ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು ದೊಡ್ಡಬಳ್ಳಾಪುರ ತಾಲೂಕಿನ ಕಾಡನೂರು ಪಾಳ್ಯದಲ್ಲಿ ನಡೆದಿದೆ….
ಕಾಡನೂರು ಪಾಳ್ಯ ಗ್ರಾಮದ ಹೊರವಲಯದಲ್ಲಿ ಒಂಟಿ ಮನೆ ಇತ್ತು. ಮನೆಯಲ್ಲಿ ಮಹಿಳೆ ಒಬ್ಬರೇ ಇದ್ದಾಗ ಆಫ್ರೀಕಾ ಮೂಲ ಎನ್ನಲಾದ ಇಬ್ಬರು ಯುವಕರು ನಿನ್ನೆ ಹಾಗೂ ಇಂದು ಬೈಕ್ ನಲ್ಲಿ ಬಂದು ಮನೆ ಸುತ್ತಾ ಓಡಾಡುತ್ತಿದ್ದರು. ಆಸಾಮಿಗಳನ್ನು ನೋಡಿದ ಮಹಿಳೆ ಭಯಭೀತರಾಗಿ ಜೋರಾಗಿ ಕೂಗಿ ಊರಿನವರಿಗೆ ಮಾಹಿತಿ ತಿಳಿಸುತ್ತಾರೆ. ಗ್ರಾಮಸ್ಥರನ್ನು ಕಂಡ ಆಸಾಮಿಗಳು ಎಸ್ಕೇಪ್ ಆಗಲು ಯತ್ನಿಸಿದ್ದಾರೆ. ಆದರೆ, ಗ್ರಾಮಸ್ಥರು ಆ ಇಬ್ಬರು ಯುವಕರನ್ನು ಹಿಡಿದು ದೊಡ್ಡಬೆಳವಂಗಲ ಪೊಲೀಸರಿಗೆ ಬೈಕ್ ಸಮೇತ ಒಪ್ಪಿಸಿದ್ದಾರೆ ಎನ್ನಲಾಗಿದೆ….
ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು ಸೂಕ್ತ ವಿಚಾರಣೆ ನಡೆಸಿ, ಪಾಸ್ ಪೋರ್ಟ್ ಸೇರಿದಂತೆ ಇತರೆ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.. ಹರಿಯಾಣದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ..
ಆಫ್ರಿಕಾ ಮೂಲದ 22 ವರ್ಷದ ಭಾ ಸುಲೇಮಾನ್, 21 ವರ್ಷದ ಕೊಲ್ಲೆ ಸಬಿಯನ್ ಎಂದು ಗುರುತಿಸಲಾಗಿದೆ. ಪೊಲೀಸರು ಅವರನ್ನು ನೆಲಮಂಗಲದಲ್ಲಿರುವ ನಿರಾಶ್ರಿತರ ಪುನರ್ವಸತಿ ಕೇಂದ್ರಕ್ಕೆ ಕರೆದೋಯ್ದಿದ್ದಾರೆ. ಆದರೆ ಅವರಿಬ್ಬರ ವೀಸಾ ಪಾಸ್ ಪೋರ್ಟ್ ಅವಧಿ ಮುಗಿದಿದ್ದ ಹಿನ್ನೆಲೆ ಬೆಂಗಳೂರಿನ ಶಾಂತಿನಗರದಲ್ಲಿರುವ FRRO ಗೆ ಬಿಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ..
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…
ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…
ಡಿಸೆಂಬರ್ 23...... ರೈತರಿಗೂ ಒಂದು ದಿನವಂತೆ..... ಭತ್ತ ಬೆಳೆಯುವ ರೈತ ಆತ್ಮಹತ್ಯೆಯತ್ತ, ಅಕ್ಕಿ ಮಾರುವ ವ್ಯಾಪಾರಿ ಅರಮನೆಯತ್ತಾ...... ಇತರ ಕೆಟ್ಟ…
ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲದಲ್ಲಿ ಇಂದು (ಶನಿವಾರ) ಹುಂಡಿ ಕಾಣಿಕೆ ಎಣಿಕೆ ಕಾರ್ಯ…