ಮಡಿಕೇರಿಯಲ್ಲಿ ಒಂಟಿ ಮಹಿಳೆ ವಾಸವಾಗಿದ್ದ ಮನೆಗೆ ನುಗ್ಗಿ ಹಲ್ಲೆ ಮಾಡಿ ಚಿನ್ನದ ಕರಿಮಣಿ ಸರ ಮತ್ತು ಉಂಗುರ ದರೋಡೆ ಮಾಡಿದ್ದ ಆರೋಪಿಗೆ ಮಡಿಕೇರಿಯ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷ ಕಠಿಣ ಶಿಕ್ಷೆ, 15 ಸಾವಿರ ದಂಡ ಹಾಗೂ ದಂಡದ ಮೊತ್ತವನ್ನು ಪಾವತಿಸದಿದ್ದಲ್ಲಿ 3 ತಿಂಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಇಬ್ಬನಿ ರೆಸಾರ್ಟ್ ನಲ್ಲಿ ಕೆಲಸ ಮಾಡಿಕೊಂಡಿದ್ದ ರಾಜಸ್ಥಾನ ಮೂಲದ ವಿಕಾಸ್ ಜೋರ್ಡಿಯಾ (35) ಎಂಬಾತ ಶಿಕ್ಷೆಗೊಳಗಾದವನಾಗಿದ್ದಾನೆ.
ಆರೋಪಿ ದಿನಾಂಕ 05-11-2023 ರಂದು ಮಡಿಕೇರಿ ನಗರದ IDBI, ಬ್ಯಾಂಕ್ ಎದುರು, ಸಾಕಮ್ಮ ಪ್ರಭಾಕರ್ ಎಂಬುವವರು ಒಂಟಿಯಾಗಿ ವಾಸವಿದ್ದ ಮನೆಗೆ ಹೊಂಚು ಹಾಕಿ ನುಗ್ಗಿದ್ದಾನೆ. ಅವರ ಮೇಲೆ ಹಲ್ಲೆ ಮಾಡಿ ತಲೆಗೆ ಗಾಯಗೊಳಿಸಿ ಕತ್ತಿನಲ್ಲಿದ್ದ ಚಿನ್ನದ ಕರಿಮಣಿ ಸರವನ್ನು ಮತ್ತು ಕೈ ಬೆರಳಿನಲ್ಲಿದ್ದ ಉಂಗುರವನ್ನು ಕಸಿದುಕೊಂಡು ಪರಾರಿ ಆಗಿದ್ದ.
ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ 397 IPC ಅಡಿಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಕೈಗೊಳ್ಳಲಾಗಿ ದಿನಾಂಕ 06-11-2023 ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು.
ಪ್ರಕರಣದ ತನಿಖಾಧಿಕಾರಿಯಾಗಿದ್ದ ಮಡಿಕೇರಿ ನಗರ ಪೊಲೀಸ್ ವೃತ್ತ ನಿರೀಕ್ಷಕರಾದ ಅನೂಪ್ ಮಾದಪ್ಪ, ಹೆಡ್ ಕಾನ್ಸ್ ಟೇಬಲ್ ಗಳಾದ ಎ.ವಿ. ಕಿರಣ್ ಮತ್ತು ಡಿ. ಹೆಚ್. ಸುಮಿತಾ ಹಾಗೂ ಸಿಬ್ಬಂದಿಗಳು ಪ್ರಕರಣದ ಸಂಪೂರ್ಣ ತನಿಖೆ ಕೈಗೊಂಡು ದಿನಾಂಕ 02-01-2024 ರಂದು ಮಡಿಕೇರಿಯ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಜಿ. ಪ್ರಶಾಂತಿ ಅವರು ಆರೋಪ ಸಾಬೀತು ಆದ ಹಿನ್ನೆಲೆಯಲ್ಲಿ ದಿನಾಂಕ 09-04-2025 ರಂದು ಆರೋಪಿ ವಿಕಾಸ್ ಜೋರ್ಡಿಯಾನಿಗೆ 10 ವರ್ಷ ಕಠಿಣ ಶಿಕ್ಷೆ ಹಾಗೂ 15 ಸಾವಿರ ದಂಡ ವಿಧಿಸಿದ್ದಾರೆ.
ದಂಡದ ಮೊತ್ತವನ್ನು ಪಾವತಿಸದಿದ್ದಲ್ಲಿ 3 ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಪೊಲೀಸ್ ಇಲಾಖೆಯ ಪರವಾಗಿ ಸರಕಾರಿ
ಅಭಿಯೋಜಕರಾದ ಎನ್.ಪಿ. ದೇವೇಂದ್ರ ಅವರು ವಾದ ಮಂಡಿಸಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…