ಒಂದು ವಾರದಲ್ಲಿ ಗೃಹಲಕ್ಷ್ಮಿ 23ನೇ ಕಂತು ಬಿಡುಗಡೆ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ನಮ್ಮ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಲೇ ಬಂದಿದೆ. ಇನ್ನೂ ಒಂದು ವಾರದಲ್ಲಿ ಗೃಹಲಕ್ಷ್ಮಿಯ 23 ನೇ ಕಂತು ಹಣ ನಿಮ್ಮ ಖಾತೆಗೆ ಜಮೆಯಾಗಲಿದೆ, ಹಾಗೂ ಜಿಲ್ಲೆಯಲ್ಲಿ 130 ಅಂಗನವಾಡಿ ಕೇಂದ್ರಗಳನ್ನು ನಿರ್ಮಿಸಲು 5 ಕೋಟಿ ಹಣ ಬಿಡುಗಡೆ ಮಾಡುತ್ತೇನೆಂದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ವರ್ ಭರವಸೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಐ.ಸಿ.ಡಿ.ಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಉದ್ಘಾಟನೆ ಕುರಿತು ರಾಜ್ಯ ಮಟ್ಟದ ಸಮಾವೇಶದ ಪೂರ್ವಭಾವಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಮಗ್ರ ಶಿಶು ಅಭಿವೃದ್ಧಿ ಸೇವೆಗಳ ಯೋಜನೆಗೆ 50 ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ ನವೆಂಬರ್ 28 ರಂದು ಬೆಂಗಳೂರಿನಲ್ಲಿ ನಡೆಯುಲಿರುವ ರಾಜ್ಯ ಮಟ್ಟದ ಸಮಾವೇಶದಲ್ಲಿ ಮಹಿಳೆ ಮತ್ತು ಮಕ್ಕಳ ಅಭಿವೃದಿಗೆ ಪೂರಕವಾದ ಮೂರು ಯೋಜನೆಗಳಿಗೆ ಚಾಲನೆ ನೀಡಲಾಗುತ್ತಿದ್ದು, ನೀವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಾಹಿಸಿ ಯಶಸ್ವಿಗೊಳಿಸಬೇಕು ಎಂದರು.

ಇಂದಿರಾ ಗಾಂಧಿ ಅವರ ಅಂಗನವಾಡಿ ಪರಿಕಲ್ಪನೆಯಿಂದಾಗಿ ಕರ್ನಾಟಕ ರಾಜ್ಯದಲ್ಲಿ ಮೈಸೂರಿನ ಟಿ.ನರಸೀಪುರದಲ್ಲಿ ಮೊಟ್ಟಮೊದಲ ಬಾರಿಗೆ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲಾಯಿತು ಇಂದಿಗೂ ಕೂಡ ಪ್ರತಿಯೊಂದು ಗ್ರಾಮಗಳಲ್ಲಿ ಅಂಗನವಾಡಿ ಕೇಂದ್ರ ಸ್ಥಾಪಿತವಾಗಿದೆ ಇದೊಂದು ಐತಿಹಾಸಿಕ ಮೈಲಿಗಲ್ಲು.

ಸಮಾಜದಲ್ಲಿ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಹಾಗೂ ಶೋಷಣೆಯನ್ನು ತಡೆಯುವ ನಿಟ್ಟಿನಲ್ಲಿ ಇದೇ ನವೆಂಬರ್ 28 ರಂದು ರಾಜ್ಯಡ್ಯಾದಂತ ಪ್ರತಿ ಜಿಲ್ಲೆಯಲ್ಲಿಯೂ ಪಕ್ಕಪಡೆ ಪ್ರಾರಂಭವಾಗುತ್ತಿದೆ. ಇದರಲ್ಲಿ ಆರು ಜನ ಮಹಿಳೆಯರು ಕಾರ್ಯನಿರ್ವಹಿಸುತ್ತಾರೆ ಯಾವುದೇ ಸಂದರ್ಭದಲ್ಲಿಯೂ ಮಹಿಳೆಯರು ಕ್ಯೂಆರ್ ಕೋಡ್ ಆಪ್ ಅಥವಾ ಫೋನ್ ನಂಬರ್ ಮೂಲಕ ಅಕ್ಕಪಡೆಯನ್ನು ಸಂಪರ್ಕಿಸಿ ಸಹಾಯ ಪಡೆಯಬಹುದು.

ಗೃಹಲಕ್ಷ್ಮಿ ಬ್ಯಾಂಕ್ ಯೋಜನೆಯು ಮಹಿಳೆಯರಿಗೆ ಆರ್ಥಿಕವಾಗಿ ಸಹಾಯ ಮಾಡುವ ನಿಟ್ಟಿನಲ್ಲಿ ಪ್ರಾರಂಭಿಸಲಾಗುತ್ತಿದ್ದು, ಪ್ರತಿಯೊಬ್ಬ ಮಹಿಳೆಯು ಒಂದು ಸಾವಿರ ರೂ.ಗಳಿಂದ ಖಾತೆಯನ್ನು ಪ್ರಾರಂಭಿಸಿ ಪ್ರತಿ ತಿಂಗಳು 200 ರೂಗಳನ್ನು ಉಳಿತಾಯ ಮಾಡಿದರೆ, ಆರು ತಿಂಗಳ ನಂತರ ಮಹಿಳೆಯು 30 ಸಾವಿರ ರೂ.ಗಳಿಂದ 3 ಲಕ್ಷಗಳ ವರೆಗೆ ರಾಷ್ಟ್ರೀಕೃತ ಬ್ಯಾಂಕ್ ದರದಲ್ಲಿ ಅತಿ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯಗಳನ್ನು ನೀಡಲಾಗುವುದು ಎಂದರು.

