ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ ಪ್ರತ್ಯೇಕವಾಗಿ ವ್ಯವಹಾರ ಶುರುವಿಟ್ಟುಕೊಂಡಿದ್ದರು. ಜೊತೆಗೆ ಇಬ್ಬರ ನಡುವೆ ಹುಟ್ಟಿಕೊಂಡಿದ್ದ ವೈಷಮ್ಯ ಇದೀಗ ಓರ್ವನ ಕಿಡ್ನಾಪ್ ಆ್ಯಂಡ್ ಮರ್ಡರ್ ನಲ್ಲಿ ಅಂತ್ಯವಾಗಿದೆ. ಆನೇಕಲ್ನಲ್ಲಿ ಅಪಹರಣವಾಗಿದ್ದ ರಿಯಲ್ ಎಸ್ಟೇಟ್ ಏಜೆಂಟ್ ಶವ ತಮಿಳುನಾಡಿನಲ್ಲಿ ಪತ್ತೆಯಾಗಿದೆ.
ಆನೇಕಲ್ನಲ್ಲಿ ಅಪಹರಣಕ್ಕೊಳಗಾಗಿದ್ದ ರಿಯಲ್ ಎಸ್ಟೇಟ್ ಏಜೆಂಟ್ ಗೋಪಾಲ್ ನನ್ನು ದುಷ್ಕರ್ಮಿಗಳು ಹತ್ಯೆ ಮಾಡಲಾಗಿದೆ.
ಹೊನ್ನಕಳಸಾಪುರ ಗ್ರಾಮದ ನಿವಾಸಿ ಗೋಪಾಲ್ ಮೊನ್ನೆ ಸಂಜೆ 7.30 ರ ಸುಮಾರಿನಲ್ಲಿ ಕರ್ಪೂರು ಗೇಟ್ ಬಳಿ ಕಾರಿನಲ್ಲಿ ಹೋಗುತ್ತಿದ್ದಾಗ ಆತನ ಕಾರಿಗೆ ದುರ್ಷ್ಕಮಿಗಳು ವಾಹನದಿಂದ ಅಪಘಾತವೆಂಬಂತೆ ಡಿಕ್ಕಿ ಹೊಡೆದಿದ್ದಾರೆ. ನಂತರ ಗೋಪಾಲ್ ಮುಖಕ್ಕೆ ಪೆಪ್ಪರ್ ಸ್ಪ್ರೇ ಮಾಡಿ ಕಾರಿನಲ್ಲಿ ಅಪಹರಿಸಿಕೊಂಡು ಹೋಗಿದ್ದು, ಬಳಿಕ ತಮಿಳುನಾಡಿಗೆ ಕರೆದೊಯ್ದು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಮಾರ್ಚ್ 08ರಂದು ಸ್ನೇಹಿತನಿಗೆ ಹೆಣ್ಣು ನೋಡುವ ಕಾರ್ಯಕ್ರಮಕ್ಕೆ ಹೋಗಿ ವಾಪಸ್ಸಾಗ್ತಿದ್ದ ಗೋಪಾಲ್ ಕಾರಿಗೆ ಇನ್ನೊಂದು ಕಾರು ಡಿಕ್ಕಿಯಾಗಿತ್ತು. ಈ ವೇಳೆ ಕಾರಿನಿಂದ ಇಳಿಯುತ್ತಿದ್ದಂತೆ ಗೋಪಿ ಹಾಗೂ ಸ್ನೇಹಿತ ಅತೀಶ್ಗೆ ಪೆಪ್ಪರ್ಸ್ಪ್ರೇ ಹೊಡೆದ ಕಿರಾತಕರ ಗ್ಯಾಂಗ್ ಗೋಪಿಯನ್ನು ಕಿಡ್ನ್ಯಾಪ್ ಮಾಡಿ ಎಸ್ಕೇಪ್ ಆಗಿತ್ತು.
ಇನ್ನು ಘಟನೇ ನಡೀತಿದ್ದಂತೆ ಗೋಪಾಲ್ ಜೊತೆಗಿದ್ದ ಸ್ನೇಹಿತ ಸತೀಶ್ ಪೊಲೀಸರಿಗೆ ದೂರು ನೀಡಿದ್ದರು. ಜೊತೆಗೆ ಕುಟುಂಬಸ್ಥರೂ ಕೂಡಾ ಹೊನ್ನಕಳಶಾಪುರದ ಮೋಹನ್ ಬಾಬು ವಿರುದ್ಧ ಅನುಮಾನ ವ್ಯಕ್ತಪಡಿಸಿದ್ದರು. ಆದ್ರೆ ಮಾರ್ಚ್ 09ರಂದು ತಮಿಳುನಾಡಿನ ಡೆಂಕಣೀಕೋಟೆ ಬಳಿ ಬರ್ಬರವಾಗಿ ಕೊಲೆಯಾದ ಸ್ಥಿತಿಯಲ್ಲಿ ಗೋಪಿ ಶವ ಪತ್ತೆಯಾಗಿದೆ. ರೊಚ್ಚಿಗೆದ್ದ ಕುಟುಂಬಸ್ಥರು ಆನೇಕಲ್ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದು ಮಾತ್ರವಲ್ಲದೆ ,ಆರೋಪಿ ಮೋಹನ್ ಬಾಬು ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಅಂದಹಾಗೆ ಮೃತ ಗೋಪಾಲ್ ಹಾಗೂ ಆರೋಪಿ ಮೋಹನ್ ಬಾಬು ಮೊದಲು ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದರು. 10 ವರ್ಷದ ಹಿಂದೆ ಗೋಪಾಲ್ ಸ್ವಾತಿ ಎಂಬ ಯುವತಿಯನ್ನ ಮದುವೆಯಾಗಿದ್ದ. ಆದ್ರೆ ಮೋಹನ್ಗೂ ಆಕೆ ಮೇಲೆ ಮೋಹವಿತ್ತಂತೆ. ಇದು ಇಬ್ಬರ ಮಧ್ಯೆ ದ್ವೇಷಕ್ಕೆ ಕಾರಣವಾಗಿದೆ. ಜೊತೆಗೆ ವ್ಯವಹಾರದಲ್ಲೂ ಏಳಿಗೆ ಸಹಿಸದ ಮೋಹನ್, 2 ವರ್ಷದ ಹಿಂದೆಯೂ ಗೋಪಿಯನ್ನ ಕಿಡ್ನ್ಯಾಪ್ ಮಾಡಿ ಹಲ್ಲೆ ಮಾಡಿದ್ನಂತೆ. ಆದ್ರೆ , ಮಾರ್ಚ್ 08 ಮಾತ್ರ 25 ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು ಮೋಹನ್ ಬಾಬು ಆತನ ಜೀವವನ್ನೇ ತೆಗೆದಿದ್ದಾನೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…