Categories: Crime

ಒಂದೇ ಊರಿನ ಎದುರು ಬದರು ಮನೆ ವಾಸಿಗಳು: ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ: ಹತ್ತು ವರ್ಷದಿಂದ ಪ್ರತ್ಯೇಕ ವ್ಯವಹಾರ ಶುರು: ಇಬ್ಬರ ನಡುವೆ ಹುಟ್ಟಿಕೊಂಡಿದ್ದ ವೈಷಮ್ಯ ಇದೀಗ ಓರ್ವನ ಕಿಡ್ನಾಪ್ ಆ್ಯಂಡ್​ ಮರ್ಡರ್ ನಲ್ಲಿ ಅಂತ್ಯ

ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ ಪ್ರತ್ಯೇಕವಾಗಿ ವ್ಯವಹಾರ ಶುರುವಿಟ್ಟುಕೊಂಡಿದ್ದರು. ಜೊತೆಗೆ ಇಬ್ಬರ ನಡುವೆ ಹುಟ್ಟಿಕೊಂಡಿದ್ದ ವೈಷಮ್ಯ ಇದೀಗ ಓರ್ವನ ಕಿಡ್ನಾಪ್ ಆ್ಯಂಡ್​ ಮರ್ಡರ್ ನಲ್ಲಿ ಅಂತ್ಯವಾಗಿದೆ. ಆನೇಕಲ್​​ನಲ್ಲಿ ಅಪಹರಣವಾಗಿದ್ದ ರಿಯಲ್‌ ಎಸ್ಟೇಟ್‌ ಏಜೆಂಟ್‌ ಶವ ತಮಿಳುನಾಡಿನಲ್ಲಿ ಪತ್ತೆಯಾಗಿದೆ.

ಆನೇಕಲ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ರಿಯಲ್ ಎಸ್ಟೇಟ್ ಏಜೆಂಟ್ ಗೋಪಾಲ್ ನನ್ನು ದುಷ್ಕರ್ಮಿಗಳು ಹತ್ಯೆ ಮಾಡಲಾಗಿದೆ.

ಹೊನ್ನಕಳಸಾಪುರ ಗ್ರಾಮದ ನಿವಾಸಿ ಗೋಪಾಲ್‌ ಮೊನ್ನೆ ಸಂಜೆ 7.30 ರ ಸುಮಾರಿನಲ್ಲಿ ಕರ್ಪೂರು ಗೇಟ್‌ ಬಳಿ ಕಾರಿನಲ್ಲಿ ಹೋಗುತ್ತಿದ್ದಾಗ ಆತನ ಕಾರಿಗೆ ದುರ್ಷ್ಕಮಿಗಳು ವಾಹನದಿಂದ ಅಪಘಾತವೆಂಬಂತೆ ಡಿಕ್ಕಿ ಹೊಡೆದಿದ್ದಾರೆ. ನಂತರ ಗೋಪಾಲ್‌ ಮುಖಕ್ಕೆ ಪೆಪ್ಪರ್ ಸ್ಪ್ರೇ ಮಾಡಿ ಕಾರಿನಲ್ಲಿ ಅಪಹರಿಸಿಕೊಂಡು ಹೋಗಿದ್ದು, ಬಳಿಕ ತಮಿಳುನಾಡಿಗೆ ಕರೆದೊಯ್ದು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಮಾರ್ಚ್ 08ರಂದು ಸ್ನೇಹಿತನಿಗೆ ಹೆಣ್ಣು ನೋಡುವ ಕಾರ್ಯಕ್ರಮಕ್ಕೆ ಹೋಗಿ ವಾಪಸ್ಸಾಗ್ತಿದ್ದ ಗೋಪಾಲ್​​ ಕಾರಿಗೆ ಇನ್ನೊಂದು ಕಾರು ಡಿಕ್ಕಿಯಾಗಿತ್ತು. ಈ ವೇಳೆ ಕಾರಿನಿಂದ ಇಳಿಯುತ್ತಿದ್ದಂತೆ ಗೋಪಿ ಹಾಗೂ ಸ್ನೇಹಿತ ಅತೀಶ್​ಗೆ ಪೆಪ್ಪರ್​ಸ್ಪ್ರೇ ಹೊಡೆದ ಕಿರಾತಕರ ಗ್ಯಾಂಗ್​ ಗೋಪಿಯನ್ನು ಕಿಡ್ನ್ಯಾಪ್​ ಮಾಡಿ ಎಸ್ಕೇಪ್​ ಆಗಿತ್ತು.

