ದೇವನಹಳ್ಳಿ ತಾಲ್ಲೂಕು, ಬೆಟ್ಟಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಾಯಸಂದ್ರ ಗ್ರಾಮದಲ್ಲಿ ಒಂದೇ ಕಾಮಗಾರಿಗೆ ಎರಡು ಕಡೆ ಬಿಲ್ ಪಾವತಿಸಿರುವ ಬಗ್ಗೆ ಸುದ್ದಿ ಮಾಧ್ಯಮ ಮತ್ತು ಪತ್ರಿಕೆಗಳಲ್ಲಿ ಪ್ರಕಟವಾಗಿರುತ್ತದೆ. ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಅನುದಾನ ಲೆಕ್ಕಶೀರ್ಷಿಕೆ 5054ರಡಿ ಕಾಮಗಾರಿಯನ್ನು ಅನುಷ್ಠಾನಗೊಳಿಸಿ ಪೂರ್ಣಗೊಂಡ ಕಾಮಗಾರಿಗೆ ಮತ್ತೊಮ್ಮೆ ಗ್ರಾಮ ಪಂಚಾಯಿತಿಯ ಸ್ವಂತ ಸಂಪನ್ಮೂಲ ನಿಧಿಯಡಿ ರೂ.4.99ಲಕ್ಷಗಳ ಅಂದಾಜು ಮೊತ್ತದಲ್ಲಿ ರಾಯಸಂದ್ರ ಗ್ರಾಮದಲ್ಲಿ ಪರಿಶಿಷ್ಟ ಪಂಗಡದ ಶ್ರೀ ಮುನಿಕೃಷ್ಣಪ್ಪ ತೋಟದಿಂದ ಪರಿಶಿಷ್ಟ ಪಂಗಡ ಮುನಿರಾಜು ತೋಟದವರೆಗೆ ರಸ್ತೆ ಮತ್ತು ಮೋರಿ ಕಾಮಗಾರಿಯನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಬಿಲ್ಲು ಮತ್ತು ದಾಖಲೆಗಳನ್ನು ಸೃಜಿಸಿಕೊಂಡು ಬಿಲ್ಲು ಪಾವತಿಸಿರುವ ಹಿನ್ನೆಲೆಯಲ್ಲಿ ಬೆಟ್ಟಕೋಟೆ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾದ ಕೆಂಪರಾಜಯ್ಯರನ್ನು ನ19ರಂದು ಅಮಾನತುಗೊಳಿಸಿ ಆದೇಶಿಸಿ ಶಿಸ್ತು ಕ್ರಮ ಜರುಗಿಸಲಾಗಿದೆ ಹಾಗೂ ಇಲಾಖಾ ವಿಚಾರಣಾ ಕೈಗೊಳ್ಳಲು ಕ್ರಮಕೈಗೊಳ್ಳಲಾಗಿದೆ.
ಕಾಮಗಾರಿಯನ್ನು ನಿರ್ಮಾಣ ಮಾಡದೇ, ಅಕ್ರಮವಾಗಿ ಬಿಲ್ಲು ಪಾವತಿಸಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಗುತ್ತಿಗೆದಾರರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದಿನಾಂಕ: 20-11-2025ರಂದು ಎಫ್.ಐ.ಆರ್. ದಾಖಲಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…