ಮೈಸೂರಿನ ತಿ. ನರಸೀಪುರ ತಾಲೂಕಿನ ಕೆಂಪಯ್ಯನ ಹುಂಡಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಶಿವಣ್ಣ, ನಾಗರತ್ನ ಹಾಗೂ ಅವರ ಪುತ್ರಿ ರಕ್ಷಿತಾ ಮೃತ ದುರ್ದೈವಿಗಳಾಗಿದ್ದಾರೆ.
ಕುಟುಂಬದವರು ಡೆತ್ ನೋಟ್ ಬರೆದಿಟ್ಟು ತಮ್ಮ ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಅದೇ ಗ್ರಾಮದ ಉಲ್ಲಾಸ್ ಗೌಡ ಎಂಬಾತನ ಕಿರುಕುಳ ಹಾಗೂ ಮಾನಸಿಕ ಹಿಂಸೆಯಿಂದ ಬೇಸತ್ತು ಈ ನಿರ್ಧಾರ ಕೈಗೊಂಡಿರುವುದಾಗಿ ಡೆತ್ ನೋಟ್ನಲ್ಲಿ ಉಲ್ಲೇಖಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಕ್ಷಿತಾಗೆ ಮದುವೆ ನಿಶ್ಚಯವಾಗಿದ್ದು, ಆಕೆಯ ಕೆಲವು ಫೋಟೋಗಳು ಮತ್ತು ಮೆಸೇಜ್ಗಳನ್ನು ಇಟ್ಟುಕೊಂಡು ಕಿರುಕುಳ ನೀಡಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ಅಲ್ಲದೇ ಮದುವೆ ನಿಶ್ಚಯವಾಗಿದ್ದ ಯುವಕನಿಗೂ ಆ ಮಾಹಿತಿ ಕಳುಹಿಸಲಾಗಿತ್ತು ಎನ್ನಲಾಗಿದೆ.
ಈ ಬೆಳವಣಿಗೆಯಿಂದ ಮನನೊಂದ ಕುಟುಂಬ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ವರುಣಾ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ತನಿಖೆಯ ನಂತರವೇ ಸ್ಪಷ್ಟವಾಗಲಿದೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…