Categories: ಕೋಲಾರ

ಒಂದು ವರ್ಗಕ್ಕೆ ಸೀಮಿತವಲ್ಲದ ವಾಲ್ಮೀಕಿ ಎಲ್ಲಾ ಸಮುದಾಯಗಳಿಗೆ ಆದರ್ಶ- ಸಚಿವ ಬೈರತಿ ಸುರೇಶ್

ಕೋಲಾರ: ಮಹರ್ಷಿ ವಾಲ್ಮೀಕಿ ಯಾವುದೇ ಒಂದು ವರ್ಗಕ್ಕೆ ಸೀಮಿತವಾಗಿಲ್ಲ ಎಲ್ಲಾ ಸಮುದಾಯಗಳು ಪೂಜಿಸಲ್ಪಡುವ ಮಹಾನ್ ಚೇತನವಾಗಿದ್ದು ಅವರು ಬರೆದ ರಾಮಾಯಣ ಇಡೀ ದೇಶಕ್ಕೆ ನೀಡಿದ ಅತ್ಯಮೂಲ್ಯ ಕೊಡುಗೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ತಿಳಿಸಿದರು.

ನಗರದ ಹೊರವಲಯದ ಮಹರ್ಷಿ ವಾಲ್ಮೀಕಿ ಸಮುದಾಯ ಭವನದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ವಾಲ್ಮೀಕಿ ಸಮಾಜ ಸಂಘಟನೆಗಳ ನೇತೃತ್ವದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿರವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಾಲ್ಮೀಕಿ ಬರೆದ ರಾಮಾಯಣ ಮತ್ತು ಅಂಬೇಡ್ಕರ್ ಅವರ ಸಂವಿಧಾನವು ಅಣ್ಣತಮ್ಮಂದಿರ ರೀತಿಯಲ್ಲಿ ಒಗ್ಗಟ್ಟಿನಿಂದ ಬದುಕುವಂತೆ ಮಾಡಿದೆ ದೇಶವು ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣುವಂತಾಗಿದ್ದು ಇಂತಹ ಮಹನೀಯರ ಹಾದಿಯಲ್ಲಿ ದೇಶವು ಅಭಿವೃದ್ಧಿಯ ಕಡೆಗೆ ಹೋಗಬೇಕಾಗಿದೆ ಎಂದರು.

ದೇಶವನ್ನು ಹೊಡೆದು ಆಳುವ ಸರಕಾರದ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಜಾತಿ ಜಾತಿಗಳ ಮಧ್ಯೆ ಜಗಳ ತಂದು ರಾಜಕಾರಣ ಮಾಡಲಿದ್ದಾರೆ ಅವರನ್ನು ದೂರವಿಡಿ ಬಡವರ ಪರವಾದ ಸಿದ್ದರಾಮಯ್ಯ ಸರಕಾರವು ಎಸ್ಸಿ ಎಸ್ಟಿ ಸಮುದಾಯದ ಅಭಿವೃದ್ಧಿಗೆ 36 ಸಾವಿರ ಕೋಟಿ ಅನುದಾನವನ್ನು ಮೀಸಲಿಟ್ಟಿದೆ ವಿರೋಧ ಪಕ್ಷಗಳು ಆಡಳಿತ ಪಕ್ಷದ ವೈಖರಿಯನ್ನು ಸಹಿಸಿಕೊಳ್ಳದೇ ವಿನಾಕಾರಣ ಆರೋಪಗಳನ್ನು ಮಾಡಲು ಹೊರಟಿದ್ದಾರೆ ಇದಕ್ಕೆ ಕಿವಿ ಕೊಡಬಾರದು ಬಲಹೀನ ಸಮುದಾಯಗಳ ಅಭಿವೃದ್ಧಿಗೆ ಕಾಂಗ್ರೆಸ್ ಸರಕಾರ ಬದ್ದವಾಗಿದೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಮಾತನಾಡಿ ಅಂಬೇಡ್ಕರ್ ಅವರ ದಾರಿಯಲ್ಲಿ ಕಾಂಗ್ರೆಸ್ ಸರಕಾರವು ನಡೆಯುತ್ತಿದೆ ರಾಜ್ಯದಲ್ಲಿ ಹಿಂದುಳಿದ ವರ್ಗದ ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದಾರೆ ಎಂದು ಸಹಿಸದ ಕೆಲವರು ಅವರನ್ನು ಅಧಿಕಾರದಿಂದ ಕೆಳಗಿಸಬೇಕು ಎಂದು ಸಂಚು ನಡೆಯುತ್ತಿದೆ ಇದರ ವಿರುದ್ದ ಒಗ್ಗಟ್ಟಿನಿಂದ ಎಚ್ಚರಿಕೆ ವಹಿಸಿ ನಾವು ಎಲ್ಲರೂ ಒಗ್ಗಟ್ಟಿನಿಂದ ಹೋಗಬೇಕಾಗಿದೆ ಎಂದರು.

