Categories: Crime

ಒಂದೇ ಊರಿನ ಎದುರು ಬದರು ಮನೆ ವಾಸಿಗಳು: ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ: ಹತ್ತು ವರ್ಷದಿಂದ ಪ್ರತ್ಯೇಕ ವ್ಯವಹಾರ ಶುರು: ಇಬ್ಬರ ನಡುವೆ ಹುಟ್ಟಿಕೊಂಡಿದ್ದ ವೈಷಮ್ಯ ಇದೀಗ ಓರ್ವನ ಕಿಡ್ನಾಪ್ ಆ್ಯಂಡ್​ ಮರ್ಡರ್ ನಲ್ಲಿ ಅಂತ್ಯ

ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ ಪ್ರತ್ಯೇಕವಾಗಿ ವ್ಯವಹಾರ ಶುರುವಿಟ್ಟುಕೊಂಡಿದ್ದರು. ಜೊತೆಗೆ ಇಬ್ಬರ ನಡುವೆ ಹುಟ್ಟಿಕೊಂಡಿದ್ದ ವೈಷಮ್ಯ ಇದೀಗ ಓರ್ವನ ಕಿಡ್ನಾಪ್ ಆ್ಯಂಡ್​ ಮರ್ಡರ್ ನಲ್ಲಿ ಅಂತ್ಯವಾಗಿದೆ. ಆನೇಕಲ್​​ನಲ್ಲಿ ಅಪಹರಣವಾಗಿದ್ದ ರಿಯಲ್‌ ಎಸ್ಟೇಟ್‌ ಏಜೆಂಟ್‌ ಶವ ತಮಿಳುನಾಡಿನಲ್ಲಿ ಪತ್ತೆಯಾಗಿದೆ.

ಆನೇಕಲ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ರಿಯಲ್ ಎಸ್ಟೇಟ್ ಏಜೆಂಟ್ ಗೋಪಾಲ್ ನನ್ನು ದುಷ್ಕರ್ಮಿಗಳು ಹತ್ಯೆ ಮಾಡಲಾಗಿದೆ.

ಹೊನ್ನಕಳಸಾಪುರ ಗ್ರಾಮದ ನಿವಾಸಿ ಗೋಪಾಲ್‌ ಮೊನ್ನೆ ಸಂಜೆ 7.30 ರ ಸುಮಾರಿನಲ್ಲಿ ಕರ್ಪೂರು ಗೇಟ್‌ ಬಳಿ ಕಾರಿನಲ್ಲಿ ಹೋಗುತ್ತಿದ್ದಾಗ ಆತನ ಕಾರಿಗೆ ದುರ್ಷ್ಕಮಿಗಳು ವಾಹನದಿಂದ ಅಪಘಾತವೆಂಬಂತೆ ಡಿಕ್ಕಿ ಹೊಡೆದಿದ್ದಾರೆ. ನಂತರ ಗೋಪಾಲ್‌ ಮುಖಕ್ಕೆ ಪೆಪ್ಪರ್ ಸ್ಪ್ರೇ ಮಾಡಿ ಕಾರಿನಲ್ಲಿ ಅಪಹರಿಸಿಕೊಂಡು ಹೋಗಿದ್ದು, ಬಳಿಕ ತಮಿಳುನಾಡಿಗೆ ಕರೆದೊಯ್ದು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಮಾರ್ಚ್ 08ರಂದು ಸ್ನೇಹಿತನಿಗೆ ಹೆಣ್ಣು ನೋಡುವ ಕಾರ್ಯಕ್ರಮಕ್ಕೆ ಹೋಗಿ ವಾಪಸ್ಸಾಗ್ತಿದ್ದ ಗೋಪಾಲ್​​ ಕಾರಿಗೆ ಇನ್ನೊಂದು ಕಾರು ಡಿಕ್ಕಿಯಾಗಿತ್ತು. ಈ ವೇಳೆ ಕಾರಿನಿಂದ ಇಳಿಯುತ್ತಿದ್ದಂತೆ ಗೋಪಿ ಹಾಗೂ ಸ್ನೇಹಿತ ಅತೀಶ್​ಗೆ ಪೆಪ್ಪರ್​ಸ್ಪ್ರೇ ಹೊಡೆದ ಕಿರಾತಕರ ಗ್ಯಾಂಗ್​ ಗೋಪಿಯನ್ನು ಕಿಡ್ನ್ಯಾಪ್​ ಮಾಡಿ ಎಸ್ಕೇಪ್​ ಆಗಿತ್ತು.

