ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು ದೊಡ್ಡಬಳ್ಳಾಪುರ ತಾಲೂಕಿನ ಕಾಡನೂರು ಪಾಳ್ಯದಲ್ಲಿ ನಡೆದಿದೆ….

ಕಾಡನೂರು ಪಾಳ್ಯ ಗ್ರಾಮದ ಹೊರವಲಯದಲ್ಲಿ ಒಂಟಿ ಮನೆ ಇತ್ತು. ಮನೆಯಲ್ಲಿ ಮಹಿಳೆ ಒಬ್ಬರೇ ಇದ್ದಾಗ ಆಫ್ರೀಕಾ ಮೂಲ ಎನ್ನಲಾದ ಇಬ್ಬರು ಯುವಕರು ನಿನ್ನೆ ಹಾಗೂ ಇಂದು ಬೈಕ್ ನಲ್ಲಿ ಬಂದು ಮನೆ ಸುತ್ತಾ ಓಡಾಡುತ್ತಿದ್ದರು. ಆಸಾಮಿಗಳನ್ನು ನೋಡಿದ ಮಹಿಳೆ ಭಯಭೀತರಾಗಿ ಜೋರಾಗಿ ಕೂಗಿ ಊರಿನವರಿಗೆ ಮಾಹಿತಿ ತಿಳಿಸುತ್ತಾರೆ. ಗ್ರಾಮಸ್ಥರನ್ನು ಕಂಡ ಆಸಾಮಿಗಳು ಎಸ್ಕೇಪ್ ಆಗಲು ಯತ್ನಿಸಿದ್ದಾರೆ. ಆದರೆ, ಗ್ರಾಮಸ್ಥರು ಆ ಇಬ್ಬರು ಯುವಕರನ್ನು ಹಿಡಿದು ದೊಡ್ಡಬೆಳವಂಗಲ ಪೊಲೀಸರಿಗೆ ಬೈಕ್ ಸಮೇತ ಒಪ್ಪಿಸಿದ್ದಾರೆ ಎನ್ನಲಾಗಿದೆ….

ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು ಸೂಕ್ತ ವಿಚಾರಣೆ ನಡೆಸಿ, ಪಾಸ್ ಪೋರ್ಟ್ ಸೇರಿದಂತೆ ಇತರೆ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ..‌ ಹರಿಯಾಣದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ..

ಆ ಯುವಕರನ್ನು ಪೊಲೀಸರು ನೆಲಮಂಗಲದಲ್ಲಿರುವ ನಿರಾಶ್ರಿತರ ಪುನರ್ವಸತಿ ಕೇಂದ್ರಕ್ಕೆ ಕರೆದೋಯ್ದಿದ್ದಾರೆ. ಆದರೆ ಅವರಿಬ್ಬರ ವೀಸಾ ಪಾಸ್ ಪೋರ್ಟ್ ಅವಧಿ ಮುಗಿದಿದ್ದ ಹಿನ್ನೆಲೆ ಬೆಂಗಳೂರಿನ ಶಾಂತಿನಗರದಲ್ಲಿರುವ FRRO ಗೆ ಬಿಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ..

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

12 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

18 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

1 day ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

1 day ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

2 days ago