ಶಾಸಕ ಕೊತ್ತೂರು ಜಿ.ಮಂಜುನಾಥ್ ಮಾತನಾಡಿ ನಂಬಿಕೆಗೆ ಅರ್ಹವಾದ ವಾಲ್ಮೀಕಿ ಸಮುದಾಯವು ಎಲ್ಲಾ ಸಮುದಾಯಗಳನ್ನು ಜೊತೆಗೆ ಕರೆದುಕೊಂಡು ಹೋಗಿದ್ದಾರೆ ವಾಲ್ಮೀಕಿ ಮಹರ್ಷಿ ಜಯಂತಿಯನ್ನು ಸಾರ್ವಜನಿಕ ರಜೆಯನ್ನಾಗಿ ಘೋಷಿಸಿದೆ ಮಹರ್ಷಿ ಬರೆದ ಮಹಾಕಾವ್ಯದಲ್ಲಿ ಇರುವ ಎಲ್ಲ ಅಂಶಗಳು ಅನುಕರಣಿಯವಾಗಿವೆ ಸಮಾಜದಲ್ಲಿ ರಾಮಾಯಣದಿಂದ ಕಲಿಯಬೇಕಾದ್ದು ಬಹಳಷ್ಟಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅಕ್ರಂ ಪಾಷ, ಎಸ್ಪಿ ಬಿ‌.ನಿಖಿಲ್, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಉಪಾಧ್ಯಕ್ಷೆ ಸಂಗೀತ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ.ಶಿವಕುಮಾರ್, ಎಸ್ಪಿ ಬಿ. ನಿಖಿಲ್ , ಅಪರ ಜಿಲ್ಲಾಧಿಕಾರಿ ಮಂಗಳ, ಎಸಿ ಡಾ. ಮೈತ್ರಿ, ತಹಶಿಲ್ದಾರ್ ನಯನ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶ್ರೀನಿವಾಸನ್ , ವಾಲ್ಮೀಕಿ ಸಮಾಜದ ಮುಖಂಡರಾದ ಎನ್ ಅಂಬರೀಷ್, ಬಾಲಗೋವಿಂದ್, ಮಾಲೂರು ವೆಂಕಟರಾಮ್, ಕುಡುವನಹಳ್ಳಿ ಆನಂದ್, ಕೋಟೆ ಶ್ರೀನಿವಾಸ್, ಡಿಪಿಎಸ್ ಮುನಿರಾಜು, ಟಿ.ವಿಜಿಕುಮಾರ್, ಪಂಡಿತ್ ಮುನಿವೆಂಕಟಪ್ಪ, ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ನುಕ್ಕನಹಳ್ಳಿ ಶ್ರೀನಿವಾಸ್, ಮುಂತಾದವರು ಇದ್ದರು.

Ramesh Babu

Journalist

Recent Posts

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು

ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…

10 hours ago

ತೂಬಗೆರೆಯ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ: ಹುಂಡಿ, ತಾಳಿ, ಆಭರಣ ಕಳವು

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…

10 hours ago

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…

11 hours ago

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

13 hours ago

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

21 hours ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

21 hours ago