Categories: ಕೋಲಾರ

ಒಂದು ವರ್ಗಕ್ಕೆ ಸೀಮಿತವಲ್ಲದ ವಾಲ್ಮೀಕಿ ಎಲ್ಲಾ ಸಮುದಾಯಗಳಿಗೆ ಆದರ್ಶ- ಸಚಿವ ಬೈರತಿ ಸುರೇಶ್

ಕೋಲಾರ: ಮಹರ್ಷಿ ವಾಲ್ಮೀಕಿ ಯಾವುದೇ ಒಂದು ವರ್ಗಕ್ಕೆ ಸೀಮಿತವಾಗಿಲ್ಲ ಎಲ್ಲಾ ಸಮುದಾಯಗಳು ಪೂಜಿಸಲ್ಪಡುವ ಮಹಾನ್ ಚೇತನವಾಗಿದ್ದು ಅವರು ಬರೆದ ರಾಮಾಯಣ ಇಡೀ ದೇಶಕ್ಕೆ ನೀಡಿದ ಅತ್ಯಮೂಲ್ಯ ಕೊಡುಗೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ತಿಳಿಸಿದರು.

ನಗರದ ಹೊರವಲಯದ ಮಹರ್ಷಿ ವಾಲ್ಮೀಕಿ ಸಮುದಾಯ ಭವನದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ವಾಲ್ಮೀಕಿ ಸಮಾಜ ಸಂಘಟನೆಗಳ ನೇತೃತ್ವದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿರವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಾಲ್ಮೀಕಿ ಬರೆದ ರಾಮಾಯಣ ಮತ್ತು ಅಂಬೇಡ್ಕರ್ ಅವರ ಸಂವಿಧಾನವು ಅಣ್ಣತಮ್ಮಂದಿರ ರೀತಿಯಲ್ಲಿ ಒಗ್ಗಟ್ಟಿನಿಂದ ಬದುಕುವಂತೆ ಮಾಡಿದೆ ದೇಶವು ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣುವಂತಾಗಿದ್ದು ಇಂತಹ ಮಹನೀಯರ ಹಾದಿಯಲ್ಲಿ ದೇಶವು ಅಭಿವೃದ್ಧಿಯ ಕಡೆಗೆ ಹೋಗಬೇಕಾಗಿದೆ ಎಂದರು.

ದೇಶವನ್ನು ಹೊಡೆದು ಆಳುವ ಸರಕಾರದ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಜಾತಿ ಜಾತಿಗಳ ಮಧ್ಯೆ ಜಗಳ ತಂದು ರಾಜಕಾರಣ ಮಾಡಲಿದ್ದಾರೆ ಅವರನ್ನು ದೂರವಿಡಿ ಬಡವರ ಪರವಾದ ಸಿದ್ದರಾಮಯ್ಯ ಸರಕಾರವು ಎಸ್ಸಿ ಎಸ್ಟಿ ಸಮುದಾಯದ ಅಭಿವೃದ್ಧಿಗೆ 36 ಸಾವಿರ ಕೋಟಿ ಅನುದಾನವನ್ನು ಮೀಸಲಿಟ್ಟಿದೆ ವಿರೋಧ ಪಕ್ಷಗಳು ಆಡಳಿತ ಪಕ್ಷದ ವೈಖರಿಯನ್ನು ಸಹಿಸಿಕೊಳ್ಳದೇ ವಿನಾಕಾರಣ ಆರೋಪಗಳನ್ನು ಮಾಡಲು ಹೊರಟಿದ್ದಾರೆ ಇದಕ್ಕೆ ಕಿವಿ ಕೊಡಬಾರದು ಬಲಹೀನ ಸಮುದಾಯಗಳ ಅಭಿವೃದ್ಧಿಗೆ ಕಾಂಗ್ರೆಸ್ ಸರಕಾರ ಬದ್ದವಾಗಿದೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಮಾತನಾಡಿ ಅಂಬೇಡ್ಕರ್ ಅವರ ದಾರಿಯಲ್ಲಿ ಕಾಂಗ್ರೆಸ್ ಸರಕಾರವು ನಡೆಯುತ್ತಿದೆ ರಾಜ್ಯದಲ್ಲಿ ಹಿಂದುಳಿದ ವರ್ಗದ ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದಾರೆ ಎಂದು ಸಹಿಸದ ಕೆಲವರು ಅವರನ್ನು ಅಧಿಕಾರದಿಂದ ಕೆಳಗಿಸಬೇಕು ಎಂದು ಸಂಚು ನಡೆಯುತ್ತಿದೆ ಇದರ ವಿರುದ್ದ ಒಗ್ಗಟ್ಟಿನಿಂದ ಎಚ್ಚರಿಕೆ ವಹಿಸಿ ನಾವು ಎಲ್ಲರೂ ಒಗ್ಗಟ್ಟಿನಿಂದ ಹೋಗಬೇಕಾಗಿದೆ ಎಂದರು.

