ಮಡಿಕೇರಿಯಲ್ಲಿ ಒಂಟಿ ಮಹಿಳೆ ವಾಸವಾಗಿದ್ದ ಮನೆಗೆ ನುಗ್ಗಿ ಹಲ್ಲೆ ಮಾಡಿ ಚಿನ್ನದ ಕರಿಮಣಿ ಸರ ಮತ್ತು ಉಂಗುರ ದರೋಡೆ ಮಾಡಿದ್ದ ಆರೋಪಿಗೆ ಮಡಿಕೇರಿಯ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷ ಕಠಿಣ ಶಿಕ್ಷೆ, 15 ಸಾವಿರ ದಂಡ ಹಾಗೂ ದಂಡದ ಮೊತ್ತವನ್ನು ಪಾವತಿಸದಿದ್ದಲ್ಲಿ 3 ತಿಂಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಇಬ್ಬನಿ ರೆಸಾರ್ಟ್ ನಲ್ಲಿ ಕೆಲಸ ಮಾಡಿಕೊಂಡಿದ್ದ ರಾಜಸ್ಥಾನ ಮೂಲದ ವಿಕಾಸ್ ಜೋರ್ಡಿಯಾ (35) ಎಂಬಾತ ಶಿಕ್ಷೆಗೊಳಗಾದವನಾಗಿದ್ದಾನೆ.
ಆರೋಪಿ ದಿನಾಂಕ 05-11-2023 ರಂದು ಮಡಿಕೇರಿ ನಗರದ IDBI, ಬ್ಯಾಂಕ್ ಎದುರು, ಸಾಕಮ್ಮ ಪ್ರಭಾಕರ್ ಎಂಬುವವರು ಒಂಟಿಯಾಗಿ ವಾಸವಿದ್ದ ಮನೆಗೆ ಹೊಂಚು ಹಾಕಿ ನುಗ್ಗಿದ್ದಾನೆ. ಅವರ ಮೇಲೆ ಹಲ್ಲೆ ಮಾಡಿ ತಲೆಗೆ ಗಾಯಗೊಳಿಸಿ ಕತ್ತಿನಲ್ಲಿದ್ದ ಚಿನ್ನದ ಕರಿಮಣಿ ಸರವನ್ನು ಮತ್ತು ಕೈ ಬೆರಳಿನಲ್ಲಿದ್ದ ಉಂಗುರವನ್ನು ಕಸಿದುಕೊಂಡು ಪರಾರಿ ಆಗಿದ್ದ.
ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ 397 IPC ಅಡಿಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಕೈಗೊಳ್ಳಲಾಗಿ ದಿನಾಂಕ 06-11-2023 ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು.
ಪ್ರಕರಣದ ತನಿಖಾಧಿಕಾರಿಯಾಗಿದ್ದ ಮಡಿಕೇರಿ ನಗರ ಪೊಲೀಸ್ ವೃತ್ತ ನಿರೀಕ್ಷಕರಾದ ಅನೂಪ್ ಮಾದಪ್ಪ, ಹೆಡ್ ಕಾನ್ಸ್ ಟೇಬಲ್ ಗಳಾದ ಎ.ವಿ. ಕಿರಣ್ ಮತ್ತು ಡಿ. ಹೆಚ್. ಸುಮಿತಾ ಹಾಗೂ ಸಿಬ್ಬಂದಿಗಳು ಪ್ರಕರಣದ ಸಂಪೂರ್ಣ ತನಿಖೆ ಕೈಗೊಂಡು ದಿನಾಂಕ 02-01-2024 ರಂದು ಮಡಿಕೇರಿಯ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಜಿ. ಪ್ರಶಾಂತಿ ಅವರು ಆರೋಪ ಸಾಬೀತು ಆದ ಹಿನ್ನೆಲೆಯಲ್ಲಿ ದಿನಾಂಕ 09-04-2025 ರಂದು ಆರೋಪಿ ವಿಕಾಸ್ ಜೋರ್ಡಿಯಾನಿಗೆ 10 ವರ್ಷ ಕಠಿಣ ಶಿಕ್ಷೆ ಹಾಗೂ 15 ಸಾವಿರ ದಂಡ ವಿಧಿಸಿದ್ದಾರೆ.
ದಂಡದ ಮೊತ್ತವನ್ನು ಪಾವತಿಸದಿದ್ದಲ್ಲಿ 3 ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಪೊಲೀಸ್ ಇಲಾಖೆಯ ಪರವಾಗಿ ಸರಕಾರಿ
ಅಭಿಯೋಜಕರಾದ ಎನ್.ಪಿ. ದೇವೇಂದ್ರ ಅವರು ವಾದ ಮಂಡಿಸಿದ್ದರು.
‘ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು. ಅವರು ಕೇಳಿದ ಕೆಲಸ ಮಾಡಿಕೊಡಬೇಕು, ವಿಳಂಬ ಮಾಡಬೇಡಿ’ ಎಂದು ಇಂಧನ ಸಚಿವ ಹಾಗೂ ಸರ್ವಜ್ಞ ನಗರ…
ಅಕ್ರಮವಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದ ಗೋದಾಮುಗಳ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 18 ಲಕ್ಷ ಮೌಲ್ಯದ 1296…
ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…
ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…
ದೇವರಹಿಪ್ಪರಗಿ: ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…
ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…