ರಾಜ್ಯದ ಐದು ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆಜಿ ಹಾಗೂ ಯುಕೆಜಿ ಪೂರ್ವ ಪ್ರಾಥಮಿಕ ಆರಂಭಿಸ ಲಾಗುತ್ತಿದೆ. ಖಾಸಗಿ ಶಾಲೆಗಳಲ್ಲಿ ಸಿಗುವಂತಹ ಗುಣಮಟ್ಟದ ಹಾಗೂ ಇಂಗ್ಲಿಷ್ ಶಿಕ್ಷಣ ಬಡಮಕ್ಕಳಿಗೂ ಸಿಗಬೇಕು ಎಂಬುದನ್ನ ಮನಗಂಡ ರಾಜ್ಯ ಸರ್ಕಾರ ಅಂಗನವಾಡಿಗಳಲ್ಲಿ ಎಲ್‌ಕೆಜಿ-ಯುಕೆಜಿ ತರಗತಿಗಳನ್ನು ಆರಂಭಿಸಲು ಮುಂದಾಗಿದ್ದೇವೆ.

ಗೃಹ ಲಕ್ಷ್ಮಿ ಯೋಜನೆಯ ಯಶಸ್ಸಿಗೆ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರೆ ಕಾರಣ, ಕಳೆದ ಬಾರಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನವನ್ನು 1000 ಹೆಚ್ಚಿಸಲಾಗಿದೆ ಮುಂದಿನ ದಿನಗಳಲ್ಲಿ ಮತ್ತೊಂದು ಸಾವಿರ ಹೆಚ್ಚಿ ಸುವಂತೆ ಮನವಿ ಮಾಡಲಾಗುವುದು.

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಮಾತನಾಡಿ, ನಮ್ಮ ಸರ್ಕಾರ ಜನಪರವಾಗಿ ಕೆಲಸ ಮಾಡಿಕೊಂಡು ಬರುತ್ತಿದೆ. ನಾವು ಚುನಾವಣೆ ಪ್ರಣಾಳಿಕೆಯಲ್ಲಿ ಹೇಳಿದ ಹಾಗೇ ಐದು ಪಂಚ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದೇವೆ. ದೇಶದಲ್ಲಿ ಎಲ್ಲರೂ ಶೈಕ್ಷಣಿಕ, ಸಾಮಾಜಿಕ, ಆರ್ಥಿಕವಾಗಿ ಸಮಾನತೆಯಿಂದ ಬದುಕಲು ಡಾ.ಬಿ.ಆರ್ ಅಂಬೇಡ್ಕರ್ ಅವರು ನಮಗೆ ಸಂವಿಧಾನವನ್ನು ನೀಡಿದ್ದಾರೆ. ಹಾಗೇ ದೇಶದ ಒಳಿತಿಗೆ ಗಾಂಧೀಜಿ, ಸುಭಾಷ್ ಚಂದ್ರಬೋಸ್, ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಧ್ಯೇಯವನ್ನು ಅಳವಡಿಸಿಕೊಳ್ಳಬೇಕು.

ರಾಜೀವ್ ಗಾಂಧಿ ಮತ್ತು ಮನಮೋಹನ್ ಸಿಂಗ್ ಅವರು ಪ್ರಧಾನಿಯಾದ ಸಮಯದಲ್ಲಿ ಮಹಿಳೆಯರಿಗೆ ಮೀಸಲಾತಿಯನ್ನು ತರಲು ಶ್ರಮಿಸಿದವರು. ಜನರು ಸಮಾಜದಲ್ಲಿ ನೆಮ್ಮದಿಯಾಗಿ ಬದುಕಲು ಈ ಪಂಚ ಗ್ಯಾರಂಟಿಗಳು ದಾರಿಯಾಗಿವೆ. ಮೊಟ್ಟ ಮೊದಲ ಬಾರಿಗೆ
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ನು ನಾವು ಜಾರಿ ಮಾಡಿದೆವು. ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ,
ಅಂಗನವಾಡಿ ಕಾರ್ಯಕರ್ತೆಯರಿಗೆ ವೇತನ ಹೆಚ್ಚು ಮಾಡಿದ ಮೊಟ್ಟ ಮೊದಲ ಪಕ್ಷ ನಮ್ಮದು ಎಂದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಬಿ ರಾಜಣ್ಣ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ ಎನ್ ಅನುರಾಧ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ದೇವನಹಳ್ಳಿ ತಾಲೂಕು ಅಧ್ಯಕ್ಷರಾದ ಸಿ ಜಗನ್ನಾಥ್, ಆಲೂರು ದುದ್ದನಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಜಯಲಕ್ಷ್ಮಮ್ಮ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಲಕ್ಷ್ಮಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ ಸಿ ಮಂಜುನಾಥ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಮುದ್ದಣ್ಣ ಎಂ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕ ಉಪಸ್ಥಿತರಿದ್ದರು.

Ramesh Babu

Journalist

Recent Posts

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

4 hours ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

10 hours ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

13 hours ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

13 hours ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

16 hours ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

18 hours ago