ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು ದೊಡ್ಡಬಳ್ಳಾಪುರ ತಾಲೂಕಿನ ಕಾಡನೂರು ಪಾಳ್ಯದಲ್ಲಿ ನಡೆದಿದೆ….
ಕಾಡನೂರು ಪಾಳ್ಯ ಗ್ರಾಮದ ಹೊರವಲಯದಲ್ಲಿ ಒಂಟಿ ಮನೆ ಇತ್ತು. ಮನೆಯಲ್ಲಿ ಮಹಿಳೆ ಒಬ್ಬರೇ ಇದ್ದಾಗ ಆಫ್ರೀಕಾ ಮೂಲ ಎನ್ನಲಾದ ಇಬ್ಬರು ಯುವಕರು ನಿನ್ನೆ ಹಾಗೂ ಇಂದು ಬೈಕ್ ನಲ್ಲಿ ಬಂದು ಮನೆ ಸುತ್ತಾ ಓಡಾಡುತ್ತಿದ್ದರು. ಆಸಾಮಿಗಳನ್ನು ನೋಡಿದ ಮಹಿಳೆ ಭಯಭೀತರಾಗಿ ಜೋರಾಗಿ ಕೂಗಿ ಊರಿನವರಿಗೆ ಮಾಹಿತಿ ತಿಳಿಸುತ್ತಾರೆ. ಗ್ರಾಮಸ್ಥರನ್ನು ಕಂಡ ಆಸಾಮಿಗಳು ಎಸ್ಕೇಪ್ ಆಗಲು ಯತ್ನಿಸಿದ್ದಾರೆ. ಆದರೆ, ಗ್ರಾಮಸ್ಥರು ಆ ಇಬ್ಬರು ಯುವಕರನ್ನು ಹಿಡಿದು ದೊಡ್ಡಬೆಳವಂಗಲ ಪೊಲೀಸರಿಗೆ ಬೈಕ್ ಸಮೇತ ಒಪ್ಪಿಸಿದ್ದಾರೆ ಎನ್ನಲಾಗಿದೆ….
ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು ಸೂಕ್ತ ವಿಚಾರಣೆ ನಡೆಸಿ, ಪಾಸ್ ಪೋರ್ಟ್ ಸೇರಿದಂತೆ ಇತರೆ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.. ಹರಿಯಾಣದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ..
ಆ ಯುವಕರನ್ನು ಪೊಲೀಸರು ನೆಲಮಂಗಲದಲ್ಲಿರುವ ನಿರಾಶ್ರಿತರ ಪುನರ್ವಸತಿ ಕೇಂದ್ರಕ್ಕೆ ಕರೆದೋಯ್ದಿದ್ದಾರೆ. ಆದರೆ ಅವರಿಬ್ಬರ ವೀಸಾ ಪಾಸ್ ಪೋರ್ಟ್ ಅವಧಿ ಮುಗಿದಿದ್ದ ಹಿನ್ನೆಲೆ ಬೆಂಗಳೂರಿನ ಶಾಂತಿನಗರದಲ್ಲಿರುವ FRRO ಗೆ ಬಿಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ..
ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಅವರ ಕಾರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆಂಬಲಿಗರು ಮುತ್ತಿಗೆ ಹಾಕಿದ ಘಟನೆ ಶನಿವಾರ…
ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…
ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜಯಂತಿಯ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ದೇವನಹಳ್ಳಿ: 517ನೇ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಶನಿವಾರ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…
ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್ಟಾರ್ಷನ್ ಹಾಗೂ ಬ್ಲ್ಯಾಕ್ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…
ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…