ಒಂದೇ ಕುಟುಂಬದ ನಾಲ್ವರು ಮಲಗಿದ್ದ ಮಗ್ಗಲಲ್ಲೇ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊಲೆಯರಳ್ಳಿ ಬಳಿಯ ಕೋಳಿಫಾರಂನಲ್ಲಿ ನಡೆದಿದೆ.
ನೇಪಾಳ ಮೂಲದವರಾದ ಕಾಲೇ ಸರೇರಾ, ಲಕ್ಷ್ಮಿ ಸರೇರಾ, ಉಷಾ ಸರೇರಾ, ಪೂಲ್ಸರೇರಾ ಎಂದು ಗುರುತಿಸಲಾಗಿದೆ.
ಇಂದು ಬೆಳಗ್ಗೆ ಕೋಳಿ ಫಾರಂ ಮಾಲೀಕ ಕರೆ ಮಾಡಿದಾಗ ಕರೆ ಸ್ವೀಕರಿಸದೆ ಇದ್ದು, ಇದರಿಂದ ಅನುಮಾನಗೊಂಡು ಪಕ್ಕದ ಊರಿನ ಕೋಳಿ ಫಾರಂನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮೃತ ಸಂಬಂಧಿಕರಿಗೆ ಕರೆ ಮಾಡಿದ್ದಾರೆ.
ಅವರು ಶೆಡ್ ಕಿಟಕಿ ಬಳಿ ನೋಡಿದಾಗ, ಮಲಗಿದ್ದವರು, ಮಲಗಿದ್ದಂತೆಯೇ ಸಾವನಪ್ಪಿರುವುದು ಕಂಡುಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸೊಳ್ಳೆ ಕಾಟಕ್ಕಾಗಿ ಹಾಕಿದ್ದ ಹೊಗೆಯಿಂದ ನಾಲ್ವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮೇಲ್ನೋಟಕ್ಕೆ ಶಂಕೆ ವ್ಯಕ್ತಪಡಿಸಿದ್ದಾರೆ.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…