ಮಡಿಕೇರಿಯಲ್ಲಿ ಒಂಟಿ ಮಹಿಳೆ ವಾಸವಾಗಿದ್ದ ಮನೆಗೆ ನುಗ್ಗಿ ಹಲ್ಲೆ ಮಾಡಿ ಚಿನ್ನದ ಕರಿಮಣಿ ಸರ ಮತ್ತು ಉಂಗುರ ದರೋಡೆ ಮಾಡಿದ್ದ ಆರೋಪಿಗೆ ಮಡಿಕೇರಿಯ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷ ಕಠಿಣ ಶಿಕ್ಷೆ, 15 ಸಾವಿರ ದಂಡ ಹಾಗೂ ದಂಡದ ಮೊತ್ತವನ್ನು ಪಾವತಿಸದಿದ್ದಲ್ಲಿ 3 ತಿಂಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಇಬ್ಬನಿ ರೆಸಾರ್ಟ್ ನಲ್ಲಿ ಕೆಲಸ ಮಾಡಿಕೊಂಡಿದ್ದ ರಾಜಸ್ಥಾನ ಮೂಲದ ವಿಕಾಸ್ ಜೋರ್ಡಿಯಾ (35) ಎಂಬಾತ ಶಿಕ್ಷೆಗೊಳಗಾದವನಾಗಿದ್ದಾನೆ.
ಆರೋಪಿ ದಿನಾಂಕ 05-11-2023 ರಂದು ಮಡಿಕೇರಿ ನಗರದ IDBI, ಬ್ಯಾಂಕ್ ಎದುರು, ಸಾಕಮ್ಮ ಪ್ರಭಾಕರ್ ಎಂಬುವವರು ಒಂಟಿಯಾಗಿ ವಾಸವಿದ್ದ ಮನೆಗೆ ಹೊಂಚು ಹಾಕಿ ನುಗ್ಗಿದ್ದಾನೆ. ಅವರ ಮೇಲೆ ಹಲ್ಲೆ ಮಾಡಿ ತಲೆಗೆ ಗಾಯಗೊಳಿಸಿ ಕತ್ತಿನಲ್ಲಿದ್ದ ಚಿನ್ನದ ಕರಿಮಣಿ ಸರವನ್ನು ಮತ್ತು ಕೈ ಬೆರಳಿನಲ್ಲಿದ್ದ ಉಂಗುರವನ್ನು ಕಸಿದುಕೊಂಡು ಪರಾರಿ ಆಗಿದ್ದ.
ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ 397 IPC ಅಡಿಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಕೈಗೊಳ್ಳಲಾಗಿ ದಿನಾಂಕ 06-11-2023 ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು.
ಪ್ರಕರಣದ ತನಿಖಾಧಿಕಾರಿಯಾಗಿದ್ದ ಮಡಿಕೇರಿ ನಗರ ಪೊಲೀಸ್ ವೃತ್ತ ನಿರೀಕ್ಷಕರಾದ ಅನೂಪ್ ಮಾದಪ್ಪ, ಹೆಡ್ ಕಾನ್ಸ್ ಟೇಬಲ್ ಗಳಾದ ಎ.ವಿ. ಕಿರಣ್ ಮತ್ತು ಡಿ. ಹೆಚ್. ಸುಮಿತಾ ಹಾಗೂ ಸಿಬ್ಬಂದಿಗಳು ಪ್ರಕರಣದ ಸಂಪೂರ್ಣ ತನಿಖೆ ಕೈಗೊಂಡು ದಿನಾಂಕ 02-01-2024 ರಂದು ಮಡಿಕೇರಿಯ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಜಿ. ಪ್ರಶಾಂತಿ ಅವರು ಆರೋಪ ಸಾಬೀತು ಆದ ಹಿನ್ನೆಲೆಯಲ್ಲಿ ದಿನಾಂಕ 09-04-2025 ರಂದು ಆರೋಪಿ ವಿಕಾಸ್ ಜೋರ್ಡಿಯಾನಿಗೆ 10 ವರ್ಷ ಕಠಿಣ ಶಿಕ್ಷೆ ಹಾಗೂ 15 ಸಾವಿರ ದಂಡ ವಿಧಿಸಿದ್ದಾರೆ.
ದಂಡದ ಮೊತ್ತವನ್ನು ಪಾವತಿಸದಿದ್ದಲ್ಲಿ 3 ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಪೊಲೀಸ್ ಇಲಾಖೆಯ ಪರವಾಗಿ ಸರಕಾರಿ
ಅಭಿಯೋಜಕರಾದ ಎನ್.ಪಿ. ದೇವೇಂದ್ರ ಅವರು ವಾದ ಮಂಡಿಸಿದ್ದರು.
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…