ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವು: ಹೊಲೆಯರಳ್ಳಿ ಕೋಳಿ ಫಾರಂನಲ್ಲಿ ಘಟನೆ

ಒಂದೇ ಕುಟುಂಬದ ನಾಲ್ವರು ಮಲಗಿದ್ದ ಮಗ್ಗಲಲ್ಲೇ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ದೊಡ್ಡಬೆಳವಂಗಲ‌ ಪೊಲೀಸ್ ಠಾಣಾ ವ್ಯಾಪ್ತಿಯ ಹೊಲೆಯರಳ್ಳಿ ಬಳಿಯ ಕೋಳಿಫಾರಂನಲ್ಲಿ ನಡೆದಿದೆ.

ನೇಪಾಳ ಮೂಲದವರಾದ ಕಾಲೇ ಸರೇರಾ, ಲಕ್ಷ್ಮಿ ಸರೇರಾ, ಉಷಾ ಸರೇರಾ, ಪೂಲ್‌ಸರೇರಾ ಎಂದು ಗುರುತಿಸಲಾಗಿದೆ.

ಕೋಳಿ ಫಾರಂನಲ್ಲಿ ಕೆಲಸಕ್ಕೆಂದು ವಾರದಿಂದಷ್ಟೇ ಬಂದಿದ್ದರು. ರಾತ್ರಿ ಶೆಡ್ ಬಾಗಿಲು ಹಾಕಿಕೊಂಡು ಮಲಗಿದವರು ಸಾವನಪ್ಪಿದ್ದಾರೆ ಎನ್ನಲಾಗಿದೆ.

ಇಂದು ಬೆಳಗ್ಗೆ ಕೋಳಿ ಫಾರಂ ಮಾಲೀಕ ಕರೆ ಮಾಡಿದಾಗ ಕರೆ ಸ್ವೀಕರಿಸದೆ ಇದ್ದು, ಇದರಿಂದ ಅನುಮಾನಗೊಂಡು ಪಕ್ಕದ ಊರಿನ ಕೋಳಿ ಫಾರಂ‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮೃತ ಸಂಬಂಧಿಕರಿಗೆ ಕರೆ ಮಾಡಿದ್ದಾರೆ.

ಅವರು ಶೆಡ್ ಕಿಟಕಿ ಬಳಿ ನೋಡಿದಾಗ, ಮಲಗಿದ್ದವರು, ಮಲಗಿದ್ದಂತೆಯೇ ಸಾವನಪ್ಪಿರುವುದು ಕಂಡುಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಒಂದೇ ಕುಟುಂಬದ ನಾಲ್ವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲವಾಗಿದ್ದು, ದೊಡ್ಡಬೆಳವಂಗಲ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಹರೀಶ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಸೊಳ್ಳೆ ಕಾಟಕ್ಕಾಗಿ ಹಾಕಿದ್ದ ಹೊಗೆಯಿಂದ ನಾಲ್ವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮೇಲ್ನೋಟಕ್ಕೆ ಶಂಕೆ ವ್ಯಕ್ತಪಡಿಸಿದ್ದಾರೆ.

Ramesh Babu

Journalist

Recent Posts

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

34 minutes ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

5 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

6 hours ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

7 hours ago

ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

ಹೊಸಕೋಟೆ: ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…

8 hours ago

ಸಮಾಜ ಕಲ್ಯಾಣ ಇಲಾಖೆ: ಸಚಿವ ಸಂಪುಟದ ಪ್ರಬಲ ಖಾತೆ, ಕೆ.ಎಚ್. ಮುನಿಯಪ್ಪ ಆಸಕ್ತಿ ಏಕೆ?

ಬೆಂಗಳೂರು ಗ್ರಾಮಾಂತರ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಆಹಾರ ಮತ್ತು ನಾಗರಿಕ…

9 hours ago