ಕತ್ತಿಯಿಂದ ಕಡಿದು ನಾಲ್ವರ ಬರ್ಬರ ಹತ್ಯೆ ಮಾಡಿರುವ ಘಟನೆ ಇಂದು ಮಧ್ಯಾಹ್ನ ಕೊಡಗಿನ ಪೊನ್ನಂಪೇಟೆ ತಾಲೂಕು ಬೇಗೂರು ಗ್ರಾಮದಲ್ಲಿ ನಡೆದಿದೆ.
ತೋಟ ಕಾರ್ಮಿಕರಾಗಿರುವ ಕರಿಯ, ಗೌರಿ, ನಾಗಿ, 6 ವರ್ಷದ ಕಾವೇರಿ ಹತ್ಯೆಗೀಡಾದವರಾಗಿದ್ದಾರೆ.
ಕಾರ್ಮಿಕ ಗಿರೀಶ್ ಎಂಬುವನಿಂದ ಈ ಭೀಕರ ಕೃತ್ಯ ನಡೆದಿದೆ ಎಂದು ಹೇಳಲಾಗಿದೆ.
ಸ್ಥಳಕ್ಕೆ ಪೊನ್ನಂಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ.
ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಕೇರಳ ರಾಜ್ಯದ ವೈನಾಡು ಜಿಲ್ಲೆಯ ತಾಲಪೋಯ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಅಲ್ಲಿನ ಪೊಲೀಸ್ ಠಾಣೆಯ ಎ ಎಸ್ ಐ ಟಿ. ಅನೀಶ್, ವಿಶೇಷ ಶಾಖೆಯ ಠಾಣಾಧಿಕಾರಿಯಾದ ಜಿ ಅನಿಲ್, ಸಿಬ್ಬಂದಿ ಶಫೀರ್ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿ ಗಿರೀಶ್ ವೈನಾಡು ಜಿಲ್ಲೆಯ ತಿರುನಲ್ಲಿಯ ಉಣಿತು ಪರಂಬು ಗ್ರಾಮದವನಾಗಿದ್ದಾನೆ ಎಂದು ಹೇಳಲಾಗಿದೆ.
ಕೂಲಿ ಕೆಲಸಕ್ಕಾಗಿ ಇವರೆಲ್ಲ ಕೊಡಗಿಗೆ ಬಂದು ಬೇಗೂರು ಗ್ರಾಮದಲ್ಲಿ ನೆಲೆಸಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ .
ಇದೀಗ ಕೇರಳ ಪೊಲೀಸರು ಕರ್ನಾಟಕ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ ಎಂದು ಹೇಳಲಾಗಿದೆ.
ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…
ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…
ದೇವರಹಿಪ್ಪರಗಿ: ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…
ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…
ಸ್ವಾಮಿಯೇ........ ಶರಣಂ ಅಯ್ಯಪ್ಪ......... ಮಹಿಳೆಯರಿಗೆ ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಎಂಬ ಬಗ್ಗೆ…
ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್ ತಲಾ ಒಂದು ಕೋಟಿ ರೂ.…