ಶಾಸಕ ಕೊತ್ತೂರು ಜಿ.ಮಂಜುನಾಥ್ ಮಾತನಾಡಿ ನಂಬಿಕೆಗೆ ಅರ್ಹವಾದ ವಾಲ್ಮೀಕಿ ಸಮುದಾಯವು ಎಲ್ಲಾ ಸಮುದಾಯಗಳನ್ನು ಜೊತೆಗೆ ಕರೆದುಕೊಂಡು ಹೋಗಿದ್ದಾರೆ ವಾಲ್ಮೀಕಿ ಮಹರ್ಷಿ ಜಯಂತಿಯನ್ನು ಸಾರ್ವಜನಿಕ ರಜೆಯನ್ನಾಗಿ ಘೋಷಿಸಿದೆ ಮಹರ್ಷಿ ಬರೆದ ಮಹಾಕಾವ್ಯದಲ್ಲಿ ಇರುವ ಎಲ್ಲ ಅಂಶಗಳು ಅನುಕರಣಿಯವಾಗಿವೆ ಸಮಾಜದಲ್ಲಿ ರಾಮಾಯಣದಿಂದ ಕಲಿಯಬೇಕಾದ್ದು ಬಹಳಷ್ಟಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅಕ್ರಂ ಪಾಷ, ಎಸ್ಪಿ ಬಿ‌.ನಿಖಿಲ್, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಉಪಾಧ್ಯಕ್ಷೆ ಸಂಗೀತ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ.ಶಿವಕುಮಾರ್, ಎಸ್ಪಿ ಬಿ. ನಿಖಿಲ್ , ಅಪರ ಜಿಲ್ಲಾಧಿಕಾರಿ ಮಂಗಳ, ಎಸಿ ಡಾ. ಮೈತ್ರಿ, ತಹಶಿಲ್ದಾರ್ ನಯನ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶ್ರೀನಿವಾಸನ್ , ವಾಲ್ಮೀಕಿ ಸಮಾಜದ ಮುಖಂಡರಾದ ಎನ್ ಅಂಬರೀಷ್, ಬಾಲಗೋವಿಂದ್, ಮಾಲೂರು ವೆಂಕಟರಾಮ್, ಕುಡುವನಹಳ್ಳಿ ಆನಂದ್, ಕೋಟೆ ಶ್ರೀನಿವಾಸ್, ಡಿಪಿಎಸ್ ಮುನಿರಾಜು, ಟಿ.ವಿಜಿಕುಮಾರ್, ಪಂಡಿತ್ ಮುನಿವೆಂಕಟಪ್ಪ, ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ನುಕ್ಕನಹಳ್ಳಿ ಶ್ರೀನಿವಾಸ್, ಮುಂತಾದವರು ಇದ್ದರು.

Ramesh Babu

Journalist

Recent Posts

ಮಳೆ, ಗಾಳಿ ಅವಾಂತರ: ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ಕುಂಟನಹಳ್ಳಿ, ಹುಸ್ಕೂರು ದಾರಿ ಬಂದ್

ನಿನ್ನೆ ರಾತ್ರಿ ಸುರಿದ ಮಳೆ, ಭೀಕರ ಗಾಳಿ ಅವಾಂತರದಿಂದಾಗಿ ತಾಲೂಕಿನಲ್ಲಿ ಅನೇಕ ಕಡೆ ವಿದ್ಯುತ್ ಕಂಬಗಳು, ಮರಗಳು, ಮನೆಗಳ ಮೇಲ್ಛಾವಣಿಗಳು,…

