ಕತ್ತಿಯಿಂದ ಕಡಿದು ನಾಲ್ವರ ಬರ್ಬರ ಹತ್ಯೆ ಮಾಡಿರುವ ಘಟನೆ ಇಂದು ಮಧ್ಯಾಹ್ನ ಕೊಡಗಿನ ಪೊನ್ನಂಪೇಟೆ ತಾಲೂಕು ಬೇಗೂರು ಗ್ರಾಮದಲ್ಲಿ ನಡೆದಿದೆ.
ತೋಟ ಕಾರ್ಮಿಕರಾಗಿರುವ ಕರಿಯ, ಗೌರಿ, ನಾಗಿ, 6 ವರ್ಷದ ಕಾವೇರಿ ಹತ್ಯೆಗೀಡಾದವರಾಗಿದ್ದಾರೆ.
ಕಾರ್ಮಿಕ ಗಿರೀಶ್ ಎಂಬುವನಿಂದ ಈ ಭೀಕರ ಕೃತ್ಯ ನಡೆದಿದೆ ಎಂದು ಹೇಳಲಾಗಿದೆ.
ಸ್ಥಳಕ್ಕೆ ಪೊನ್ನಂಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ.
ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಕೇರಳ ರಾಜ್ಯದ ವೈನಾಡು ಜಿಲ್ಲೆಯ ತಾಲಪೋಯ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಅಲ್ಲಿನ ಪೊಲೀಸ್ ಠಾಣೆಯ ಎ ಎಸ್ ಐ ಟಿ. ಅನೀಶ್, ವಿಶೇಷ ಶಾಖೆಯ ಠಾಣಾಧಿಕಾರಿಯಾದ ಜಿ ಅನಿಲ್, ಸಿಬ್ಬಂದಿ ಶಫೀರ್ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿ ಗಿರೀಶ್ ವೈನಾಡು ಜಿಲ್ಲೆಯ ತಿರುನಲ್ಲಿಯ ಉಣಿತು ಪರಂಬು ಗ್ರಾಮದವನಾಗಿದ್ದಾನೆ ಎಂದು ಹೇಳಲಾಗಿದೆ.
ಕೂಲಿ ಕೆಲಸಕ್ಕಾಗಿ ಇವರೆಲ್ಲ ಕೊಡಗಿಗೆ ಬಂದು ಬೇಗೂರು ಗ್ರಾಮದಲ್ಲಿ ನೆಲೆಸಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ .
ಇದೀಗ ಕೇರಳ ಪೊಲೀಸರು ಕರ್ನಾಟಕ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ ಎಂದು ಹೇಳಲಾಗಿದೆ.
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…
ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…