ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು ದೊಡ್ಡಬಳ್ಳಾಪುರ ತಾಲೂಕಿನ ಕಾಡನೂರು ಪಾಳ್ಯದಲ್ಲಿ ನಡೆದಿದೆ….
ಕಾಡನೂರು ಪಾಳ್ಯ ಗ್ರಾಮದ ಹೊರವಲಯದಲ್ಲಿ ಒಂಟಿ ಮನೆ ಇತ್ತು. ಮನೆಯಲ್ಲಿ ಮಹಿಳೆ ಒಬ್ಬರೇ ಇದ್ದಾಗ ಆಫ್ರೀಕಾ ಮೂಲ ಎನ್ನಲಾದ ಇಬ್ಬರು ಯುವಕರು ನಿನ್ನೆ ಹಾಗೂ ಇಂದು ಬೈಕ್ ನಲ್ಲಿ ಬಂದು ಮನೆ ಸುತ್ತಾ ಓಡಾಡುತ್ತಿದ್ದರು. ಆಸಾಮಿಗಳನ್ನು ನೋಡಿದ ಮಹಿಳೆ ಭಯಭೀತರಾಗಿ ಜೋರಾಗಿ ಕೂಗಿ ಊರಿನವರಿಗೆ ಮಾಹಿತಿ ತಿಳಿಸುತ್ತಾರೆ. ಗ್ರಾಮಸ್ಥರನ್ನು ಕಂಡ ಆಸಾಮಿಗಳು ಎಸ್ಕೇಪ್ ಆಗಲು ಯತ್ನಿಸಿದ್ದಾರೆ. ಆದರೆ, ಗ್ರಾಮಸ್ಥರು ಆ ಇಬ್ಬರು ಯುವಕರನ್ನು ಹಿಡಿದು ದೊಡ್ಡಬೆಳವಂಗಲ ಪೊಲೀಸರಿಗೆ ಬೈಕ್ ಸಮೇತ ಒಪ್ಪಿಸಿದ್ದಾರೆ ಎನ್ನಲಾಗಿದೆ….
ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು ಸೂಕ್ತ ವಿಚಾರಣೆ ನಡೆಸಿ, ಪಾಸ್ ಪೋರ್ಟ್ ಸೇರಿದಂತೆ ಇತರೆ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.. ಹರಿಯಾಣದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ..
ಆ ಯುವಕರನ್ನು ಪೊಲೀಸರು ನೆಲಮಂಗಲದಲ್ಲಿರುವ ನಿರಾಶ್ರಿತರ ಪುನರ್ವಸತಿ ಕೇಂದ್ರಕ್ಕೆ ಕರೆದೋಯ್ದಿದ್ದಾರೆ. ಆದರೆ ಅವರಿಬ್ಬರ ವೀಸಾ ಪಾಸ್ ಪೋರ್ಟ್ ಅವಧಿ ಮುಗಿದಿದ್ದ ಹಿನ್ನೆಲೆ ಬೆಂಗಳೂರಿನ ಶಾಂತಿನಗರದಲ್ಲಿರುವ FRRO ಗೆ ಬಿಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ..
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…
ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…
ದೊಡ್ಡಬಳ್ಳಾಪುರ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಲಕ್ಕೇನಹಳ್ಳಿ ಬಳಿ ಡ್ಯಾಂ ನಿರ್ಮಿಸಲು ಉದ್ದೇಶಿಸಿರುವ ಕ್ರಮಕ್ಕೆ…