2024-25ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಐ.ಎ.ಎಸ್/ಕೆ.ಎ.ಎಸ್ ಸ್ಫರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗೆ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ದ, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಸಲ್ಲಿಸಲು ಆಗಸ್ಟ್ 31 ರವರೆಗೆ ಅಂತಿಮ ದಿನವನ್ನಾಗಿ ಘೋಷಿಸಲಾಗಿತ್ತು. ಪ್ರಸ್ತುತ ಅರ್ಜಿ ಸಲ್ಲಿಸುವ ಕೊನೆಯ ದಿನವು ಸೆಪ್ಟೆಂಬರ್ 10 ಕ್ಕೆ ವಿಸ್ತರಿಸಲಾಗಿದ್ದು, ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷಾ ಪೂರ್ವ ತರಬೇತಿ ತರಬೇತಿಯ ಅವಧಿ 10 ತಿಂಗಳು, ವಯಸ್ಸು 21 ರಿಂದ 35 ವರ್ಷ, ವಿದ್ಯಾರ್ಹತೆ- ಅಭ್ಯರ್ಥಿಯು ತರಬೇತಿಗೆ ಅರ್ಜಿ ಸಲ್ಲಿಸಲು ಕಡೆಯ ದಿನಾಂಕದೊಳಗೆ ಅಂತಿಮ ವರ್ಷದ ಪದವಿಯ ಫಲಿತಾಂಶ ಪ್ರಕಟಗೊಂಡಿರಬೇಕು ಹಾಗೂ ಪದವಿ ಹೊಂದಿರಬೇಕು.
ಅಭ್ಯರ್ಥಿಯ ಸಾಮಾನ್ಯ ಅರ್ಹತೆ- ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿದ್ದು, ರಾಜ್ಯ ಅಲ್ಪಸಂಖ್ಯಾತರ ಸಮುದಾಯಗಳಾದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ದ, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು, ಅಭ್ಯರ್ಥಿಯು ನಿಗಧಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು.
ಆಯ್ಕೆ ವಿಧಾನ- ಅಭ್ಯರ್ಥಿಗಳಿಗೆ ಕೆ.ಇ.ಎ/ಇಲಾಖಾ ವತಿಯಿಂದ ಅರ್ಜಿಗಳನ್ನು ಆಹ್ವಾನಿಸಲಾಗುವುದು ಹಾಗೂ ಅಭ್ಯರ್ಥಿಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಿ ಈ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ.
ಅರ್ಜಿ ಸಲ್ಲಿಸಲು 1.https://sevasindhu.karnataka.gov.in/Sevasindhu/ DepartmentServices, 2 .https://dom.karnataka.gov.in ವೆಬ್ಸೈಟ್ ಗಳಿಗೆ ಭೇಟಿ ನೀಡಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ, ದೇವನಹಳ್ಳಿ 080-29787455, ದೊಡ್ಡಬಳ್ಳಾಪುರ ತಾಲ್ಲೂಕು ಮಾಹಿತಿ ಕೇಂದ್ರ-9986874875, ನೆಲಮಂಗಲ ತಾಲ್ಲೂಕು ಮಾಹಿತಿ ಕೇಂದ್ರ- 8660197516, ದೇವನಹಳ್ಳಿ ತಾಲ್ಲೂಕು ಮಾಹಿತಿ ಕೇಂದ್ರ- 8861926851, ಹೊಸಕೋಟೆ ತಾಲ್ಲೂಕು ಮಾಹಿತಿ ಕೇಂದ್ರ- 7676905779, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ- 8277799990 ಇವರನ್ನು ಸಂಪರ್ಕಿಸಬಹುದೆಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…