಸೈಟ್ ಗಳಿಗೆ ಭೇಟಿ ನೀಡಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ, ದೇವನಹಳ್ಳಿ 080-29787455, ದೊಡ್ಡಬಳ್ಳಾಪುರ ತಾಲ್ಲೂಕು ಮಾಹಿತಿ ಕೇಂದ್ರ-9986874875, ನೆಲಮಂಗಲ ತಾಲ್ಲೂಕು ಮಾಹಿತಿ ಕೇಂದ್ರ- 8660197516, ದೇವನಹಳ್ಳಿ ತಾಲ್ಲೂಕು ಮಾಹಿತಿ ಕೇಂದ್ರ- 8861926851, ಹೊಸಕೋಟೆ ತಾಲ್ಲೂಕು ಮಾಹಿತಿ ಕೇಂದ್ರ- 7676905779, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ- 8277799990 ಇವರನ್ನು ಸಂಪರ್ಕಿಸಬಹುದೆಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…
ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…
ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…
ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…