Categories: ಕೋಲಾರ

ಒಂದು ವರ್ಗಕ್ಕೆ ಸೀಮಿತವಲ್ಲದ ವಾಲ್ಮೀಕಿ ಎಲ್ಲಾ ಸಮುದಾಯಗಳಿಗೆ ಆದರ್ಶ- ಸಚಿವ ಬೈರತಿ ಸುರೇಶ್

ಕೋಲಾರ: ಮಹರ್ಷಿ ವಾಲ್ಮೀಕಿ ಯಾವುದೇ ಒಂದು ವರ್ಗಕ್ಕೆ ಸೀಮಿತವಾಗಿಲ್ಲ ಎಲ್ಲಾ ಸಮುದಾಯಗಳು ಪೂಜಿಸಲ್ಪಡುವ ಮಹಾನ್ ಚೇತನವಾಗಿದ್ದು ಅವರು ಬರೆದ ರಾಮಾಯಣ ಇಡೀ ದೇಶಕ್ಕೆ ನೀಡಿದ ಅತ್ಯಮೂಲ್ಯ ಕೊಡುಗೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ತಿಳಿಸಿದರು.

ನಗರದ ಹೊರವಲಯದ ಮಹರ್ಷಿ ವಾಲ್ಮೀಕಿ ಸಮುದಾಯ ಭವನದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ವಾಲ್ಮೀಕಿ ಸಮಾಜ ಸಂಘಟನೆಗಳ ನೇತೃತ್ವದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿರವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಾಲ್ಮೀಕಿ ಬರೆದ ರಾಮಾಯಣ ಮತ್ತು ಅಂಬೇಡ್ಕರ್ ಅವರ ಸಂವಿಧಾನವು ಅಣ್ಣತಮ್ಮಂದಿರ ರೀತಿಯಲ್ಲಿ ಒಗ್ಗಟ್ಟಿನಿಂದ ಬದುಕುವಂತೆ ಮಾಡಿದೆ ದೇಶವು ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣುವಂತಾಗಿದ್ದು ಇಂತಹ ಮಹನೀಯರ ಹಾದಿಯಲ್ಲಿ ದೇಶವು ಅಭಿವೃದ್ಧಿಯ ಕಡೆಗೆ ಹೋಗಬೇಕಾಗಿದೆ ಎಂದರು.

ದೇಶವನ್ನು ಹೊಡೆದು ಆಳುವ ಸರಕಾರದ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಜಾತಿ ಜಾತಿಗಳ ಮಧ್ಯೆ ಜಗಳ ತಂದು ರಾಜಕಾರಣ ಮಾಡಲಿದ್ದಾರೆ ಅವರನ್ನು ದೂರವಿಡಿ ಬಡವರ ಪರವಾದ ಸಿದ್ದರಾಮಯ್ಯ ಸರಕಾರವು ಎಸ್ಸಿ ಎಸ್ಟಿ ಸಮುದಾಯದ ಅಭಿವೃದ್ಧಿಗೆ 36 ಸಾವಿರ ಕೋಟಿ ಅನುದಾನವನ್ನು ಮೀಸಲಿಟ್ಟಿದೆ ವಿರೋಧ ಪಕ್ಷಗಳು ಆಡಳಿತ ಪಕ್ಷದ ವೈಖರಿಯನ್ನು ಸಹಿಸಿಕೊಳ್ಳದೇ ವಿನಾಕಾರಣ ಆರೋಪಗಳನ್ನು ಮಾಡಲು ಹೊರಟಿದ್ದಾರೆ ಇದಕ್ಕೆ ಕಿವಿ ಕೊಡಬಾರದು ಬಲಹೀನ ಸಮುದಾಯಗಳ ಅಭಿವೃದ್ಧಿಗೆ ಕಾಂಗ್ರೆಸ್ ಸರಕಾರ ಬದ್ದವಾಗಿದೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಮಾತನಾಡಿ ಅಂಬೇಡ್ಕರ್ ಅವರ ದಾರಿಯಲ್ಲಿ ಕಾಂಗ್ರೆಸ್ ಸರಕಾರವು ನಡೆಯುತ್ತಿದೆ ರಾಜ್ಯದಲ್ಲಿ ಹಿಂದುಳಿದ ವರ್ಗದ ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದಾರೆ ಎಂದು ಸಹಿಸದ ಕೆಲವರು ಅವರನ್ನು ಅಧಿಕಾರದಿಂದ ಕೆಳಗಿಸಬೇಕು ಎಂದು ಸಂಚು ನಡೆಯುತ್ತಿದೆ ಇದರ ವಿರುದ್ದ ಒಗ್ಗಟ್ಟಿನಿಂದ ಎಚ್ಚರಿಕೆ ವಹಿಸಿ ನಾವು ಎಲ್ಲರೂ ಒಗ್ಗಟ್ಟಿನಿಂದ ಹೋಗಬೇಕಾಗಿದೆ ಎಂದರು.