ಇನ್ನು ಘಟನೇ ನಡೀತಿದ್ದಂತೆ ಗೋಪಾಲ್​ ಜೊತೆಗಿದ್ದ ಸ್ನೇಹಿತ ಸತೀಶ್​ ಪೊಲೀಸರಿಗೆ ದೂರು ನೀಡಿದ್ದರು. ಜೊತೆಗೆ ಕುಟುಂಬಸ್ಥರೂ ಕೂಡಾ ಹೊನ್ನಕಳಶಾಪುರದ ಮೋಹನ್ ಬಾಬು ವಿರುದ್ಧ ಅನುಮಾನ ವ್ಯಕ್ತಪಡಿಸಿದ್ದರು. ಆದ್ರೆ ಮಾರ್ಚ್ 09ರಂದು ತಮಿಳುನಾಡಿನ ಡೆಂಕಣೀಕೋಟೆ ಬಳಿ ಬರ್ಬರವಾಗಿ ಕೊಲೆಯಾದ ಸ್ಥಿತಿಯಲ್ಲಿ ಗೋಪಿ ಶವ ಪತ್ತೆಯಾಗಿದೆ. ರೊಚ್ಚಿಗೆದ್ದ ಕುಟುಂಬಸ್ಥರು ಆನೇಕಲ್ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದು ಮಾತ್ರವಲ್ಲದೆ ,ಆರೋಪಿ ಮೋಹನ್ ಬಾಬು ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಅಂದಹಾಗೆ ಮೃತ ಗೋಪಾಲ್​ ಹಾಗೂ ಆರೋಪಿ ಮೋಹನ್​ ಬಾಬು ಮೊದಲು ಜೊತೆಯಾಗಿ ರಿಯಲ್​ ಎಸ್ಟೇಟ್​ ವ್ಯವಹಾರ ಮಾಡುತ್ತಿದ್ದರು. 10 ವರ್ಷದ ಹಿಂದೆ ಗೋಪಾಲ್​ ಸ್ವಾತಿ ಎಂಬ ಯುವತಿಯನ್ನ ಮದುವೆಯಾಗಿದ್ದ. ಆದ್ರೆ ಮೋಹನ್​ಗೂ ಆಕೆ ಮೇಲೆ ಮೋಹವಿತ್ತಂತೆ. ಇದು ಇಬ್ಬರ ಮಧ್ಯೆ ದ್ವೇಷಕ್ಕೆ ಕಾರಣವಾಗಿದೆ. ಜೊತೆಗೆ ವ್ಯವಹಾರದಲ್ಲೂ ಏಳಿಗೆ ಸಹಿಸದ ಮೋಹನ್​, 2 ವರ್ಷದ ಹಿಂದೆಯೂ ಗೋಪಿಯನ್ನ ಕಿಡ್ನ್ಯಾಪ್​ ​ ಮಾಡಿ ಹಲ್ಲೆ ಮಾಡಿದ್ನಂತೆ. ಆದ್ರೆ , ಮಾರ್ಚ್ 08 ಮಾತ್ರ 25 ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು ಮೋಹನ್​ ಬಾಬು ಆತನ ಜೀವವನ್ನೇ ತೆಗೆದಿದ್ದಾನೆ.

Ramesh Babu

Journalist

Recent Posts

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

9 minutes ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

22 hours ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

24 hours ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

1 day ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

1 day ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

2 days ago