ಕರ್ನಾಟಕ ಹಾಲು ಮಹಾಮಂಡಳಿ ವತಿಯಿಂದ ಪಶು ಆಹಾರ ತಯಾರಿಕೆಗಾಗಿ ಒಂದು ಲಕ್ಷ ಮೆಟ್ರಿಕ್ ಟನ್ ಮೆಕ್ಕೆಜೋಳವನ್ನು ರೈತರಿಂದ ನೇರವಾಗಿ ಬೆಂಬಲ ಬೆಲೆ ಮೂಲದರಕ್ಕೆ ರೂ.160ರಂತೆ ಉತ್ತೇಜನ ದರ ನೀಡಿ ಪ್ರತಿ ಕ್ವಿಂಟಾಲ್ಗೆ 2,250ರೂ. ರಂತೆ ಖರೀದಿಸಲು ಉದ್ದೇಶಿಸಲಾಗಿದೆ. ನವೆಂಬರ್ 13ರಿಂದ ಮೆಕ್ಕೆಜೋಳ ಖರೀದಿಗಾಗಿ ನೋಂದಣಿ ಪ್ರಕ್ರಿಯೆ ಆರಂಭಿಸಲಾಗುತ್ತದೆ.
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಕಂಗೆಟ್ಟಿರುವ ರೈತರಿಗೆ ನೆರವಾಗಲು ಕರ್ನಾಟಕ ಹಾಲು ಮಹಾಮಂಡಳಿಯಿಂದ ರೈತರಿಂದ ನೇರವಾಗಿ ಮೆಕ್ಕೆಜೋಳ ಖರೀದಿ ಮಾಡುವ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ರಾಜ್ಯ ಸರ್ಕಾರದ ಕೃಷಿ ಇಲಾಖೆಯಡಿ ಬರುವ ಫ್ರೂಟ್ಸ್ (FRUITS) ತಂತ್ರಾಂಶದಲ್ಲಿ ನೋಂದಣಿಯಾಗಿರುವ ಸಂಸ್ಥೆಯೊಂದಿಗೆ ಹಾಲಿನ ಸಂಘಕ್ಕೆ ಭೇಟಿ ನೀಡಿ ಮಕ್ಕೆಜೋಳ ಸರಬರಾಜು ಮಾಡಲು ನೋಂದಾಯಿಸಿ ಸ್ವೀಕೃತಿ ಪತ್ರ ಪಡೆಯುವುದು ಕಡ್ಡಾಯ.
ಫ್ರೂಟ್ಸ್ ನೋಂದಾಣಿಗೆ ತೊಂದರೆಯಾಗಿದ್ದರೆ ಹತ್ತಿರದ ರೈತ ಸೇವಾ ಕೇಂದ್ರಗಳಿಗೆ ಭೇಟಿ ಮಾಡಿ ಸಮಸ್ಯೆ ಬಗೆಹರಿಸಿಕೊಳ್ಳಬಹುದಾಗಿದೆ. ನೋಂದಣಿ ನಂತರ ನೋಂದಣಿ ದೃಢೀಕರಿಸಲು ರೈತರು ಮೆಕ್ಕೆಜೋಳವನ್ನು ಹಾಲು ಒಕ್ಕೂಟದ ಮೂಲಕ ಪಶು ಆಹಾರ ಘಟಕಕ್ಕೆ ತಲುಪಿಸುವ ವ್ಯವಸ್ಥೆ ಮಾಡಬೇಕಾಗಿದೆ.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…