ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು ದೊಡ್ಡಬಳ್ಳಾಪುರ ತಾಲೂಕಿನ ಕಾಡನೂರು ಪಾಳ್ಯದಲ್ಲಿ ನಡೆದಿದೆ….
ಕಾಡನೂರು ಪಾಳ್ಯ ಗ್ರಾಮದ ಹೊರವಲಯದಲ್ಲಿ ಒಂಟಿ ಮನೆ ಇತ್ತು. ಮನೆಯಲ್ಲಿ ಮಹಿಳೆ ಒಬ್ಬರೇ ಇದ್ದಾಗ ಆಫ್ರೀಕಾ ಮೂಲ ಎನ್ನಲಾದ ಇಬ್ಬರು ಯುವಕರು ನಿನ್ನೆ ಹಾಗೂ ಇಂದು ಬೈಕ್ ನಲ್ಲಿ ಬಂದು ಮನೆ ಸುತ್ತಾ ಓಡಾಡುತ್ತಿದ್ದರು. ಆಸಾಮಿಗಳನ್ನು ನೋಡಿದ ಮಹಿಳೆ ಭಯಭೀತರಾಗಿ ಜೋರಾಗಿ ಕೂಗಿ ಊರಿನವರಿಗೆ ಮಾಹಿತಿ ತಿಳಿಸುತ್ತಾರೆ. ಗ್ರಾಮಸ್ಥರನ್ನು ಕಂಡ ಆಸಾಮಿಗಳು ಎಸ್ಕೇಪ್ ಆಗಲು ಯತ್ನಿಸಿದ್ದಾರೆ. ಆದರೆ, ಗ್ರಾಮಸ್ಥರು ಆ ಇಬ್ಬರು ಯುವಕರನ್ನು ಹಿಡಿದು ದೊಡ್ಡಬೆಳವಂಗಲ ಪೊಲೀಸರಿಗೆ ಬೈಕ್ ಸಮೇತ ಒಪ್ಪಿಸಿದ್ದಾರೆ ಎನ್ನಲಾಗಿದೆ….
ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು ಸೂಕ್ತ ವಿಚಾರಣೆ ನಡೆಸಿ, ಪಾಸ್ ಪೋರ್ಟ್ ಸೇರಿದಂತೆ ಇತರೆ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.. ಹರಿಯಾಣದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ..
ಆ ಯುವಕರನ್ನು ಪೊಲೀಸರು ನೆಲಮಂಗಲದಲ್ಲಿರುವ ನಿರಾಶ್ರಿತರ ಪುನರ್ವಸತಿ ಕೇಂದ್ರಕ್ಕೆ ಕರೆದೋಯ್ದಿದ್ದಾರೆ. ಆದರೆ ಅವರಿಬ್ಬರ ವೀಸಾ ಪಾಸ್ ಪೋರ್ಟ್ ಅವಧಿ ಮುಗಿದಿದ್ದ ಹಿನ್ನೆಲೆ ಬೆಂಗಳೂರಿನ ಶಾಂತಿನಗರದಲ್ಲಿರುವ FRRO ಗೆ ಬಿಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ..
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…