Categories: ರಾಜ್ಯ

ಒಂದು ಲಕ್ಷ ಮೆಟ್ರಿಕ್‌ ಟನ್‌ ಮೆಕ್ಕೆಜೋಳವನ್ನು ರೈತರಿಂದ ನೇರ ಖರೀದಿ: ನಾಳೆಯಿಂದ ಖರೀದಿಗಾಗಿ ನೋಂದಣಿ ಪ್ರಕ್ರಿಯೆ ಆರಂಭ

ಕರ್ನಾಟಕ ಹಾಲು ಮಹಾಮಂಡಳಿ ವತಿಯಿಂದ ಪಶು ಆಹಾರ ತಯಾರಿಕೆಗಾಗಿ ಒಂದು ಲಕ್ಷ ಮೆಟ್ರಿಕ್‌ ಟನ್‌ ಮೆಕ್ಕೆಜೋಳವನ್ನು ರೈತರಿಂದ ನೇರವಾಗಿ ಬೆಂಬಲ ಬೆಲೆ ಮೂಲದರಕ್ಕೆ ರೂ.160ರಂತೆ ಉತ್ತೇಜನ ದರ ನೀಡಿ ಪ್ರತಿ ಕ್ವಿಂಟಾಲ್‌ಗೆ 2,250ರೂ. ರಂತೆ ಖರೀದಿಸಲು ಉದ್ದೇಶಿಸಲಾಗಿದೆ. ನವೆಂಬರ್‌ 13ರಿಂದ ಮೆಕ್ಕೆಜೋಳ ಖರೀದಿಗಾಗಿ ನೋಂದಣಿ ಪ್ರಕ್ರಿಯೆ ಆರಂಭಿಸಲಾಗುತ್ತದೆ.

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಕಂಗೆಟ್ಟಿರುವ ರೈತರಿಗೆ ನೆರವಾಗಲು ಕರ್ನಾಟಕ ಹಾಲು ಮಹಾಮಂಡಳಿಯಿಂದ ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿ ಮಾಡುವ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ರಾಜ್ಯ ಸರ್ಕಾರದ ಕೃಷಿ ಇಲಾಖೆಯಡಿ ಬರುವ ಫ್ರೂಟ್ಸ್ (FRUITS) ತಂತ್ರಾಂಶದಲ್ಲಿ ನೋಂದಣಿಯಾಗಿರುವ ಸಂಸ್ಥೆಯೊಂದಿಗೆ ಹಾಲಿನ ಸಂಘಕ್ಕೆ ಭೇಟಿ ನೀಡಿ ಮಕ್ಕೆಜೋಳ ಸರಬರಾಜು ಮಾಡಲು ನೋಂದಾಯಿಸಿ ಸ್ವೀಕೃತಿ ಪತ್ರ ಪಡೆಯುವುದು ಕಡ್ಡಾಯ.

ಫ್ರೂಟ್ಸ್ ನೋಂದಾಣಿಗೆ ತೊಂದರೆಯಾಗಿದ್ದರೆ ಹತ್ತಿರದ ರೈತ ಸೇವಾ ಕೇಂದ್ರಗಳಿಗೆ ಭೇಟಿ ಮಾಡಿ ಸಮಸ್ಯೆ ಬಗೆಹರಿಸಿಕೊಳ್ಳಬಹುದಾಗಿದೆ. ನೋಂದಣಿ ನಂತರ ನೋಂದಣಿ ದೃಢೀಕರಿಸಲು ರೈತರು ಮೆಕ್ಕೆಜೋಳವನ್ನು ಹಾಲು ಒಕ್ಕೂಟದ ಮೂಲಕ ಪಶು ಆಹಾರ ಘಟಕಕ್ಕೆ ತಲುಪಿಸುವ ವ್ಯವಸ್ಥೆ ಮಾಡಬೇಕಾಗಿದೆ.

Ramesh Babu

Journalist

Recent Posts

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

28 minutes ago

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…

2 hours ago

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

6 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

7 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

7 hours ago

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

10 hours ago