ಇನ್ನು ಘಟನೇ ನಡೀತಿದ್ದಂತೆ ಗೋಪಾಲ್​ ಜೊತೆಗಿದ್ದ ಸ್ನೇಹಿತ ಸತೀಶ್​ ಪೊಲೀಸರಿಗೆ ದೂರು ನೀಡಿದ್ದರು. ಜೊತೆಗೆ ಕುಟುಂಬಸ್ಥರೂ ಕೂಡಾ ಹೊನ್ನಕಳಶಾಪುರದ ಮೋಹನ್ ಬಾಬು ವಿರುದ್ಧ ಅನುಮಾನ ವ್ಯಕ್ತಪಡಿಸಿದ್ದರು. ಆದ್ರೆ ಮಾರ್ಚ್ 09ರಂದು ತಮಿಳುನಾಡಿನ ಡೆಂಕಣೀಕೋಟೆ ಬಳಿ ಬರ್ಬರವಾಗಿ ಕೊಲೆಯಾದ ಸ್ಥಿತಿಯಲ್ಲಿ ಗೋಪಿ ಶವ ಪತ್ತೆಯಾಗಿದೆ. ರೊಚ್ಚಿಗೆದ್ದ ಕುಟುಂಬಸ್ಥರು ಆನೇಕಲ್ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದು ಮಾತ್ರವಲ್ಲದೆ ,ಆರೋಪಿ ಮೋಹನ್ ಬಾಬು ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಅಂದಹಾಗೆ ಮೃತ ಗೋಪಾಲ್​ ಹಾಗೂ ಆರೋಪಿ ಮೋಹನ್​ ಬಾಬು ಮೊದಲು ಜೊತೆಯಾಗಿ ರಿಯಲ್​ ಎಸ್ಟೇಟ್​ ವ್ಯವಹಾರ ಮಾಡುತ್ತಿದ್ದರು. 10 ವರ್ಷದ ಹಿಂದೆ ಗೋಪಾಲ್​ ಸ್ವಾತಿ ಎಂಬ ಯುವತಿಯನ್ನ ಮದುವೆಯಾಗಿದ್ದ. ಆದ್ರೆ ಮೋಹನ್​ಗೂ ಆಕೆ ಮೇಲೆ ಮೋಹವಿತ್ತಂತೆ. ಇದು ಇಬ್ಬರ ಮಧ್ಯೆ ದ್ವೇಷಕ್ಕೆ ಕಾರಣವಾಗಿದೆ. ಜೊತೆಗೆ ವ್ಯವಹಾರದಲ್ಲೂ ಏಳಿಗೆ ಸಹಿಸದ ಮೋಹನ್​, 2 ವರ್ಷದ ಹಿಂದೆಯೂ ಗೋಪಿಯನ್ನ ಕಿಡ್ನ್ಯಾಪ್​ ​ ಮಾಡಿ ಹಲ್ಲೆ ಮಾಡಿದ್ನಂತೆ. ಆದ್ರೆ , ಮಾರ್ಚ್ 08 ಮಾತ್ರ 25 ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು ಮೋಹನ್​ ಬಾಬು ಆತನ ಜೀವವನ್ನೇ ತೆಗೆದಿದ್ದಾನೆ.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

1 hour ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

2 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago