ಕತ್ತಿಯಿಂದ ಕಡಿದು ನಾಲ್ವರ ಬರ್ಬರ ಹತ್ಯೆ ಮಾಡಿರುವ ಘಟನೆ ಇಂದು ಮಧ್ಯಾಹ್ನ ಕೊಡಗಿನ ಪೊನ್ನಂಪೇಟೆ ತಾಲೂಕು ಬೇಗೂರು ಗ್ರಾಮದಲ್ಲಿ ನಡೆದಿದೆ.
ತೋಟ ಕಾರ್ಮಿಕರಾಗಿರುವ ಕರಿಯ, ಗೌರಿ, ನಾಗಿ, 6 ವರ್ಷದ ಕಾವೇರಿ ಹತ್ಯೆಗೀಡಾದವರಾಗಿದ್ದಾರೆ.
ಕಾರ್ಮಿಕ ಗಿರೀಶ್ ಎಂಬುವನಿಂದ ಈ ಭೀಕರ ಕೃತ್ಯ ನಡೆದಿದೆ ಎಂದು ಹೇಳಲಾಗಿದೆ.
ಸ್ಥಳಕ್ಕೆ ಪೊನ್ನಂಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ.
ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಕೇರಳ ರಾಜ್ಯದ ವೈನಾಡು ಜಿಲ್ಲೆಯ ತಾಲಪೋಯ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಅಲ್ಲಿನ ಪೊಲೀಸ್ ಠಾಣೆಯ ಎ ಎಸ್ ಐ ಟಿ. ಅನೀಶ್, ವಿಶೇಷ ಶಾಖೆಯ ಠಾಣಾಧಿಕಾರಿಯಾದ ಜಿ ಅನಿಲ್, ಸಿಬ್ಬಂದಿ ಶಫೀರ್ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿ ಗಿರೀಶ್ ವೈನಾಡು ಜಿಲ್ಲೆಯ ತಿರುನಲ್ಲಿಯ ಉಣಿತು ಪರಂಬು ಗ್ರಾಮದವನಾಗಿದ್ದಾನೆ ಎಂದು ಹೇಳಲಾಗಿದೆ.
ಕೂಲಿ ಕೆಲಸಕ್ಕಾಗಿ ಇವರೆಲ್ಲ ಕೊಡಗಿಗೆ ಬಂದು ಬೇಗೂರು ಗ್ರಾಮದಲ್ಲಿ ನೆಲೆಸಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ .
ಇದೀಗ ಕೇರಳ ಪೊಲೀಸರು ಕರ್ನಾಟಕ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ ಎಂದು ಹೇಳಲಾಗಿದೆ.
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…