ಕೋಲಾರ: ಮಹರ್ಷಿ ವಾಲ್ಮೀಕಿ ಯಾವುದೇ ಒಂದು ವರ್ಗಕ್ಕೆ ಸೀಮಿತವಾಗಿಲ್ಲ ಎಲ್ಲಾ ಸಮುದಾಯಗಳು ಪೂಜಿಸಲ್ಪಡುವ ಮಹಾನ್ ಚೇತನವಾಗಿದ್ದು ಅವರು ಬರೆದ ರಾಮಾಯಣ ಇಡೀ ದೇಶಕ್ಕೆ ನೀಡಿದ ಅತ್ಯಮೂಲ್ಯ ಕೊಡುಗೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ತಿಳಿಸಿದರು.
ನಗರದ ಹೊರವಲಯದ ಮಹರ್ಷಿ ವಾಲ್ಮೀಕಿ ಸಮುದಾಯ ಭವನದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ವಾಲ್ಮೀಕಿ ಸಮಾಜ ಸಂಘಟನೆಗಳ ನೇತೃತ್ವದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿರವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಾಲ್ಮೀಕಿ ಬರೆದ ರಾಮಾಯಣ ಮತ್ತು ಅಂಬೇಡ್ಕರ್ ಅವರ ಸಂವಿಧಾನವು ಅಣ್ಣತಮ್ಮಂದಿರ ರೀತಿಯಲ್ಲಿ ಒಗ್ಗಟ್ಟಿನಿಂದ ಬದುಕುವಂತೆ ಮಾಡಿದೆ ದೇಶವು ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣುವಂತಾಗಿದ್ದು ಇಂತಹ ಮಹನೀಯರ ಹಾದಿಯಲ್ಲಿ ದೇಶವು ಅಭಿವೃದ್ಧಿಯ ಕಡೆಗೆ ಹೋಗಬೇಕಾಗಿದೆ ಎಂದರು.
ದೇಶವನ್ನು ಹೊಡೆದು ಆಳುವ ಸರಕಾರದ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಜಾತಿ ಜಾತಿಗಳ ಮಧ್ಯೆ ಜಗಳ ತಂದು ರಾಜಕಾರಣ ಮಾಡಲಿದ್ದಾರೆ ಅವರನ್ನು ದೂರವಿಡಿ ಬಡವರ ಪರವಾದ ಸಿದ್ದರಾಮಯ್ಯ ಸರಕಾರವು ಎಸ್ಸಿ ಎಸ್ಟಿ ಸಮುದಾಯದ ಅಭಿವೃದ್ಧಿಗೆ 36 ಸಾವಿರ ಕೋಟಿ ಅನುದಾನವನ್ನು ಮೀಸಲಿಟ್ಟಿದೆ ವಿರೋಧ ಪಕ್ಷಗಳು ಆಡಳಿತ ಪಕ್ಷದ ವೈಖರಿಯನ್ನು ಸಹಿಸಿಕೊಳ್ಳದೇ ವಿನಾಕಾರಣ ಆರೋಪಗಳನ್ನು ಮಾಡಲು ಹೊರಟಿದ್ದಾರೆ ಇದಕ್ಕೆ ಕಿವಿ ಕೊಡಬಾರದು ಬಲಹೀನ ಸಮುದಾಯಗಳ ಅಭಿವೃದ್ಧಿಗೆ ಕಾಂಗ್ರೆಸ್ ಸರಕಾರ ಬದ್ದವಾಗಿದೆ ಎಂದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಮಾತನಾಡಿ ಅಂಬೇಡ್ಕರ್ ಅವರ ದಾರಿಯಲ್ಲಿ ಕಾಂಗ್ರೆಸ್ ಸರಕಾರವು ನಡೆಯುತ್ತಿದೆ ರಾಜ್ಯದಲ್ಲಿ ಹಿಂದುಳಿದ ವರ್ಗದ ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದಾರೆ ಎಂದು ಸಹಿಸದ ಕೆಲವರು ಅವರನ್ನು ಅಧಿಕಾರದಿಂದ ಕೆಳಗಿಸಬೇಕು ಎಂದು ಸಂಚು ನಡೆಯುತ್ತಿದೆ ಇದರ ವಿರುದ್ದ ಒಗ್ಗಟ್ಟಿನಿಂದ ಎಚ್ಚರಿಕೆ ವಹಿಸಿ ನಾವು ಎಲ್ಲರೂ ಒಗ್ಗಟ್ಟಿನಿಂದ ಹೋಗಬೇಕಾಗಿದೆ ಎಂದರು.
ಶಾಸಕ ಕೊತ್ತೂರು ಜಿ.ಮಂಜುನಾಥ್ ಮಾತನಾಡಿ ನಂಬಿಕೆಗೆ ಅರ್ಹವಾದ ವಾಲ್ಮೀಕಿ ಸಮುದಾಯವು ಎಲ್ಲಾ ಸಮುದಾಯಗಳನ್ನು ಜೊತೆಗೆ ಕರೆದುಕೊಂಡು ಹೋಗಿದ್ದಾರೆ ವಾಲ್ಮೀಕಿ ಮಹರ್ಷಿ ಜಯಂತಿಯನ್ನು ಸಾರ್ವಜನಿಕ ರಜೆಯನ್ನಾಗಿ ಘೋಷಿಸಿದೆ ಮಹರ್ಷಿ ಬರೆದ ಮಹಾಕಾವ್ಯದಲ್ಲಿ ಇರುವ ಎಲ್ಲ ಅಂಶಗಳು ಅನುಕರಣಿಯವಾಗಿವೆ ಸಮಾಜದಲ್ಲಿ ರಾಮಾಯಣದಿಂದ ಕಲಿಯಬೇಕಾದ್ದು ಬಹಳಷ್ಟಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅಕ್ರಂ ಪಾಷ, ಎಸ್ಪಿ ಬಿ.ನಿಖಿಲ್, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಉಪಾಧ್ಯಕ್ಷೆ ಸಂಗೀತ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ.ಶಿವಕುಮಾರ್, ಎಸ್ಪಿ ಬಿ. ನಿಖಿಲ್ , ಅಪರ ಜಿಲ್ಲಾಧಿಕಾರಿ ಮಂಗಳ, ಎಸಿ ಡಾ. ಮೈತ್ರಿ, ತಹಶಿಲ್ದಾರ್ ನಯನ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶ್ರೀನಿವಾಸನ್ , ವಾಲ್ಮೀಕಿ ಸಮಾಜದ ಮುಖಂಡರಾದ ಎನ್ ಅಂಬರೀಷ್, ಬಾಲಗೋವಿಂದ್, ಮಾಲೂರು ವೆಂಕಟರಾಮ್, ಕುಡುವನಹಳ್ಳಿ ಆನಂದ್, ಕೋಟೆ ಶ್ರೀನಿವಾಸ್, ಡಿಪಿಎಸ್ ಮುನಿರಾಜು, ಟಿ.ವಿಜಿಕುಮಾರ್, ಪಂಡಿತ್ ಮುನಿವೆಂಕಟಪ್ಪ, ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ನುಕ್ಕನಹಳ್ಳಿ ಶ್ರೀನಿವಾಸ್, ಮುಂತಾದವರು ಇದ್ದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…