Categories: ಕೋಲಾರ

ಒಂದು ವರ್ಗಕ್ಕೆ ಸೀಮಿತವಲ್ಲದ ವಾಲ್ಮೀಕಿ ಎಲ್ಲಾ ಸಮುದಾಯಗಳಿಗೆ ಆದರ್ಶ- ಸಚಿವ ಬೈರತಿ ಸುರೇಶ್

ಕೋಲಾರ: ಮಹರ್ಷಿ ವಾಲ್ಮೀಕಿ ಯಾವುದೇ ಒಂದು ವರ್ಗಕ್ಕೆ ಸೀಮಿತವಾಗಿಲ್ಲ ಎಲ್ಲಾ ಸಮುದಾಯಗಳು ಪೂಜಿಸಲ್ಪಡುವ ಮಹಾನ್ ಚೇತನವಾಗಿದ್ದು ಅವರು ಬರೆದ ರಾಮಾಯಣ ಇಡೀ ದೇಶಕ್ಕೆ ನೀಡಿದ ಅತ್ಯಮೂಲ್ಯ ಕೊಡುಗೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ತಿಳಿಸಿದರು.

ನಗರದ ಹೊರವಲಯದ ಮಹರ್ಷಿ ವಾಲ್ಮೀಕಿ ಸಮುದಾಯ ಭವನದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ವಾಲ್ಮೀಕಿ ಸಮಾಜ ಸಂಘಟನೆಗಳ ನೇತೃತ್ವದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿರವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಾಲ್ಮೀಕಿ ಬರೆದ ರಾಮಾಯಣ ಮತ್ತು ಅಂಬೇಡ್ಕರ್ ಅವರ ಸಂವಿಧಾನವು ಅಣ್ಣತಮ್ಮಂದಿರ ರೀತಿಯಲ್ಲಿ ಒಗ್ಗಟ್ಟಿನಿಂದ ಬದುಕುವಂತೆ ಮಾಡಿದೆ ದೇಶವು ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣುವಂತಾಗಿದ್ದು ಇಂತಹ ಮಹನೀಯರ ಹಾದಿಯಲ್ಲಿ ದೇಶವು ಅಭಿವೃದ್ಧಿಯ ಕಡೆಗೆ ಹೋಗಬೇಕಾಗಿದೆ ಎಂದರು.

ದೇಶವನ್ನು ಹೊಡೆದು ಆಳುವ ಸರಕಾರದ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಜಾತಿ ಜಾತಿಗಳ ಮಧ್ಯೆ ಜಗಳ ತಂದು ರಾಜಕಾರಣ ಮಾಡಲಿದ್ದಾರೆ ಅವರನ್ನು ದೂರವಿಡಿ ಬಡವರ ಪರವಾದ ಸಿದ್ದರಾಮಯ್ಯ ಸರಕಾರವು ಎಸ್ಸಿ ಎಸ್ಟಿ ಸಮುದಾಯದ ಅಭಿವೃದ್ಧಿಗೆ 36 ಸಾವಿರ ಕೋಟಿ ಅನುದಾನವನ್ನು ಮೀಸಲಿಟ್ಟಿದೆ ವಿರೋಧ ಪಕ್ಷಗಳು ಆಡಳಿತ ಪಕ್ಷದ ವೈಖರಿಯನ್ನು ಸಹಿಸಿಕೊಳ್ಳದೇ ವಿನಾಕಾರಣ ಆರೋಪಗಳನ್ನು ಮಾಡಲು ಹೊರಟಿದ್ದಾರೆ ಇದಕ್ಕೆ ಕಿವಿ ಕೊಡಬಾರದು ಬಲಹೀನ ಸಮುದಾಯಗಳ ಅಭಿವೃದ್ಧಿಗೆ ಕಾಂಗ್ರೆಸ್ ಸರಕಾರ ಬದ್ದವಾಗಿದೆ ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಮಾತನಾಡಿ ಅಂಬೇಡ್ಕರ್ ಅವರ ದಾರಿಯಲ್ಲಿ ಕಾಂಗ್ರೆಸ್ ಸರಕಾರವು ನಡೆಯುತ್ತಿದೆ ರಾಜ್ಯದಲ್ಲಿ ಹಿಂದುಳಿದ ವರ್ಗದ ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದಾರೆ ಎಂದು ಸಹಿಸದ ಕೆಲವರು ಅವರನ್ನು ಅಧಿಕಾರದಿಂದ ಕೆಳಗಿಸಬೇಕು ಎಂದು ಸಂಚು ನಡೆಯುತ್ತಿದೆ ಇದರ ವಿರುದ್ದ ಒಗ್ಗಟ್ಟಿನಿಂದ ಎಚ್ಚರಿಕೆ ವಹಿಸಿ ನಾವು ಎಲ್ಲರೂ ಒಗ್ಗಟ್ಟಿನಿಂದ ಹೋಗಬೇಕಾಗಿದೆ ಎಂದರು.