16 hours ago

ಆನ್‌ಲೈನ್ ಗೇಮ್ ನಿಷೇಧ: ‘ಆನ್‌ಲೈನ್ ಗೇಮಿಂಗ್ ಉತ್ತೇಜನ ಮತ್ತು ನಿಯಂತ್ರಣ ಕಾಯ್ದೆ 2025’ ಜಾರಿ: ಕಾಯ್ದೆ ಉಲ್ಲಂಘಿಸಿದರೆ ಭಾರೀ ದಂಡ ಮತ್ತು ಕಠಿಣ ಶಿಕ್ಷೆ ನಿಗದಿ

ದೇಶದಲ್ಲಿ ಅಣಬೆಗಳಂತೆ ಬೆಳೆಯುತ್ತಿರುವ ಆನ್‌ ಲೈನ್ ಜೂಜಾಟ ಮತ್ತು ಹಣದ ಆಟಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹೊಸದಾಗಿ…

17 hours ago

ಹೊಸಕೋಟೆ ಹೊರವಲಯದ ನೂತನ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ವ್ಹೀಲಿಂಗ್ ಹುಚ್ಚಾಟ: ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಖಾಕಿ ಪಾಠ

ಸಿಲಿಕಾನ್ ಸಿಟಿ ಹೊರವಲಯದಲ್ಲಿ ಯುವಕರಿಂದ ಡೆಡ್ಲಿ ವ್ಹೀಲಿಂಗ್ ನಡೆದಿದೆ.. ವ್ಹೀಲಿಂಗ್ ಮಾಡಿ ಪುಂಡಾಟ ಮೆರೆದವರಿಗೆ ಹೊಸಕೋಟೆ ಸಂಚಾರಿ ಪೊಲೀಸರು ಬಿಸಿ…

18 hours ago

ಬಿರುಗಾಳಿ ಸಹಿತ ಮಳೆ: ನೆಲ ಕಚ್ಚಿದ ಫಸಲಿಗೆ ಬಂದಿದ್ದ  ಬಾಳೆ ಬೆಳೆ: ಲಕ್ಷಾಂತರ ರೂ. ನಷ್ಟ: ಸಂಕಷ್ಟದಲ್ಲಿ ರೈತ

ರಾತ್ರಿ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯಾಗಿದ್ದು, ಇದರಿಂದ ಹಲವು ಕಡೆ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ. ಅದರಂತೆ ದೊಡ್ಡಬಳ್ಳಾಪುರ ತಾಲೂಕಿನ…

20 hours ago

ಮಳೆ, ಗಾಳಿ ಅವಾಂತರ: ವಿದ್ಯುತ್ ತಂತಿ ಮೇಲೆ ಬಿದ್ದ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಭಾರೀ ಗಾತ್ರದ ಝಿಂಕ್ ಅಲ್ಯೂಮಿನಿಯಮ್ ಶೀಟ್‌: ರಸ್ತೆಗೆ ಅಡ್ಡಲಾಗಿ ಬಿದ್ದ 7 ವಿದ್ಯುತ್ ಕಂಬಗಳು

ನಿನ್ನೆ ರಾತ್ರಿ ಭಾರೀ ಗಾಳಿ, ಮಳೆಗೆ ಮನೆಯ ಮೇಲ್ಛಾವಣಿಗೆ ಅಳವಡಿಸಿದ್ದ ಝಿಂಕ್ ಅಲ್ಯೂಮಿನಿಯಮ್ ಶೀಟ್‌ಗಳು ಹಾರಿ ವಿದ್ಯುತ್ ತಂತಿಗಳ ಮೇಲೆ…

21 hours ago

ಬಿರುಗಾಳಿ ಸಹಿತ ಜೋರು ಮಳೆ: ಧರೆಗುರುಳಿದ 2 ಟ್ರಾನ್ಸ್‌ಫಾರ್ಮರ್ (ವಿದ್ಯುತ್ ಪರಿವರ್ತಕ), 9 ವಿದ್ಯುತ್ ಕಂಬಗಳು: ತಪ್ಪಿದ ಭಾರೀ ಅನಾಹುತ

ಇಂದು ಸಂಜೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಜೋರು ಮಳೆಯಾಗಿದ್ದು, ಭಾರೀ ಮಳೆ ಅವಾಂತರದಿಂದಾಗಿ ಕೆಲವೆಡೆ ಅನಾಹುತಗಳು ಸಂಭವಿಸಿವೆ... ದೊಡ್ಡಬಳ್ಳಾಪುರ ತಾಲೂಕಿನ…

1 day ago