ಐ.ಎ.ಎಸ್/ಕೆ.ಎ.ಎಸ್ ಸ್ಫರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

2024-25ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಐ.ಎ.ಎಸ್/ಕೆ.ಎ.ಎಸ್ ಸ್ಫರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗೆ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ದ, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಸಲ್ಲಿಸಲು ಆಗಸ್ಟ್ 31 ರವರೆಗೆ ಅಂತಿಮ ದಿನವನ್ನಾಗಿ ಘೋಷಿಸಲಾಗಿತ್ತು. ಪ್ರಸ್ತುತ ಅರ್ಜಿ ಸಲ್ಲಿಸುವ ಕೊನೆಯ ದಿನವು ಸೆಪ್ಟೆಂಬರ್ 10 ಕ್ಕೆ ವಿಸ್ತರಿಸಲಾಗಿದ್ದು, ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷಾ ಪೂರ್ವ ತರಬೇತಿ ತರಬೇತಿಯ ಅವಧಿ 10 ತಿಂಗಳು, ವಯಸ್ಸು 21 ರಿಂದ 35 ವರ್ಷ, ವಿದ್ಯಾರ್ಹತೆ- ಅಭ್ಯರ್ಥಿಯು ತರಬೇತಿಗೆ ಅರ್ಜಿ ಸಲ್ಲಿಸಲು ಕಡೆಯ ದಿನಾಂಕದೊಳಗೆ ಅಂತಿಮ ವರ್ಷದ ಪದವಿಯ ಫಲಿತಾಂಶ ಪ್ರಕಟಗೊಂಡಿರಬೇಕು ಹಾಗೂ ಪದವಿ ಹೊಂದಿರಬೇಕು.

ಅಭ್ಯರ್ಥಿಯ ಸಾಮಾನ್ಯ ಅರ್ಹತೆ- ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿದ್ದು, ರಾಜ್ಯ ಅಲ್ಪಸಂಖ್ಯಾತರ ಸಮುದಾಯಗಳಾದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ದ, ಸಿಖ್ ಮತ್ತು ಪಾರ್ಸಿ ಜನಾಂಗಕ್ಕೆ ಸೇರಿದವರಾಗಿರಬೇಕು, ಅಭ್ಯರ್ಥಿಯು ನಿಗಧಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು.

ಆಯ್ಕೆ ವಿಧಾನ- ಅಭ್ಯರ್ಥಿಗಳಿಗೆ ಕೆ.ಇ.ಎ/ಇಲಾಖಾ ವತಿಯಿಂದ ಅರ್ಜಿಗಳನ್ನು ಆಹ್ವಾನಿಸಲಾಗುವುದು ಹಾಗೂ ಅಭ್ಯರ್ಥಿಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಿ ಈ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ.

ಅರ್ಜಿ ಸಲ್ಲಿಸಲು 1.https://sevasindhu.karnataka.gov.in/Sevasindhu/ DepartmentServices, 2 .https://dom.karnataka.gov.in ವೆಬ್ಸೈಟ್ ಗಳಿಗೆ ಭೇಟಿ ನೀಡಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಚೇರಿ, ದೇವನಹಳ್ಳಿ 080-29787455, ದೊಡ್ಡಬಳ್ಳಾಪುರ ತಾಲ್ಲೂಕು ಮಾಹಿತಿ ಕೇಂದ್ರ-9986874875, ನೆಲಮಂಗಲ ತಾಲ್ಲೂಕು ಮಾಹಿತಿ ಕೇಂದ್ರ- 8660197516, ದೇವನಹಳ್ಳಿ ತಾಲ್ಲೂಕು ಮಾಹಿತಿ ಕೇಂದ್ರ- 8861926851, ಹೊಸಕೋಟೆ ತಾಲ್ಲೂಕು ಮಾಹಿತಿ ಕೇಂದ್ರ- 7676905779, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ- 8277799990 ಇವರನ್ನು ಸಂಪರ್ಕಿಸಬಹುದೆಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

5 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

7 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

1 day ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

1 day ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

2 days ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

2 days ago