ದೇವನಹಳ್ಳಿ ತಾಲ್ಲೂಕು, ಬೆಟ್ಟಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಾಯಸಂದ್ರ ಗ್ರಾಮದಲ್ಲಿ ಒಂದೇ ಕಾಮಗಾರಿಗೆ ಎರಡು ಕಡೆ ಬಿಲ್ ಪಾವತಿಸಿರುವ ಬಗ್ಗೆ ಸುದ್ದಿ ಮಾಧ್ಯಮ ಮತ್ತು ಪತ್ರಿಕೆಗಳಲ್ಲಿ ಪ್ರಕಟವಾಗಿರುತ್ತದೆ. ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಅನುದಾನ ಲೆಕ್ಕಶೀರ್ಷಿಕೆ 5054ರಡಿ ಕಾಮಗಾರಿಯನ್ನು ಅನುಷ್ಠಾನಗೊಳಿಸಿ ಪೂರ್ಣಗೊಂಡ ಕಾಮಗಾರಿಗೆ ಮತ್ತೊಮ್ಮೆ ಗ್ರಾಮ ಪಂಚಾಯಿತಿಯ ಸ್ವಂತ ಸಂಪನ್ಮೂಲ ನಿಧಿಯಡಿ ರೂ.4.99ಲಕ್ಷಗಳ ಅಂದಾಜು ಮೊತ್ತದಲ್ಲಿ ರಾಯಸಂದ್ರ ಗ್ರಾಮದಲ್ಲಿ ಪರಿಶಿಷ್ಟ ಪಂಗಡದ ಶ್ರೀ ಮುನಿಕೃಷ್ಣಪ್ಪ ತೋಟದಿಂದ ಪರಿಶಿಷ್ಟ ಪಂಗಡ ಮುನಿರಾಜು ತೋಟದವರೆಗೆ ರಸ್ತೆ ಮತ್ತು ಮೋರಿ ಕಾಮಗಾರಿಯನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಬಿಲ್ಲು ಮತ್ತು ದಾಖಲೆಗಳನ್ನು ಸೃಜಿಸಿಕೊಂಡು ಬಿಲ್ಲು ಪಾವತಿಸಿರುವ ಹಿನ್ನೆಲೆಯಲ್ಲಿ ಬೆಟ್ಟಕೋಟೆ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾದ ಕೆಂಪರಾಜಯ್ಯರನ್ನು ನ19ರಂದು ಅಮಾನತುಗೊಳಿಸಿ ಆದೇಶಿಸಿ ಶಿಸ್ತು ಕ್ರಮ ಜರುಗಿಸಲಾಗಿದೆ ಹಾಗೂ ಇಲಾಖಾ ವಿಚಾರಣಾ ಕೈಗೊಳ್ಳಲು ಕ್ರಮಕೈಗೊಳ್ಳಲಾಗಿದೆ.
ಕಾಮಗಾರಿಯನ್ನು ನಿರ್ಮಾಣ ಮಾಡದೇ, ಅಕ್ರಮವಾಗಿ ಬಿಲ್ಲು ಪಾವತಿಸಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಗುತ್ತಿಗೆದಾರರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದಿನಾಂಕ: 20-11-2025ರಂದು ಎಫ್.ಐ.ಆರ್. ದಾಖಲಿಸಲಾಗಿದೆ.
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…
ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…