2024-25ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಐ.ಎ.ಎಸ್/ಕೆ.ಎ.ಎಸ್ ಸ್ಫರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗೆ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ದ, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಸಲ್ಲಿಸಲು ಆಗಸ್ಟ್ 31 ರವರೆಗೆ ಅಂತಿಮ ದಿನವನ್ನಾಗಿ ಘೋಷಿಸಲಾಗಿತ್ತು. ಪ್ರಸ್ತುತ ಅರ್ಜಿ ಸಲ್ಲಿಸುವ ಕೊನೆಯ ದಿನವು ಸೆಪ್ಟೆಂಬರ್ 10 ಕ್ಕೆ ವಿಸ್ತರಿಸಲಾಗಿದ್ದು, ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷಾ ಪೂರ್ವ ತರಬೇತಿ ತರಬೇತಿಯ ಅವಧಿ 10 ತಿಂಗಳು, ವಯಸ್ಸು 21 ರಿಂದ 35 ವರ್ಷ, ವಿದ್ಯಾರ್ಹತೆ- ಅಭ್ಯರ್ಥಿಯು ತರಬೇತಿಗೆ ಅರ್ಜಿ ಸಲ್ಲಿಸಲು ಕಡೆಯ ದಿನಾಂಕದೊಳಗೆ ಅಂತಿಮ ವರ್ಷದ ಪದವಿಯ ಫಲಿತಾಂಶ ಪ್ರಕಟಗೊಂಡಿರಬೇಕು ಹಾಗೂ ಪದವಿ ಹೊಂದಿರಬೇಕು.
ಅಭ್ಯರ್ಥಿಯ ಸಾಮಾನ್ಯ ಅರ್ಹತೆ- ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿದ್ದು, ರಾಜ್ಯ ಅಲ್ಪಸಂಖ್ಯಾತರ ಸಮುದಾಯಗಳಾದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ದ, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು, ಅಭ್ಯರ್ಥಿಯು ನಿಗಧಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು.
ಆಯ್ಕೆ ವಿಧಾನ- ಅಭ್ಯರ್ಥಿಗಳಿಗೆ ಕೆ.ಇ.ಎ/ಇಲಾಖಾ ವತಿಯಿಂದ ಅರ್ಜಿಗಳನ್ನು ಆಹ್ವಾನಿಸಲಾಗುವುದು ಹಾಗೂ ಅಭ್ಯರ್ಥಿಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಿ ಈ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ.
ಅರ್ಜಿ ಸಲ್ಲಿಸಲು 1.https://sevasindhu.karnataka.gov.in/Sevasindhu/ DepartmentServices, 2 .https://dom.karnataka.gov.in ವೆಬ್ಸೈಟ್ ಗಳಿಗೆ ಭೇಟಿ ನೀಡಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ, ದೇವನಹಳ್ಳಿ 080-29787455, ದೊಡ್ಡಬಳ್ಳಾಪುರ ತಾಲ್ಲೂಕು ಮಾಹಿತಿ ಕೇಂದ್ರ-9986874875, ನೆಲಮಂಗಲ ತಾಲ್ಲೂಕು ಮಾಹಿತಿ ಕೇಂದ್ರ- 8660197516, ದೇವನಹಳ್ಳಿ ತಾಲ್ಲೂಕು ಮಾಹಿತಿ ಕೇಂದ್ರ- 8861926851, ಹೊಸಕೋಟೆ ತಾಲ್ಲೂಕು ಮಾಹಿತಿ ಕೇಂದ್ರ- 7676905779, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ- 8277799990 ಇವರನ್ನು ಸಂಪರ್ಕಿಸಬಹುದೆಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…
ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…
ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…
ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…
ದೇವರಹಿಪ್ಪರಗಿ: ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…
ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…