ಶಾಸಕ ಕೊತ್ತೂರು ಜಿ.ಮಂಜುನಾಥ್ ಮಾತನಾಡಿ ನಂಬಿಕೆಗೆ ಅರ್ಹವಾದ ವಾಲ್ಮೀಕಿ ಸಮುದಾಯವು ಎಲ್ಲಾ ಸಮುದಾಯಗಳನ್ನು ಜೊತೆಗೆ ಕರೆದುಕೊಂಡು ಹೋಗಿದ್ದಾರೆ ವಾಲ್ಮೀಕಿ ಮಹರ್ಷಿ ಜಯಂತಿಯನ್ನು ಸಾರ್ವಜನಿಕ ರಜೆಯನ್ನಾಗಿ ಘೋಷಿಸಿದೆ ಮಹರ್ಷಿ ಬರೆದ ಮಹಾಕಾವ್ಯದಲ್ಲಿ ಇರುವ ಎಲ್ಲ ಅಂಶಗಳು ಅನುಕರಣಿಯವಾಗಿವೆ ಸಮಾಜದಲ್ಲಿ ರಾಮಾಯಣದಿಂದ ಕಲಿಯಬೇಕಾದ್ದು ಬಹಳಷ್ಟಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅಕ್ರಂ ಪಾಷ, ಎಸ್ಪಿ ಬಿ‌.ನಿಖಿಲ್, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಉಪಾಧ್ಯಕ್ಷೆ ಸಂಗೀತ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ.ಶಿವಕುಮಾರ್, ಎಸ್ಪಿ ಬಿ. ನಿಖಿಲ್ , ಅಪರ ಜಿಲ್ಲಾಧಿಕಾರಿ ಮಂಗಳ, ಎಸಿ ಡಾ. ಮೈತ್ರಿ, ತಹಶಿಲ್ದಾರ್ ನಯನ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶ್ರೀನಿವಾಸನ್ , ವಾಲ್ಮೀಕಿ ಸಮಾಜದ ಮುಖಂಡರಾದ ಎನ್ ಅಂಬರೀಷ್, ಬಾಲಗೋವಿಂದ್, ಮಾಲೂರು ವೆಂಕಟರಾಮ್, ಕುಡುವನಹಳ್ಳಿ ಆನಂದ್, ಕೋಟೆ ಶ್ರೀನಿವಾಸ್, ಡಿಪಿಎಸ್ ಮುನಿರಾಜು, ಟಿ.ವಿಜಿಕುಮಾರ್, ಪಂಡಿತ್ ಮುನಿವೆಂಕಟಪ್ಪ, ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ, ನುಕ್ಕನಹಳ್ಳಿ ಶ್ರೀನಿವಾಸ್, ಮುಂತಾದವರು ಇದ್ದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

5 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

17 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

17 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

19 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

19 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

1 day ago