ಶಾಸಕ ಕೊತ್ತೂರು ಜಿ.ಮಂಜುನಾಥ್ ಮಾತನಾಡಿ ನಂಬಿಕೆಗೆ ಅರ್ಹವಾದ ವಾಲ್ಮೀಕಿ ಸಮುದಾಯವು ಎಲ್ಲಾ ಸಮುದಾಯಗಳನ್ನು ಜೊತೆಗೆ ಕರೆದುಕೊಂಡು ಹೋಗಿದ್ದಾರೆ ವಾಲ್ಮೀಕಿ ಮಹರ್ಷಿ ಜಯಂತಿಯನ್ನು ಸಾರ್ವಜನಿಕ ರಜೆಯನ್ನಾಗಿ ಘೋಷಿಸಿದೆ ಮಹರ್ಷಿ ಬರೆದ ಮಹಾಕಾವ್ಯದಲ್ಲಿ ಇರುವ ಎಲ್ಲ ಅಂಶಗಳು ಅನುಕರಣಿಯವಾಗಿವೆ ಸಮಾಜದಲ್ಲಿ ರಾಮಾಯಣದಿಂದ ಕಲಿಯಬೇಕಾದ್ದು ಬಹಳಷ್ಟಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅಕ್ರಂ ಪಾಷ, ಎಸ್ಪಿ ಬಿ‌.ನಿಖಿಲ್, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಉಪಾಧ್ಯಕ್ಷೆ ಸಂಗೀತ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ.ಶಿವಕುಮಾರ್, ಎಸ್ಪಿ ಬಿ. ನಿಖಿಲ್ , ಅಪರ ಜಿಲ್ಲಾಧಿಕಾರಿ ಮಂಗಳ, ಎಸಿ ಡಾ. ಮೈತ್ರಿ, ತಹಶಿಲ್ದಾರ್ ನಯನ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶ್ರೀನಿವಾಸನ್ , ವಾಲ್ಮೀಕಿ ಸಮಾಜದ ಮುಖಂಡರಾದ ಎನ್ ಅಂಬರೀಷ್, ಬಾಲಗೋವಿಂದ್, ಮಾಲೂರು ವೆಂಕಟರಾಮ್, ಕುಡುವನಹಳ್ಳಿ ಆನಂದ್, ಕೋಟೆ ಶ್ರೀನಿವಾಸ್, ಡಿಪಿಎಸ್ ಮುನಿರಾಜು, ಟಿ.ವಿಜಿಕುಮಾರ್, ಪಂಡಿತ್ ಮುನಿವೆಂಕಟಪ್ಪ, ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ನುಕ್ಕನಹಳ್ಳಿ ಶ್ರೀನಿವಾಸ್, ಮುಂತಾದವರು ಇದ್ದರು.

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

4 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

5 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

10 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

12 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

15 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago