ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು ದೊಡ್ಡಬಳ್ಳಾಪುರ ತಾಲೂಕಿನ ಕಾಡನೂರು ಪಾಳ್ಯದಲ್ಲಿ ನಡೆದಿದೆ….
ಕಾಡನೂರು ಪಾಳ್ಯ ಗ್ರಾಮದ ಹೊರವಲಯದಲ್ಲಿ ಒಂಟಿ ಮನೆ ಇತ್ತು. ಮನೆಯಲ್ಲಿ ಮಹಿಳೆ ಒಬ್ಬರೇ ಇದ್ದಾಗ ಆಫ್ರೀಕಾ ಮೂಲ ಎನ್ನಲಾದ ಇಬ್ಬರು ಯುವಕರು ನಿನ್ನೆ ಹಾಗೂ ಇಂದು ಬೈಕ್ ನಲ್ಲಿ ಬಂದು ಮನೆ ಸುತ್ತಾ ಓಡಾಡುತ್ತಿದ್ದರು. ಆಸಾಮಿಗಳನ್ನು ನೋಡಿದ ಮಹಿಳೆ ಭಯಭೀತರಾಗಿ ಜೋರಾಗಿ ಕೂಗಿ ಊರಿನವರಿಗೆ ಮಾಹಿತಿ ತಿಳಿಸುತ್ತಾರೆ. ಗ್ರಾಮಸ್ಥರನ್ನು ಕಂಡ ಆಸಾಮಿಗಳು ಎಸ್ಕೇಪ್ ಆಗಲು ಯತ್ನಿಸಿದ್ದಾರೆ. ಆದರೆ, ಗ್ರಾಮಸ್ಥರು ಆ ಇಬ್ಬರು ಯುವಕರನ್ನು ಹಿಡಿದು ದೊಡ್ಡಬೆಳವಂಗಲ ಪೊಲೀಸರಿಗೆ ಬೈಕ್ ಸಮೇತ ಒಪ್ಪಿಸಿದ್ದಾರೆ ಎನ್ನಲಾಗಿದೆ….
ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು ಸೂಕ್ತ ವಿಚಾರಣೆ ನಡೆಸಿ, ಪಾಸ್ ಪೋರ್ಟ್ ಸೇರಿದಂತೆ ಇತರೆ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.. ಹರಿಯಾಣದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ..
ಆ ಯುವಕರನ್ನು ಪೊಲೀಸರು ನೆಲಮಂಗಲದಲ್ಲಿರುವ ನಿರಾಶ್ರಿತರ ಪುನರ್ವಸತಿ ಕೇಂದ್ರಕ್ಕೆ ಕರೆದೋಯ್ದಿದ್ದಾರೆ. ಆದರೆ ಅವರಿಬ್ಬರ ವೀಸಾ ಪಾಸ್ ಪೋರ್ಟ್ ಅವಧಿ ಮುಗಿದಿದ್ದ ಹಿನ್ನೆಲೆ ಬೆಂಗಳೂರಿನ ಶಾಂತಿನಗರದಲ್ಲಿರುವ FRRO ಗೆ ಬಿಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ..
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…