‘‘ಒಂದು ದೇಶ ಒಂದು ಚುನಾವಣೆ’’ಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ವಿಚಾರ:‌ ಇಡೀ ವ್ಯವಸ್ಥೆಗೆ ವಿರುದ್ಧವಾಗಿದೆ‌-ಸಿಎಂ ಸಿದ್ದರಾಮಯ್ಯ ಕಿಡಿ

ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವ ‘‘ಒಂದು ದೇಶ ಒಂದು ಚುನಾವಣೆ’’ ಯ ಪ್ರಸ್ತಾವ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು ಮಾತ್ರವಲ್ಲ ‘‘ಅನುಷ್ಠಾನಗೊಳಿಸಲು ಕೂಡಾ ಅಸಾಧ್ಯವಾದುದು’’. ಇಂತಹದ್ದೊಂದು ಮಹತ್ವದ ಪ್ರಸ್ತಾವದ ಬಗ್ಗೆ ವಿರೋಧ ಪಕ್ಷಗಳ ಜೊತೆ ಸಮಾಲೋಚನೆಯನ್ನೂ ಮಾಡದೆ ತರಾತುರಿಯಲ್ಲಿ ಅನುಷ್ಠಾನಕ್ಕೆ ತರಲು ಹೊರಟಿರುವುದು ಪ್ರಧಾನಿ ನರೇಂದ್ರ‌ ಮೋದಿ ಸರ್ಕಾರದ ದುಷ್ಠ ಉದ್ದೇಶವನ್ನು ಅನಾವರಣಗೊಳಿಸಿದೆ ಎಂದು ಸಿಎಂ‌ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಒಂದು ಸರ್ಕಾರದ ಆದ್ಯತೆಗಳು ಏನಿರಬೇಕೆಂಬ ಸಾಮಾನ್ಯ ಜ್ಞಾನವೂ ಕೇಂದ್ರ ಸರ್ಕಾರಕ್ಕಾಗಲಿ, ಪ್ರಧಾನಮಂತ್ರಿಯವರಿಗಾಗಲಿ ಇದ್ದ ಹಾಗೆ ಕಾಣುವುದಿಲ್ಲ. ದೇಶಾದ್ಯಂತ ನಿರುದ್ಯೋಗ ತಾಂಡವವಾಡುತ್ತಿದೆ, ಹಣದುಬ್ಬರದಿಂದ ದೇಶದ ಆರ್ಥಿಕತೆ ತತ್ತರಿಸುತ್ತಿದೆ. ಅಗತ್ಯವಸ್ತುಗಳ ಬೆಲೆ ಏರಿಕೆಯಿಂದ ಜನ ಬವಣೆಪಡುತ್ತಿದ್ದಾರೆ. ದೇಶಾದ್ಯಂತ ಕಾನೂನು ಸುವ್ಯವಸ್ಥೆ ಮೇಲಿನ ನಿಯಂತ್ರಣ ತಪ್ಪಿಹೋಗಿದ್ದು, ದಲಿತರು ಮತ್ತು ಮಹಿಳೆಯರ ಮೇಲೆ ದೌರ್ಜನ್ಯಗಳು ಮಿತಿಮೀರಿ ಹೋಗುತ್ತಿದೆ. ಈ ಬಗ್ಗೆ ಯೋಚನೆ ಮಾಡಲು ಕೂಡಾ ಪುರುಸೊತ್ತಿಲ್ಲದ ಪ್ರಧಾನ ಮಂತ್ರಿಗಳು ‘‘ಒಂದು ದೇಶ ಒಂದು ಚುನಾವಣೆ’’ ಎಂಬ ಗಿಮಿಕ್ ಮೂಲಕ ಜನರ ಗಮನವನ್ನು ಬೇರೆ ಕಡೆ ಸೆಳೆದು ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಹೊರಟಿದ್ದಾರೆ ಎಂದು ಗುಡುಗಿದ್ದಾರೆ.

ಆಡಳಿತಾರೂಢ ಬಿಜೆಪಿ ಪಕ್ಷದ ಗುಪ್ತ ಅಜೆಂಡಾವನ್ನು ಒಳಗೊಂಡಿರುವ “ಒಂದು ದೇಶ ಒಂದು ಚುನಾವಣೆ” ಪ್ರಸ್ತಾವವನ್ನು ಸಂಸತ್ ನ ಒಳಗೆ ಮತ್ತು ಹೊರಗೆ ನಮ್ಮ ಪಕ್ಷ ಎದುರಿಸಲಿದೆ. ದೇಶದ ಜನಾಭಿಪ್ರಾಯವೂ ‘‘ಒಂದು ದೇಶ ಒಂದು ಚುನಾವಣೆ’’ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದರು.

ಒಂದು ದೇಶ ಒಂದು ಚುನಾವಣೆಯ ವ್ಯವಸ್ಥೆ ಸಂಪೂರ್ಣವಾಗಿ ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಲೋಕಸಭೆ ಇಲ್ಲವೆ ವಿಧಾನಸಭೆಯಲ್ಲಿ ಆಡಳಿತಾರೂಢ ಪಕ್ಷ ವಿಶ್ವಾಸಮತ ಗಳಿಸಲು ಸೋತುಹೋಗುವ ಸಂದರ್ಭದಲ್ಲಿ ಎದುರಾಗುವ ಬಿಕ್ಕಟ್ಟಿಗೆ ಪ್ರಸ್ತಾವದಲ್ಲಿ ಪರಿಹಾರ ಇಲ್ಲ. ಇಂತಹ ಸಂದರ್ಭದಲ್ಲಿ ಮಧ್ಯಂತರ ಚುನಾವಣೆಯೊಂದೇ ಯೋಗ್ಯ ಪರಿಹಾರವಾಗಿದೆ. ಇದರ ಬದಲಿಗೆ ಸದನದಲ್ಲಿ ವಿಶ್ವಾಸ ಮತ ಗಳಿಸಲು ವಿಫಲವಾದ ಅಲ್ಪಸಂಖ್ಯಾತ ಪಕ್ಷ ಅಧಿಕಾರದಲ್ಲಿ ಮುಂದುವರಿಯಲು ಅವಕಾಶ ನೀಡಿದರೆ ಅದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಗೆಯುವ ದ್ರೋಹವಾಗುತ್ತದೆ ಎಂದು ಹೇಳಿದರು.

ಇಡೀ ದೇಶದಲ್ಲಿ ಒಂದೇ ಬಾರಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳನ್ನು ನಡೆಸುವ ಶಕ್ತಿ-ಸಾಮರ್ಥ್ಯ ನಮ್ಮ ಈಗಿನ ಚುನಾವಣಾ ಆಯೋಗಕ್ಕೆ ಇಲ್ಲ. ಇದಕ್ಕಾಗಿ ನಮ್ಮ ಚುನಾವಣಾ ವ್ಯವಸ್ಥೆಯನ್ನು ದುಪ್ಪಟ್ಟು ಪ್ರಮಾಣದಲ್ಲಿ ವಿಸ್ತರಿಸಬೇಕಾಗುತ್ತದೆ. ಇವೆಲ್ಲವೂ ಅವಸರದಿಂದ ಮಾಡುವ ಕೆಲಸ ಅಲ್ಲ ಎಂದರು.

ಹೊಸ ಚುನಾವಣಾ ವ್ಯವಸ್ಥೆ ಜಾರಿಗೆ ಬರಬೇಕಾದರೆ ಮೊದಲು ಪ್ರಜಾಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ಮಾಡಬೇಕಾಗಿದೆ. ಇದರ ಜೊತೆಗೆ ಸಂವಿಧಾನದ ಕನಿಷ್ಠ ಐದು ಪರಿಚ್ಛೇದಗಳಿಗೆ ತಿದ್ದುಪಡಿ ತರಬೇಕಾಗಿದೆ. ಈಗಿನ ವ್ಯವಸ್ಥೆಯಲ್ಲಿ ಸಂವಿಧಾನ ತಿದ್ದುಪಡಿಗೆ ಬೇಕಾದಷ್ಟು ಸದಸ್ಯರ ಸಂಖ್ಯೆಯನ್ನು ಹೊಂದಿಸಿಕೊಳ್ಳುವುದು ಎನ್‌ಡಿಎ ಗೆ ಕೂಡಾ ಕಷ್ಟ ಸಾಧ್ಯ. ಇವೆಲ್ಲವೂ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ಗೊತ್ತಿದ್ದರೂ ಕೇವಲ ಜನರಲ್ಲಿ ಗೊಂದಲವನ್ನು ಹುಟ್ಟುಹಾಕಿ ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಈ ಪ್ರಸ್ತಾವವನ್ನು ಸಚಿವ ಸಂಪುಟ ಅಂಗೀಕರಿಸಿದೆ ಎಂದು ಹೇಳಿದರು.

Ramesh Babu

Journalist

Recent Posts

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

2 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

8 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

22 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

23 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

24 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

24 hours ago